Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ...

‘ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಸಾವಿರಾರು ಕೋಟಿ ರೂ.ಹಗರಣ’

ನ್ಯಾಯಾಂಗ ತನಿಖೆಗೆ ಎಎಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 May 2020 7:13 PM IST
share

ಬೆಂಗಳೂರು, ಮೇ 28: ಕೊರೋನ ಸೃಷ್ಟಿಸಿದ ಸಂಕಷ್ಟದಿಂದ ಜನರು ದಿನ ದೂಡುವುದಕ್ಕೆ ಒದ್ದಾಡುತ್ತಿದ್ದರೆ, ಇಂತಹ ಸಮಯವನ್ನೂ ಸಾರ್ವಜನಿಕರ ಹಣ ನುಂಗಲು ಬಕಪಕ್ಷಿಗಳಂತೆ ಹೊಂಚು ಹಾಕುವ ಅಧಿಕಾರಿಗಳನ್ನು ಕೂಡಲೆ ಹುದ್ದೆಯಿಂದ ವಜಾ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ಕೊಳ್ಳೆ ಹೊಡೆಯಲೆಂದೆ ಸರಕಾರದ ನಿಯಮಗಳಿಗೆ ರಿಯಾಯಿತಿಗಳನ್ನು ಬೇಕೆಂದೆ ನೀಡಲಾಗಿದೆ ಎನ್ನುವ ಅನುಮಾನ ಮೂಡುತ್ತಿದೆ. ಆರೋಗ್ಯ ಇಲಾಖೆಯು ಖರೀದಿಗೆ ಮುನ್ನ ಪ್ರಯೋಗಾಲಯಗಳಲ್ಲಿ ಗುಣಮಟ್ಟದ ಪರೀಕ್ಷೆಗಳನ್ನು ನಡೆಸದೆ ಕೇವಲ ದರ ಪಟ್ಟಿಯ ಆಧಾರದಲ್ಲಿ ಕಮಿಷನ್ ಆಸೆಗಾಗಿ ನಿಯಮ ಬಾಹಿರವಾಗಿ, ತರಾತುರಿಯಲ್ಲಿ ಆದೇಶ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ, ಸಾರ್ವಜನಿಕರ ಜೀವನದಲ್ಲಿ ಚೆಲ್ಲಾಟವಾಡಲಾಗಿದೆ. ಈ ಕೃತ್ಯವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಕಳಪೆ ಗುಣಮಟ್ಟದ ಪರೀಕ್ಷಾ ಕಿಟ್‍ಗಳನ್ನು ಖರೀದಿ ಮಾಡಿದ ಪರಿಣಾಮವಾಗಿ ಕರ್ನಾಟಕದಲ್ಲಿ ಸರಿಯಾದ ರೀತಿಯಲ್ಲಿ ಪರೀಕ್ಷೆಗಳು ನಡೆದಿಲ್ಲ. ಹಾಗೂ ತಪ್ಪು ಗ್ರಹಿಕೆಯ ವರದಿಗಳು ಬಂದಿರುವ ಕಾರಣದಿಂದ ಕೊರೋನ ಸೋಂಕು ಸಮುದಾಯಕ್ಕೆ ಹರಡಿರುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಕಳಪೆ ಕಿಟ್‍ಗಳ ಖರೀದಿಯೆ ಕಾರಣ. ಶ್ರೇಷ್ಠತೆಯ ವ್ಯಸನಕ್ಕೆ ಬಿದ್ದು ಕೊರೋನ ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ ಎಂದು ಸುಳ್ಳೇ ಸುಳ್ಳು ಮಾಹಿತಿ ಕೊಟ್ಟು ನಿಜವಾದ ಸೋಂಕಿತರ ಸಂಖ್ಯೆಯನ್ನು ರಾಜ್ಯ ಸರಕಾರ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಬಚ್ಚಿಡುತ್ತಿದ್ದಾರೆ ಎಂದು ಪಕ್ಷ ದೂರಿದೆ.

13 ವರ್ಷಗಳ ಹಳೆಯದಾದ ವೆಂಟಿಲೇಟರ್ ಖರೀದಿ, ದುಪ್ಪಟ್ಟು ಹಣ ನೀಡಿ ಸ್ಯಾನಿಟೈಜರ್ ಖರೀದಿ, ಕಪ್ಪು ಪಟ್ಟಿಗೆ ಸೇರಿರುವ ಕಂಪೆನಿಯಿಂದ ಗ್ಲೂಕೋಸ್ ಖರೀದಿ, ಸಿರೆಂಜ್‍ಗಳು ಸೇರಿದಂತೆ ಇತರೆ ವೈದ್ಯಕೀಯ ಸಲಕರಣೆಗಳ ಖರೀದಿ ಹೀಗೆ ಸಾಲು ಸಾಲು ಅವ್ಯವಹಾರಗಳು ಆಗುತ್ತಿ ದ್ದರೂ ಆರೋಗ್ಯ ಸಚಿವ ಶ್ರೀರಾಮುಲು ಅಥವಾ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಅಧಿಕಾರಿಗಳ ಮೇಲೆಯೆ ಸಂಪೂರ್ಣ ಅವಲಂಬಿತರಾಗಿ  ಕಣ್ಮುಚ್ಚಿ ಕುಳಿತಿರುವುದು ಬೇಜವಾಬ್ದಾರಿಯ ವರ್ತನೆ ಎಂದು ಆಮ್ ಆದ್ಮಿ ಪಕ್ಷ ಟೀಕಿಸಿದೆ.
ಮುಖ್ಯಮಂತ್ರಿಗಳೆ ಇರುವ ಸಮಿತಿಯ ಗೋಳು ಈ ಮಟ್ಟದ್ದಾದರೆ ಕೇವಲ ಅಧಿಕಾರಿಗಳೆ ಸರಕಾರ ನಡೆಸುವುದಾದರೆ ಚುನಾವಣೆಗಳು ನಡೆಸುವ ಅಗತ್ಯವಿದೆಯೇ. ಸರಕಾರಕ್ಕೆ ಸಚಿವ ಸಂಪುಟ ಏತಕ್ಕೆ? ಆಡಳಿತಕ್ಕೆ ಅಧಿಕಾರಿಗಳು ಸಾಕೇ? ಕಳಪೆ ಗುಣಮಟ್ಟದ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನನ್ನ ಪಾತ್ರ ಏನಿಲ್ಲ ಎಂದು ಹೇಳಿರುವ ಸಚಿವ ಶ್ರೀರಾಮುಲು, ಇದೆಲ್ಲ ಮುಖ್ಯಮಂತ್ರಿಗಳ, ಮುಖ್ಯ ಕಾರ್ಯದರ್ಶಿಗಳ ಉನ್ನತ ಮಟ್ಟದ ಅಧಿಕಾರಿಗಳ ಕೆಲಸ ಎಂದು ಹೇಳಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಹಾಗಾದರೆ ಒಂದು ಉನ್ನತ ಹಾಗೂ ದೊಡ್ಡ ಇಲಾಖೆಗೆ ಸಚಿವರ ಅಗತ್ಯ ಏನಿದೆ. ಸರಕಾರದ ಎಲ್ಲ ಸಚಿವರನ್ನು ಮನೆಗೆ ಕಳುಹಿಸಿ, ಕೇವಲ ಅಧಿಕಾರಿಗಳನ್ನು ಇಟ್ಟುಕೊಂಡು ಆಡಳಿತ ನಡೆಸಬಹುದಲ್ಲವೇ. ಇನ್ನು ಮುಂದಾದರೂ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ. ಹಗರಣದಲ್ಲಿ ನಿಮ್ಮ ಪಾತ್ರ ಏನಿಲ್ಲ ಎನ್ನುವುದಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡಿ. ಇಲ್ಲವಾದರೆ ನೀವೆ ಮುಂದೆ ನಿಂತು ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯ ಈ ರೀತಿಯ ನಿರ್ಲಕ್ಷ್ಯದಿಂದ ಸೋಂಕು ಹರಡಿದ್ದವರ ಮಾಹಿತಿ ಕಲೆಹಾಕಿ ಅಂತಹ ಸೋಂಕಿತರಿಗೆ ಪರಿಹಾರ ನೀಡುವ ವ್ಯವಸ್ಥೆ ಆಗಬೇಕು. ಈ ಪರಿಹಾರವನ್ನು ಭ್ರಷ್ಟ್ರಾಚಾರದಲ್ಲಿ ತೊಡಗಿದ್ದ ಅಧಿಕಾರಿಗಳಿಂದಲೆ ವಸೂಲಿ ಮಾಡಬೇಕು. ಇದ್ಯಾವುದರ ಪರಿವೆಯೆ ಇಲ್ಲದಂತೆ ಜಾಣ ಮೌನವಹಿಸಿರುವ ಮುಖ್ಯಮಂತ್ರಿ ಈ ಅವ್ಯವಹಾರಗಗಳ ಬಗ್ಗೆ ತಿಳಿದಿದ್ದರು ಯಾರ ವಿರುದ್ಧವೂ ಉಗ್ರ ಕ್ರಮಗಳನ್ನು ಕೈಗೊಳ್ಳದೆ ಯಾರದೋ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆಪ್ ದೂರಿದೆ. ಬಿಬಿಎಂಪಿ ಆಯುಕ್ತರ ವಿರುದ್ದ 400 ಕೋಟಿ ರೂ. ಕೊರೋನ ನೆಪದಲ್ಲಿ ದುರುಪಯೋಗ ಪಡಿಸಿಕೊಂಡ ಆರೋಪ ಇದೆ. ಇದರ ವಿರುದ್ದ ಈಗಾಗಲೇ ಎಸಿಬಿಯಲ್ಲಿ ದೂರು ದಾಖಲಾಗಿದೆ. ಮೇಲು ನೋಟಕ್ಕೆ ಇದು ಭಾರಿ ಮೊತ್ತದ ಹಗರಣ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಎಲ್ಲ ಸಂಗತಿಗಳನ್ನು ನೋಡಿದರೆ ಜನ ಸಾಮಾನ್ಯ ಹೇಗಾದರೂ ಬಡಿದಾಡಿ ಸಾಯಲಿ, ನಾವು ಚೆನ್ನಾಗಿದ್ದರೆ ಸಾಕು ಎನ್ನುವ ಈ ಧೋರಣೆ ಒಳ್ಳೆಯದಲ್ಲ ಎಂದು ಆಪ್ ಟೀಕಿಸಿದೆ. ಈ ಭ್ರಷ್ಟ್ರಾಚಾರದ ಬಗ್ಗೆ ರಾಜ್ಯಪಾಲರಿಗೂ ಆಮ್ ಆದ್ಮಿ ಪಕ್ಷ ದೂರನ್ನು ಸಲ್ಲಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ

ಶಾಸಕ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ನಡೆಸಿರುವ ತನಿಖೆಯ ಬದಲು ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಅದರ ಮೂಲಕ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X