Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಮ್ಮ ಉದ್ಯೋಗಿಗಳನ್ನು ಇದರಿಂದ ಹೊರಗಿಡಿ:...

ನಮ್ಮ ಉದ್ಯೋಗಿಗಳನ್ನು ಇದರಿಂದ ಹೊರಗಿಡಿ: ಟ್ರಂಪ್ ಜೊತೆ ಸಂಘರ್ಷಕ್ಕಿಳಿದ ಟ್ವಿಟರ್ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ28 May 2020 11:06 PM IST
share
ನಮ್ಮ ಉದ್ಯೋಗಿಗಳನ್ನು ಇದರಿಂದ ಹೊರಗಿಡಿ: ಟ್ರಂಪ್ ಜೊತೆ ಸಂಘರ್ಷಕ್ಕಿಳಿದ ಟ್ವಿಟರ್ ಮುಖ್ಯಸ್ಥ

ಸಾನ್‌ಫ್ರಾನ್ಸಿಸ್ಕೊ (ಅಮೆರಿಕ), ಮೇ 28: ಜಗತ್ತಿನಾದ್ಯಂತ ನಡೆಯುವ ಚುನಾವಣೆಗಳಿಗೆ ಸಂಬಂಧಿಸಿ, ಸತ್ಯವಲ್ಲದ ಅಥವಾ ವಿವಾದಿತ ಮಾಹಿತಿಗಳತ್ತ ಬೆಟ್ಟು ಮಾಡಿ ತೋರಿಸುವ ತನ್ನ ನಿರ್ಧಾರವನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾಕ್ ಡೊರ್ಸಿ ಮಂಗಳವಾರ ಪುನರುಚ್ಚರಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಟ್ವೀಟ್‌ಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಟ್ವಿಟರ್ ಓದುಗರಿಗೆ ಕರೆ ನೀಡಿದ ಬಳಿಕ ಎಲ್ಲ ಸಾಮಾಜಿಕ ಮಾಧ್ಯಮಗಳನ್ನು ಮುಚ್ಚುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಇದಾದ ಒಂದು ದಿನದ ಬಳಿಕ ತನ್ನ ನಿರ್ಧಾರವನ್ನು ಟ್ವಿಟರ್ ಮುಖ್ಯಸ್ಥರು ಪುನರುಚ್ಚರಿಸಿದ್ದಾರೆ.

ಡೊರ್ಸಿ ಮತ್ತು ಟ್ರಂಪ್ ನಡುವಿನ ಸಂಘರ್ಷ ತಾರಕಕ್ಕೆ ಏರುವ ಎಲ್ಲ ಲಕ್ಷಣಗಳು ಇರುವಂತೆಯೇ, ನಮ್ಮ ಉದ್ಯೋಗಿಗಳನ್ನು ಇದರಿಂದ ಹೊರಗಿಡಿ ಎಂಬುದಾಗಿ ಡೊರ್ಸಿ ಮನವಿ ಮಾಡಿದ್ದಾರೆ.

ವಾಸ್ತವಾಂಶ ತಪಾಸಣೆ: ಒಂದು ಕಂಪೆನಿಯಾಗಿ ನಮ್ಮ ಕೃತ್ಯಗಳಿಗೆ ಯಾರಾದರೊಬ್ಬರು ಉತ್ತರದಾಯಿ ಆಗಿರುತ್ತಾರೆ. ಅದು ನಾನೇ. ದಯವಿಟ್ಟು ನಮ್ಮ ಉದ್ಯೋಗಿಗಳನ್ನು ಇದರಿಂದ ಹೊರಗಿಡಿ. ಜಾಗತಿಕ ಮಟ್ಟದಲ್ಲಿ ನಡೆಯುವ ಚುನಾವಣೆಗಳ ಬಗ್ಗೆ ತಪ್ಪು ಅಥವಾ ವಿವಾದಿತ ಮಾಹಿತಿಯತ್ತ ಬೆಟ್ಟು ಮಾಡುವುದನ್ನು ನಾವು ಮುಂದುವರಿಸುತ್ತೇವೆ. ಅದೇ ವೇಳೆ, ನಾವು ಮಾಡುವ ಯಾವುದೇ ತಪ್ಪುಗಳನ್ನು ಒಪ್ಪಿಕೊಳ್ಳುತ್ತೇವೆ ಹಾಗೂ ಅವುಗಳ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇವೆ ಎಂದು ಡೊರ್ಸಿ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ಟ್ರಂಪ್ ಮಾಡಿರುವ ಎರಡು ಟ್ವೀಟ್‌ಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಟ್ವಿಟರ್ ಓದುಗರಿಗೆ ಸೂಚನೆ ನೀಡಿದ ಬಳಿಕ, ಟ್ವಿಟರ್ ಮತ್ತು ಟ್ರಂಪ್ ನಡುವೆ ಸಂಘರ್ಷ ಏರ್ಪಟ್ಟಿದೆ. ಅಂಚೆ ಮತಗಳ ಸಂಖ್ಯೆಯಲ್ಲಿ ಹೆಚ್ಚಳವಾದಂತೆ, ಈ ವರ್ಷದ ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿನ ಅವ್ಯವಹಾರಗಳೂ ಹೆಚ್ಚುತ್ತವೆ ಎಂಬುದಾಗಿ ಆ ಎರಡು ಟ್ವೀಟ್‌ಗಳಲ್ಲಿ ಟ್ರಂಪ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸುತ್ತಾ, ಚುನಾವಣೆಯಲ್ಲಿ ಅಕ್ರಮ ನಡೆಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂಬ ಆರೋಪಗಳಿಗೆ ಆಧಾರವಿಲ್ಲ ಎಂದು ಟ್ವಿಟರ್ ಹೇಳಿದೆ ಹಾಗೂ ಟ್ರಂಪ್ ಟ್ವೀಟ್‌ಗಳ ಕೆಳಗೆ, ಅಂಚೆ ಮತಗಳ ಕುರಿತ ವಾಸ್ತವ ಸಂಗತಿಗಳನ್ನು ಅರಿಯಿರಿ ಎಂಬ ತಲೆಬರಹದ ಲಿಂಕೊಂದನ್ನು ಹಾಕಿದೆ.

ಇದರಿಂದ ರೊಚ್ಚಿಗೆದ್ದ ಟ್ರಂಪ್, ಎಲ್ಲ ಸಾಮಾಜಿಕ ಮಾಧ್ಯಮ ಕಂಪೆನಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X