Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳವೂರಿನಲ್ಲಿ ಕೊರೋನ ವೈರಸ್ ಹರಡಲು ಪಿಡಿಒ...

ಮಳವೂರಿನಲ್ಲಿ ಕೊರೋನ ವೈರಸ್ ಹರಡಲು ಪಿಡಿಒ ನಿರ್ಲಕ್ಷ್ಯ ಕಾರಣ : ಸಾರ್ವಜನಿಕರ ಆರೋಪ

ದ.ಕ. ಜಿಲ್ಲಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ28 May 2020 4:57 PM IST
share
ಮಳವೂರಿನಲ್ಲಿ ಕೊರೋನ ವೈರಸ್ ಹರಡಲು ಪಿಡಿಒ ನಿರ್ಲಕ್ಷ್ಯ ಕಾರಣ : ಸಾರ್ವಜನಿಕರ ಆರೋಪ

ಮಂಗಳೂರು, ಮೇ 28: ಮಳವೂರು ಗ್ರಾಪಂ ವ್ಯಾಪ್ತಿಯ ಕೆಂಜಾರು ಗ್ರಾಮದ ತಾಂಗಡಿ ಎಂಬಲ್ಲಿ ಹೊರ ರಾಜ್ಯದಿಂದ ಬಂದ ನಾಲ್ಕು ಮಂದಿಗೆ ಕೊರೋನ ವೈರಸ್ ತಗುಲಲು ಗ್ರಾಪಂ ಪಿಡಿಒ ಅವರೇ ನೇರ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಮೇ 8ರಂದು ಮುಂಬೈಯಿಂದ ಬಜ್ಪೆ ಸಮೀಪದ ಕೆಂಜಾರು ಗ್ರಾಮಕ್ಕೆ ಆಗಮಿಸಿದ್ದ ಒಂದೇ ಕುಟುಂಬಕ್ಕೆ ಸೇರಿದ 46 ವರ್ಷದ ವ್ಯಕ್ತಿ, 59 ವರ್ಷದ ಮಹಿಳೆ, 11 ವರ್ಷದ ಬಾಲಕಿ ಹಾಗೂ 3 ವರ್ಷದ ಮಗುವಿಗೆ ಸೋಂಕು ದೃಢಗೊಂಡಿತ್ತು. ಕೆಲವು ದಿನಗಳ ಹಿಂದೆ ಕೆಂಜಾರಿನ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಂಬೈಯ ನಾಲ್ಕು ಮಂದಿ ಕೆಂಜಾರಿನ ತಾಂಗಡಿಗೆ ಆಗಮಿಸಿದ್ದರು. ಹೊರ ರಾಜ್ಯದಿಂದ ಬಂದ ಇವರು ಕ್ವಾರಂಟೈನ್ ಕೇಂದ್ರದಲ್ಲಿರುವ ಬದಲು ನೇರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಮೇ 27ರಂದು ಈ ನಾಲ್ಕು ಮಂದಿಗೆ ಸೋಂಕು ಇರುವುದು ದೃಢಗೊಳ್ಳುತ್ತಲೇ ಸ್ಥಳೀಯರು ತೀವ್ರ ಆತಂಕಿತರಾಗಿದ್ದಾರೆ. ಅಂತ್ಯಸಂಸ್ಕಾರದ ಬಳಿಕ ಹೋಂ ಕ್ವಾರಂಟೈನ್‌ಗೊಳಪಡಿಸಿದರೂ ಕೂಡ ಮುಂಬೈಯಿಂದ ಬಂದಿದ್ದ ಇವರು ಊರಿಡೀ ತಿರುಗಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಮಧ್ಯೆ ನಾಲ್ಕು ಮಂದಿಗೆ ಸೋಂಕು ದೃಢಗೊಳ್ಳುತ್ತಲೇ ಅವರ ಜೊತೆ ಪ್ರಥಮ ಸಂಪರ್ಕದಲ್ಲಿದ್ದ 10 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸಲಾಗಿದೆ. ಅಲ್ಲದೆ ದ್ವಿತೀಯ ಸಂಪರ್ಕದಲ್ಲಿದ್ದ 25 ಮಂದಿಯನ್ನು ಹೋಂ ಕ್ವಾರಂಟೈನ್‌ಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪಿಡಿಒ ನಿರ್ಲಕ್ಷ ಕಾರಣ: ಹೊರ ರಾಜ್ಯದಿಂದ ಯಾರೇ ಬಂದರೂ ಕೂಡ 14 ದಿನಗಳ ಕಾಲ ಕ್ವಾರಂಟೈನ್‌ಗೊಳಪಡಿಸೇಕು ಎಂದು ಕೋವಿಡ್ 19ರ ನಿಯಮವಾಗಿದೆ. ಆದರೆ, ಈ ನಿಯಮವನ್ನು ಮಳವೂರು ಗ್ರಾಪಂ ಆಡಳಿತವು ಕಡೆಗಣಿಸಿದೆ. ಇದಕ್ಕೆ ಗ್ರಾಪಂ ಪಿಡಿಒ ವೆಂಕಟರಮಣ ಭಟ್ ಅವರ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮುಂಬೈಯಿಂದ ಬಂದ ನಾಲ್ಕು ಮಂದಿಯನ್ನು ಕ್ವಾರಂಟೈನ್‌ಗೊಳಪಡಿಸೇಕಿತ್ತು. ಆದರೆ ಅವರು ಮಹಿಳೆಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದಕ್ಕೆ ಗ್ರಾಪಂ ಆಡಳಿತವೇ ಕಾರಣವಾಗಿದೆ. ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಬಳಿಕ ಅವರನ್ನು ಜನನಿಬಿಡ ಪ್ರದೇಶದಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಹಾಗಿದ್ದೂ ಅವರು ಮನೆಯಲ್ಲಿರದೆ ಊರಿಡೀ ಸುತ್ತಾಡಿದ್ದಾರೆ. ಗ್ರಾಪಂ ಪಿಡಿಒ ಜವಾಬ್ದಾರಿ ನಿರ್ವಹಿಸಿದ್ದರೆ ಹೀಗಾಗುತ್ತಿರಲಿಲ್ಲ. ಹಾಗಾಗಿ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರಿಗೆ ಸ್ಥಳೀಯರು ದೂರು ನೀಡಿದ್ದಾರೆ.

ನನ್ನಲ್ಲಿ ಕೇಳಬೇಡಿ: ಈ ಬಗ್ಗೆ ಪ್ರತಿಕ್ರಿಯೆ ಬಯಸಲು ‘ವಾರ್ತಾಭಾರತಿ’ಯು ಪಿಡಿಒ ವೆಂಕಟರಮಣ ಭಟ್ ಅವರನ್ನು ಸಂಪರ್ಕಿಸಿದಾಗ ‘ಈ ಬಗ್ಗೆ ನನ್ನಲ್ಲಿ ಏನೂ ಕೇಳಬೇಡಿ. ಮೇಲಾಧಿಕಾರಿಗಳ ಬಳಿ ಕೇಳಿ’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X