Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಿಯ ವ್ಯಕ್ತಿಯ ಕುತ್ತಿಗೆಗೆ...

ಕರಿಯ ವ್ಯಕ್ತಿಯ ಕುತ್ತಿಗೆಗೆ ಮೊಣಕಾಲಿಟ್ಟು ಕೊಂದ ಪೊಲೀಸ್ ಅಧಿಕಾರಿ

ಅಮೆರಿಕದಲ್ಲಿ ಭಾರೀ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 May 2020 9:58 PM IST
share
ಕರಿಯ ವ್ಯಕ್ತಿಯ ಕುತ್ತಿಗೆಗೆ ಮೊಣಕಾಲಿಟ್ಟು ಕೊಂದ ಪೊಲೀಸ್ ಅಧಿಕಾರಿ

ವಾಶಿಂಗ್ಟನ್, ಮೇ 27: ಕೈಕೋಳ ಹಾಕಲ್ಪಟ್ಟ ಕರಿಯ ವ್ಯಕ್ತಿಯೋರ್ವನ ಕುತ್ತಿಗೆಯ ಮೇಲೆ ಮೊಣಕಾಲೂರಿ ಪೊಲೀಸ್ ಅಧಿಕಾರಿಯೊಬ್ಬ ಕುಳಿತು ಆ ವ್ಯಕ್ತಿಯ ಸಾವಿಗೆ ಕಾರಣವಾದ ಘಟನೆ ಅಮೆರಿಕದ ಮಿನಪೊಲಿಸ್ ನಗರದಲ್ಲಿ ಸೋಮವಾರ ನಡೆದಿದೆ. ಈ ಘಟನೆಯ ಬೆನ್ನಿಗೇ ಆಫ್ರಿಕನ್ ಅಮೆರಿಕನ್ನರನ್ನು ಅಮೆರಿಕದ ಪೊಲೀಸರು ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ದೇಶದಲ್ಲಿ ಹೊಸದಾಗಿ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸ್ ಕಸ್ಟಡಿಯಲ್ಲಿ ಜಾರ್ಜ್ ಫ್ಲಾಯ್ಡಾ ಸತ್ತ ಬಳಿಕ, ಮಿನಪೊಲಿಸ್ ಮೇಯರ್ ಜಾಕೋಬ್ ಫ್ರೇ ನಾಲ್ವರು ಪೊಲೀಸರನ್ನು ವಜಾಗೊಳಿಸಿದ್ದಾರೆ.

ಮಿನಪೊಲಿಸ್ ನಗರದ ರಸ್ತೆಯೊಂದರಲ್ಲಿ ಪೊಲೀಸರು ಶಂಕಿತನ ಅಂಗಿಯನ್ನು ತೆಗೆದು ಕೈಕೋಳ ಹಾಕಿ ಕೆಳಗೆ ಕೆಡವುತ್ತಾರೆ ಹಾಗೂ ಓರ್ವ ಪೊಲೀಸ್ ಅಧಿಕಾರಿ ತನ್ನ ಮೊಣಕಾಲನ್ನು ಆತನ ಕುತ್ತಿಗೆಯ ಮೇಲೆ ಊರುತ್ತಾನೆ.

“ನಿಮ್ಮ ಮೊಣಕಾಲು ನನ್ನ ಕುತ್ತಿಗೆಯ ಮೇಲಿದೆ. ನನಗೆ ಉಸಿರಾಡಲು ಆಗುತ್ತಿಲ್ಲ” ಎಂದು ಫ್ಲಾಯ್ಡಾ ಹೇಳುವುದು ವೀಡಿಯೊದಲ್ಲಿ ಕೇಳಿಸುತ್ತದೆ. ಆದರೆ, ಪೊಲೀಸರು ಅದನ್ನು ಕಿವಿಯ ಮೇಲೆ ಹಾಕಿಕೊಳ್ಳುವುದಿಲ್ಲ.

ಬಳಿಕ ಫ್ಲಾಯ್ಡಾ ಮೌನವಾಗುತ್ತಾರೆ ಹಾಗೂ ಅವರ ದೇಹ ನಿಧಾನವಾಗಿ ಚಲನೆಯನ್ನು ಕಳೆದುಕೊಳ್ಳುತ್ತದೆ. ಆಗ ಪೊಲೀಸರು ಶಂಕಿತನಿಗೆ ಹೇಳುತ್ತಾರೆ: ಎದ್ದು ಕಾರಿನೊಳಗೆ ಹೋಗು. ಯಾವುದೇ ಸ್ಪಂದನೆಯಿಲ್ಲದಾಗ ಅವರನ್ನು ಆಸ್ಪತ್ರೆಗೆ ಸೇರಿಸಲಾಗುತ್ತದೆ. ಅಲ್ಲಿ ಆತನ ಸಾವನ್ನು ವೈದ್ಯರು ಘೋಷಿಸುತ್ತಾರೆ.

ಪೊಲೀಸ್ ಅಧಿಕಾರಿಗಳ ವಿರುದ್ಧ ಕೊಲೆ ಮೊಕದ್ದಮೆ ದಾಖಲಾಗಬೇಕು ಎಂಬ ಬೇಡಿಕೆ ಕ್ಷಣಕ್ಷಣಕ್ಕೆ ಬೆಳೆಯುತ್ತಿದೆ.

ಕರಿಯನಾಗಿರುವುದಕ್ಕೆ ಅಮೆರಿಕದಲ್ಲಿ ಮರಣ ದಂಡನೆ ವಿಧಿಸಬಾರದು

ಘಟನೆಯ ಬಗ್ಗೆ ಮಿನಪೊಲಿಸ್ ಮೇಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಾನು ಏನು ನೋಡಿದ್ದೇನೋ ಅದು ಎಲ್ಲ ವಿಧದಲ್ಲೂ ತಪ್ಪಾಗಿದೆ” ಎಂದು ಮೇಯರ್ ಜಾಕೋಬ್ ಫ್ರೇ ಹೇಳಿದ್ದಾರೆ.

ಬಿಳಿಯ ಪೊಲೀಸ್ ಅಧಿಕಾರಿಯೊಬ್ಬ ಕರಿಯ ವ್ಯಕ್ತಿಯೋರ್ವನ ಕುತ್ತಿಗೆಯ ಮೇಲೆ ಮೊಣಕಾಲಿನಿಂದ ಒತ್ತುವುದನ್ನು ಐದು ನಿಮಿಷ ನಾವು ನೋಡಿದ್ದೇವೆ ಎಂದು ಅವರು ಹೇಳಿದರು.

ಕರಿಯನಾಗಿರುವುದಕ್ಕೆ ಅಮೆರಿಕದಲ್ಲಿ ಮರಣ ದಂಡನೆ ವಿಧಿಸಬಾರದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X