Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆಹರೂ ಮೈದಾನದ ಬಳಿ ಮಾರುಕಟ್ಟೆ ನಿರ್ಮಾಣ...

ನೆಹರೂ ಮೈದಾನದ ಬಳಿ ಮಾರುಕಟ್ಟೆ ನಿರ್ಮಾಣ ವಿಚಾರ: ಮಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ29 May 2020 8:44 PM IST
share
ನೆಹರೂ ಮೈದಾನದ ಬಳಿ ಮಾರುಕಟ್ಟೆ ನಿರ್ಮಾಣ ವಿಚಾರ: ಮಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಮೇ 29: ಮಂಗಳೂರು ನಗರದ ನೆಹರು ಮೈದಾನದ ಫುಟ್ಬಾಲ್ ಗ್ರೌಂಡ್‍ನಲ್ಲಿ ತರಕಾರಿ ಹಾಗೂ ಮಾಂಸ ಮಾರುಕಟ್ಟೆ ನಿರ್ಮಾಣವನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಮಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಿಜಯ ಸುವರ್ಣ, ಮುಹಮ್ಮದ್ ಹುಸೈನ್, ಅಂಥೋಣಿ ಸೆಬಾಸ್ಟಿಯನ್ ಫರ್ನಾಂಡಿಸ್ ಸೇರಿ 11 ಮಂದಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ.ಸಚಿನ್ ಶಂಕರ್ ಮಗದುಂ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆಯಿತು.

ವಕೀಲರ ವಾದ ಆಲಿಸಿದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಅಲ್ಲದೇ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಅರ್ಜಿ ಸಂಬಂಧ ಹೈಕೋರ್ಟ್ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೇಳಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಚ್.ಸುನೀಲ್ ಕುಮಾರ್ ಅವರು ವಾದಿಸಿ, ನೆಹರೂ ಮೈದಾನ ಎಂದು ಪ್ರಸಿದ್ಧಿ ಪಡೆದಿರುವ ಮಂಗಳೂರು ನಗರದ ಸಾರ್ವಜನಿಕ ಮೈದಾನ 21 ಎಕರೆ ವಿಸ್ತೀರ್ಣ ಹೊಂದಿದೆ. 100 ವರ್ಷಗಳ ಹಿಂದೆ ಬ್ರಿಟೀಷ್ ಸರಕಾರ ಇದನ್ನು ಸಾರ್ವಜನಿಕ ಮೈದಾನ ಎಂದು ಘೋಷಿಸಿತ್ತು. 1985ರಲ್ಲಿ ಈ ಮೈದಾನವನ್ನು ‘ಕರ್ನಾಟಕ ಉದ್ಯಾನಗಳು ಮತ್ತು ಬಯಲು ಪ್ರದೇಶಗಳು (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ-1985’ರ ವ್ಯಾಪ್ತಿಗೆ ತಂದು ಅಧಿಸೂಚನೆ ಹೊರಡಿಸಿದೆ.

ಈ ಮೈದಾನದಲ್ಲಿರುವ ಫುಟ್ಬಾಲ್ ಗ್ರೌಂಡ್‍ನಲ್ಲಿ ಸ್ಥಳೀಯ ಮಹಾನಗರ ಪಾಲಿಕೆ ತರಕಾರಿ ಹಾಗೂ ಮಾಂಸದ ಮಾರುಕಟ್ಟೆ ನಿರ್ಮಿಸಲು ಮುಂದಾಗಿದೆ. ಇದರಿಂದ ಸ್ಥಳೀಯರ ದಿನನಿತ್ಯದ ಆಟೋಟಗಳಿಗೆ, ಸಾರ್ವಜನಿಕರ ವಾಯು ವಿವಾರಕ್ಕೆ ತೊಂದರೆ ಆಗಲಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿದಾರರು ಮೇ 14ರಂದು ಮನವಿ ನೀಡಿದ್ದಾರೆ. ಆದರೆ, ಯಾವುದೇ ಕ್ರಮ ಜರುಗಿಸಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ನೆಹರೂ ಮೈದಾನದ ಫುಟ್ಬಾಲ್ ಗ್ರೌಂಡ್‍ನಲ್ಲಿ ತರಕಾರಿ ಮತ್ತು ಮಾಂಸ ಮಾರುಕಟ್ಟೆ ನಿರ್ಮಾಣ ಮಾಡದಂತೆ ಮತ್ತು ಫುಟ್ಬಾಲ್ ಗ್ರೌಂಡ್ ಅನ್ನು ಸಂರಕ್ಷಿಸಬೇಕು ಎಂದು ಮೇ 14ರಂದು ನೀಡಲಾಗಿರುವ ಮನವಿಯನ್ನು ಪರಿಗಣಿಸುವಂತೆ, ಫುಟ್ಬಾಲ್ ಗ್ರೌಂಡ್‍ನಲ್ಲಿ ಯಾವುದೇ ರೀತಿಯ ಶಾಶ್ವತ ಅಥವಾ ತಾತ್ಕಾಲಿಕ ನಿರ್ಮಾಣ ಕಾಮಗಾರಿ ಕೈಗೊಳ್ಳಬಾರದು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X