Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಧಿ, ಬೇಳೆ ವಿತರಿಸದ ಪಡಿತರ ಅಂಗಡಿಗಳ...

ಗೋಧಿ, ಬೇಳೆ ವಿತರಿಸದ ಪಡಿತರ ಅಂಗಡಿಗಳ ವಿರುದ್ಧ ಕ್ರಮ : ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ27 May 2020 10:55 PM IST
share
ಗೋಧಿ, ಬೇಳೆ ವಿತರಿಸದ ಪಡಿತರ ಅಂಗಡಿಗಳ ವಿರುದ್ಧ ಕ್ರಮ : ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಮೂರ್ತಿ

ಉಡುಪಿ, ಮೇ 27: ಉಡುಪಿ ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ಅಕ್ಕಿ ಜೊತೆ ಏಪ್ರಿಲ್ ತಿಂಗಳಲ್ಲಿ ಗೋಧಿ ಹಾಗೂ ಮೇ ತಿಂಗಳಲ್ಲಿ ಬೇಳೆ ವಿತರಿಸದೆ ಇರುವುದು ಪರಿಶೀಲನೆ ಸಂದರ್ಭ ಕಂಡುಬಂದಿದ್ದು ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಉಡುಪಿಯ ಪ್ರವಾಸಿ ಮಂದಿರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಪ್ರಿಲ್ ತಿಂಗಳಲ್ಲಿ 10 ಕೆ.ಜಿ. ಅಕ್ಕಿ ಜೊತೆ ನಾಲ್ಕು ಕೆ.ಜಿ. ಗೋಧಿ ಮತ್ತು ಮೇ ತಿಂಗಳಲ್ಲಿ ಅಕ್ಕಿ ಜೊತೆ ಎರಡು ಕೆ.ಜಿ. ಬೇಳೆ ನೀಡಲು ಸರಕಾರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇವು ಗಳನ್ನು ಸಂಬಂಧಪಟ್ಟ ಇಲಾಖೆ ಜಿಲ್ಲೆಯ ಪಡಿತರ ಅಂಗಡಿಗಳಿಗೆ ಪೂರೈಕೆ ಮಾಡಿದೆ. ಆದರೆ ಗೋಧಿ ಮತ್ತು ಬೇಳೆ ಫಲಾ ನುಭವಿಗಳಿಗೆ ಪಡಿತರ ಅಂಗಡಿ ಗಳಲ್ಲಿ ನೀಡಿಲ್ಲ ಎಂಬುದು ತಿಳಿದು ಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿ ಗಳ ಗಮನಕ್ಕೂ ತರಲಾಗಿದೆ ಎಂದರು.

ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ರಾಜ್ಯ ಸರಕಾರ ನಿಗದಿಪಡಿಸಿದ ಸಮಯದ ಬದಲು ಇತರೇ ಸಮಯದಲ್ಲಿ ಪಡಿತರ ವಿತರಿಸುತ್ತಿರುವುದು ಮತ್ತು ಕೆಲವು ಪಡಿತರ ಅಂಗಡಿಗಳಲ್ಲಿ ದಾಸ್ತಾನು ವ್ಯತ್ಯಾಸ ಕಂಡು ಬಂದಿದೆ. ಅಂಗನ ವಾಡಿಗಳಲ್ಲಿ ನೀಡುವ ಆಹಾರದ ವಿತರಣೆಯಲ್ಲಿ ಸ್ವಲ್ಪ ವ್ಯತ್ಯಾಸಗಳಾಗಿವೆ. ಆಯೋಗ ಸೂಚಿಸಿರುವ ಪ್ರಿಂಟೆಡ್ ರಿಜಿಸ್ಟಾರ್‌ಗಳಲ್ಲಿ ವಿತರಣೆಯ ವಿವರಗಳನ್ನು ಕುರಿತು ದಾಖಲಿಸುತ್ತಿಲ್ಲ ಎಂದು ಅವರು ದೂರಿದರು.

ರಾಜ್ಯ ಮತ್ತು ಕೇಂದ್ರ ಸರಕಾರಗಳು ಪಡಿತರ ಚೀಟಿದಾರರಿಗೆ, ಶಾಲೆಗಳಿಗೆ, ಅಂಗನವಾಡಿಗಳಿಗೆ, ಹಾಸ್ಟೆಲ್ಗಳಿಗೆ ನೀಡುತ್ತಿರುವ ಉಚಿತ ಆಹಾರದ ಸಮ ರ್ಪಕ ವಿತರಣೆ ಮತ್ತು ಅಲ್ಲಿನ ಲೋಪದೋಷಗಳ ಕುರಿತು ಆಹಾರ ಆಯೋಗ ಪರಿಶೀಲನೆ ನಡೆಸುತ್ತಿದೆ. ಕೋವಿಡ್ -19 ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪಡಿತರ ವಿತರಣೆ ಪರಿಶೀಲನೆ ನಡೆಸಲಾಗಿದೆ. ಈವರೆಗೆ 11 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ ಎಂದು ಆಯೋಗದ ಸದಸ್ಯ ಶಿವಶಂಕರ್ ತಿಳಿಸಿದರು.

ಸರಕಾರದಿಂದ ಸಿಗುವ ಉಚಿತ ಅಕ್ಕಿಯನ್ನು ಫಲಾನುಭವಿಗಳು, ಬೇರೆಯ ವರಿಗೆ ಮಾರಾಟ ಮಾಡುವ ಮೂಲಕ ಕಾರ್ಡ್‌ನ್ನು ದುರುಪಯೋಗ ಪಡಿಸಿ ಕೊಂಡಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲು ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಅಧಿಕಾರ ಇದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ ಉಪಸ್ಥಿತರಿದ್ದರು.

ಧಾನ್ಯಗಳ ವಿವರ ಕಡ್ಡಾಯ ಪ್ರದರ್ಶನ

ಪಡಿತರ ಅಂಗಡಿಗಳ ಮೂಲಕ ಸರಕಾರ ನೀಡುವ ನಿಗದಿತ ಪ್ರಮಾಣದ ಪಡಿತರ ಪಡೆಯುವುದು ಪ್ರತಿಯೊಬ್ಬ ಪಡಿತರ ಚೀಟಿದಾರರನ ಹಕ್ಕು ಆಗಿದೆ. ಆದುದರಿಂದ ಜಿಲ್ಲೆಯ ಎಲ್ಲಾ ಪಡಿತರ ಅಂಗಡಿಗಳ ಮುಂದೆ, ಪಡಿತರ ವಿತರಿಸುವ ಪ್ರಮಾಣ ಮತ್ತು ವಿತರಿಸುವ ಧಾನ್ಯಗಳ ವಿವರ ಗಳನ್ನು ತಕ್ಷಣ ದಿಂದಲೇ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಡಾ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಅದೇ ರೀತಿ ಪ್ರತಿಯೊಂದು ಪಡಿತರ ಅಂಗಡಿಗೆ ಜಾಗೃತಿ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಯ ಸದಸ್ಯರ ಸಂಪೂರ್ಣ ವಿವರಗಳನ್ನು ಕೂಡ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಪಡಿತರ ಚೀಟಿದಾರರ ಹಾಗೂ ನ್ಯಾಯಬೆಲೆ ಅಂಗಡಿ ಮಾಲಕರ ಸಭೆ ನಡೆಸುವದರ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X