Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಲ್ಪ್ ಕನ್ನಡಿಗರ ನೆರವಿಗೆ ನಿಲ್ಲುವುದು...

ಗಲ್ಪ್ ಕನ್ನಡಿಗರ ನೆರವಿಗೆ ನಿಲ್ಲುವುದು ಸಹಾಯವಲ್ಲ, ಜವಾಬ್ದಾರಿ-ಕೃತಜ್ಞತೆಯಾಗಿದೆ: ಬಿ ಹ್ಯೂಮನ್ ಸ್ಥಾಪಕ ಆಸಿಫ್ ಡೀಲ್ಸ್

ವಾರ್ತಾಭಾರತಿವಾರ್ತಾಭಾರತಿ28 May 2020 11:39 PM IST
share
ಗಲ್ಪ್ ಕನ್ನಡಿಗರ ನೆರವಿಗೆ ನಿಲ್ಲುವುದು ಸಹಾಯವಲ್ಲ, ಜವಾಬ್ದಾರಿ-ಕೃತಜ್ಞತೆಯಾಗಿದೆ: ಬಿ ಹ್ಯೂಮನ್ ಸ್ಥಾಪಕ ಆಸಿಫ್ ಡೀಲ್ಸ್

ದಮಾಮ್ ನಿಂದ ಮಂಗಳೂರಿಗೆ ಬರಲಿರುವ ಮೊದಲ ವಿಮಾನ ಪ್ರಯಾಣಿಕರ ಪ್ರಯಾಣ ವೆಚ್ಚವನ್ನು ಭರಿಸಲಿರುವ ಸೌದಿಯ ಖ್ಯಾತ ಅನಿವಾಸಿ ಉದ್ಯಮಿಗಳಾದ ಅಲ್ತಾಫ್ ಉಳ್ಳಾಲ್ ಮತ್ತು ಬಶೀರ್ ಸಾಗರ್ ಅವರ ಸೇವೆಯು ಈ ದಿನದಲ್ಲಿ ಅತ್ಯಂತ ತುರ್ತು ಅಗತ್ಯ ಎನಿಸಿದೆ ಎಂದು ಟೀಂ ಬಿ ಹ್ಯೂಮನ್ ಸಂಸ್ಥೆಯ ಸ್ಥಾಪಕರಾದ ಆಸಿಫ್ ಡೀಲ್ಸ್ ಅಭಿಪ್ರಾಯಪಟ್ಟರು.

ಕೋವಿಡ್ - 19 ನಂತರ ಎನ್.ಆರ್.ಐಗಳು ಬಹಳ ಸಂಕಷ್ಟ ಪಡುತ್ತಿದ್ದು, ಅವರ ನೆರವಿಗೆ ದಾವಿಸುವುದು ನಮ್ಮ ಮೇಲೆ ಬಲು ದೊಡ್ಡ ಜವಾಬ್ದಾರಿಯಾಗಿದೆ ಎಂದ ಅವರು, ಕೆಲಸ ಮತ್ತು ವ್ಯವಹಾರ ಇದ್ದ ಕಾಲದಲ್ಲಿ ಊರಿನ ಪ್ರತಿಯೊಂದು ಒಳಿತಿನಲ್ಲೂ ತಮ್ಮ ತನು - ಮನ - ಧನದ ನೆರವು ನೀಡಿದ್ದ ಎನ್.ಆರ್.ಐಗಳಿಗೆ ಅಲ್ತಾಫ್ ಉಳ್ಳಾಲ್ ಮತ್ತು ಬಶೀರ್ ಅವರು ನೀಡುತ್ತಿರುವ ಈ ನೆರವು ಕೊಡುಗೆ ಎನ್ನುವುದಕ್ಕಿಂತ ಕರ್ತವ್ಯ ಮತ್ತು ಕೃತಜ್ಞತೆ ಎಂದು ಹೇಳುತ್ತೇನೆ ಎಂದವರು ಹೇಳಿದರು.

ಅಲ್-ಕೋಬರ್ ಮೂಲದ ಸಾಕೋ ಕಂಪೆನಿಯ ಎಂಡಿ ಆಗಿರುವ ಅಲ್ತಾಫ್ ಉಳ್ಳಾಲ್, ಸಿ.ಇ.ಒ ಆಗಿರುವ ಬಶೀರ್ ಸಾಗರ್ ಅವರು ಕೋವಿಡ್ ನಂತರದ ದಿನಗಳಲ್ಲಿ ಜಿಲ್ಲೆಯಲ್ಲಿ ಸದ್ದಿಲ್ಲದೆ ನಡೆಸಿದ ಸಮಾಜ ಸೇವೆಯನ್ನೂ ನಾನು ನೋಡಿದ್ದೇನೆ. ಸುಮಾರು ಆರು ಸಾವಿರ ಕುಟುಂಬಗಳಿಗೆ ರೇಷನ್ ಕಿಟ್ಟ್ ವಿತರಿಸಿದ್ದೂ ಅಲ್ಲದೇ  ಟೀಂ ಬಿ- ಹ್ಯೂಮನ್ ನ ಪ್ರತಿಯೊಂದು ಮಾನವೀಯ ಸೇವೆಯಲ್ಲೂ  ಜೊತೆ ನಿಂತವರು. ಅದೇ ರೀತಿ ಹಲವು ಶಿಕ್ಷಣ ಸಂಸ್ಥೆ, ಸೇವಾ ಸಂಸ್ಥೆ ಮತ್ತು ಧಾರ್ಮಿಕ ಕೇಂದ್ರಗಳಿಗೆ ಈ ಸಂಕಷ್ಟದ ಸಮಯದಲ್ಲಿ ನೆರವುಗಳನ್ನೂ ನೀಡಿದ್ದಾರೆ ಎಂದ ಆಸಿಫ್ ಡೀಲ್ಸ್, ಎನ್.ಆರ್.ಐ ಗಳು ತಾಯಿನೆಲ ತಲುಪಿದಾಗ ಇಲ್ಲೂ ಅವರ ಸೇವೆಯಲ್ಲಿ ಹಲವು  ವ್ಯಕ್ತಿಗಳು ತೊಡಗಿಸಿಕೊಂಡಿರುವುದು ಸ್ಮರಿಸುವಂತದ್ದೇ ಆಗಿದೆ ಎಂದರು.

ಬಡವ - ಮಧ್ಯಮ ವರ್ಗ ಹಾಗೇ ಶ್ರೀಮಂತರನ್ನೂ ಈ ಕೋವಿಡ್ ಮಹಾಮಾರಿ ಕಷ್ಟ - ನಷ್ಟ - ಸಂಕಷ್ಟದಲ್ಲಿ ಹಾಕಿದ್ದು ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಪರಸ್ಪರ ಸಹಕರಿಸುತ್ತಾ, ಹಂಚಿಕೊಳ್ಳುತ್ತಾ, ಸ್ಪಂಧಿಸುತ್ತಾ ಬದುಕುವುದು ಮನುಷ್ಯ ಬದುಕಿನ ಅನಿವಾರ್ಯವಾಗಿದೆ. ಉದ್ಯಮದಲ್ಲಿ ತಾವು ಗಳಿಸಿದ ಸಂಪತ್ತಿನ ಭಾಗವನ್ನು ಅಲ್ತಾಫ್ ಉಳ್ಳಾಲ್ ಮತ್ತು ಬಶೀರ್ ಸಾಗರ್ ಅವರು ಸಮಾಜಕ್ಕೆ ಸಕಾಲಿಕ ನೆರವಿಗೆ ನೀಡುತ್ತಿರುವುದು ಕನ್ನಡಿಗರ ಮೇಲಿನ ಅವರ ಪ್ರೀತಿಗೆ ಸಾಕ್ಷಿಯಾಗಿದೆ. ಹೀಗೇ ನಾವು ಕನ್ನಡಿಗರು ಎಲ್ಲೇ ಇದ್ದರೂ ನಮ್ಮ ಧರ್ಮ - ಜಾತಿ - ಭಿನ್ನತೆ ಮೀರಿ ಜೊತೆಯಾಗಿ ಕೆಲಸ ಮಾಡುವ ಮನಸ್ಸು ಸದಾ ಇರಬೇಕು ಎಂದ ಆಸಿಫ್ ಡೀಲ್ಸ್, ಸುಮಾರು ಹದಿನೈದು ಲಕ್ಷ ಕನ್ನಡಿಗರು ಗಲ್ಪ್ ರಾಷ್ಟ್ರದಲ್ಲಿ ಇದ್ದು ಅವರೆಲ್ಲರ ಕ್ಷೇಮ, ಆರೋಗ್ಯ, ಸುರಕ್ಷೆಗೆ ಪ್ರಾರ್ಥಿಸುವ. ಅವರ ಜೊತೆ ಇದುವರೆಗೂ ಸ್ಪಂದಿಸಿದ ಎಲ್ಲರಿಗೂ ಹಾಗೇ ಸಹಕಾರ ನೀಡುತ್ತಿರುವ ಎಲ್ಲರಿಗೂ ದೇವನು ಉನ್ನತ ಪ್ರತಿಫಲ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X