Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್​ಡೌನ್: ಪ್ರವಾಸೋದ್ಯಮ ನಂಬಿದ್ದ...

ಲಾಕ್​ಡೌನ್: ಪ್ರವಾಸೋದ್ಯಮ ನಂಬಿದ್ದ ಟ್ರಾವೆಲ್ ಉದ್ಯಮ ಸಂಕಷ್ಟದಲ್ಲಿ

ವಾರ್ತಾಭಾರತಿವಾರ್ತಾಭಾರತಿ28 May 2020 12:01 AM IST
share
ಲಾಕ್​ಡೌನ್: ಪ್ರವಾಸೋದ್ಯಮ ನಂಬಿದ್ದ ಟ್ರಾವೆಲ್ ಉದ್ಯಮ ಸಂಕಷ್ಟದಲ್ಲಿ

ಬೆಂಗಳೂರು, ಮೇ 27: ಕೋವಿಡ್-19 ವೈರಸ್ ಸುಳಿಗೆ ಸಿಲುಕಿ ಎಲ್ಲಾ ಉದ್ಯಮಗಳು ಮತ್ತೆ ಕಾರ್ಯಾರಂಭ ಮಾಡುತ್ತಿವೆ. ಆದರೆ, ಟ್ರಾವೆಲ್ ಏಜೆನ್ಸಿಗಳು ಮಾತ್ರ ಬಾಗಿಲು ತೆರೆಯದ ಸ್ಥಿತಿಯಲ್ಲೇ ಇವೆ. ಪ್ರವಾಸೋದ್ಯಮವನ್ನೇ ನಂಬಿರುವ ಟ್ರಾವೆಲ್ ಉದ್ಯಮ ತಕ್ಷಣಕ್ಕೆ ಪ್ರಾರಂಭವಾಗುವ ಲಕ್ಷಣ ಕಾಣುತ್ತಿಲ್ಲ.

ರಾಜ್ಯದಲ್ಲಿ ಪ್ರವಾಸದ ಸೀಸನ್‍ನಲ್ಲಿ ಲಾಕ್‍ಡೌನ್ ಆರಂಭವಾಗಿರುವುದರಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳು ಆದಾಯವಿಲ್ಲದೆ ಟ್ರಾವೆಲ್ ಏಜೆನ್ಸಿಯವರು ಕಾಲ ದೂಡಿದರು. ಈಗ ಲಾಕ್‍ಡೌನ್ ಸಡಿಲಿಕೆಯಾದರೂ ಸೋಂಕು ಭೀತಿಯಿಂದ ಜನರು ಪ್ರವಾಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ಮುಂದಿನ 6 ತಿಂಗಳು ಪ್ರವಾಸೋದ್ಯಮಕ್ಕೆ ಕಂಟಕ ಎದುರಾಗಲಿದೆ. ವಿಶೇಷವಾಗಿ ಅಂತರ್ ರಾಷ್ಟ್ರೀಯ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುವುದು ಅನುಮಾನ. ರಾಜ್ಯದ ಜನರೂ ವಿದೇಶ ಪ್ರವಾಸ ಕೈಗೊಳ್ಳಲು ಹಿಂದೇಟು ಹಾಕುವುದರಿಂದ ಟ್ರಾವೆಲ್ ಏಜೆನ್ಸಿಗಳು ಬಾಗಿಲು ತೆರೆದರೂ ಅನಗತ್ಯ ವೆಚ್ಚ ಹೆಚ್ಚಾಗುವ ಆತಂಕದಲ್ಲಿದ್ದಾರೆ.

ಉದ್ಯೋಗದ ಮೇಲೆ ಕರಿನೆರಳು: ಜಗತ್ತಿನಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ನೀಡುವುದು ಪ್ರವಾಸೋದ್ಯಮ. ರಾಜ್ಯದಲ್ಲಿ ಸುಮಾರು 2-3 ಸಾವಿರಕ್ಕೂ ಹೆಚ್ಚು ಟ್ರಾವೆಲ್ ಏಜೆನ್ಸಿಗಳಿದ್ದು, ಲಕ್ಷಾಂತರ ಜನರು ಸ್ವಂತ ಟ್ಯಾಕ್ಸಿ ಇಟ್ಟುಕೊಂಡು ಪ್ರವಾಸಿಗರನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಅಲ್ಲದೆ, ವಿಶ್ವ ಪ್ರಸಿದ್ದ ಹಾಗೂ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಟ್ರಾವೆಲ್ ಗೈಡ್‍ಗಳಾಗಿ, ಪ್ರವಾಸಿ ತಾಣಗಳಲ್ಲಿ ಸ್ಥಳೀಯ ಉತ್ಪನ್ನ ಮಾರಾಟ ಮಾಡುವವರು, ಹೊಟೇಲ್‍ಗಳು, ಪ್ರವಾಸಿಗರನ್ನೇ ನಂಬಿರುವ ಗುಡಿ ಕೈಗಾರಿಕೆಗಳಿಂದ ತಯಾರಿಸುವ ಉತ್ಪನ್ನಗಳನ್ನು ಮಾಡಿ ಮಾರಾಟ ಮಾಡುವವರು ಸೇರಿದಂತೆ ಲಕ್ಷಾಂತರ ಜನರ ಬದುಕು ಲಾಕ್‍ಡೌನ್ ಮುಗಿದರೂ ಚೇತರಿಕೆ ಕಷ್ಟ ಸಾಧ್ಯವಾಗಿದೆ.

ಪರಿಗಣನೆಯಾಗದ ಉದ್ಯಮ: ಪ್ರವಾಸಿಗರಿಗೆ ಜಗತ್ತನ್ನು ನೋಡಲು ದಾರಿ ತೋರುವ ಟ್ರಾವೆಲ್ ಏಜೆನ್ಸಿಗಳು ಒಂದು ಉದ್ಯಮವಾಗಿ ಬೆಳೆಯುವಲ್ಲಿ ವಿಫಲವಾಗಿದ್ದು, ಕೇಂದ್ರ ಸರಕಾರವೂ ಟ್ರಾವೆಲ್ ಏಜೆನ್ಸಿಗಳನ್ನು ಎಂಎಸ್‍ಎಂಇ ಪಟ್ಟಿಯಲ್ಲೂ ಸೇರಿಸುವುದರಿಂದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸರಕಾರದಿಂದ ಯಾವುದೇ ರೀತಿಯ ಪರಿಹಾರ ಸಿಗದಂತಾಗಿದೆ ಎಂದು ಏಜೆನ್ಸಿ ಮಾಡಿಕೊಂಡಿರುವವರು ಆರೋಪಿಸುತ್ತಿದ್ದಾರೆ.

ಉತ್ತೇಜನಕ್ಕೆ ಪ್ರಯತ್ನ: ಕೆಲವು ರಾಷ್ಟ್ರಗಳು ಕೋವಿಡ್-19 ಸಂಕಷ್ಟದಿಂದ ಹೊರ ಬರಲು ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ ನೀಡಲು ಮುಂದಾಗುತ್ತಿವೆ. ಈಗಾಗಲೇ ಜಪಾನ್ ವಿದೇಶಿ ಪ್ರವಾಸಿಗರ ಪ್ರಯಾಣ, ಪ್ರವಾಸಕ್ಕೆ ಶೇ.50 ರಿಯಾಯ್ತಿ ನೀಡುವುದಾಗಿ ಘೋಷಣೆ ಮಾಡಿದೆ. ಕೇಂದ್ರ-ರಾಜ್ಯ ಸರಕಾರ ಅದೇರೀತಿ ಪ್ರವಾಸಿಗರನ್ನು ಆಕರ್ಷಿಸಲು ಈ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂಬ ಬೇಡಿಕೆ ಕೇಳಿ ಬರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X