Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಊರಿಗೆ ವಾಪಸಾದ ಕಾರ್ಮಿಕರಿಗೆ ಒಪ್ಪೊತ್ತಿನ...

ಊರಿಗೆ ವಾಪಸಾದ ಕಾರ್ಮಿಕರಿಗೆ ಒಪ್ಪೊತ್ತಿನ ಊಟವೇ ಗತಿ: 16 ಕೋಟಿಗೂ ಅಧಿಕ ಮಂದಿಗೆ ನಿರುದ್ಯೋಗದ ಭೀತಿ

ಶೇ.70 ಮಂದಿಗೆ ಸಾಲದ ಬಾಧೆ

ವಾರ್ತಾಭಾರತಿವಾರ್ತಾಭಾರತಿ29 May 2020 10:14 PM IST
share
ಊರಿಗೆ ವಾಪಸಾದ ಕಾರ್ಮಿಕರಿಗೆ ಒಪ್ಪೊತ್ತಿನ ಊಟವೇ ಗತಿ: 16 ಕೋಟಿಗೂ ಅಧಿಕ ಮಂದಿಗೆ ನಿರುದ್ಯೋಗದ ಭೀತಿ

ಹೊಸದಿಲ್ಲಿ, ಎ. 26: ಕೋವಿಡ್-19 ನಿಯಂತ್ರಣಕ್ಕಾಗಿ ರಾಷ್ಟ್ರಾದ್ಯಂತ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಬಿಹಾರದಲ್ಲಿ ತಮ್ಮ ಮನೆಗೆ ವಾಪಸಾಗಿರುವ ವಲಸೆ ಕಾರ್ಮಿಕರ ಶೋಚನೀಯ ಬದುಕಿನ ವಿವರಗಳು ಒಂದೊಂದಾಗಿ ಅನಾವರಣಗೊಳ್ಳುತ್ತಿವೆ. ಈ ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.50ಕ್ಕೂ ಅಧಿಕ ಮಂದಿ ಬಿಹಾರದ ವಲಸೆ ಕಾರ್ಮಿಕರು ಲಾಕ್‌ಡೌನ್ ಆನಂತರ ತಾವು ಒಂದು ಹೊತ್ತಿನ ಊಟದಲ್ಲೇ ದಿನಗಳೆಯುತ್ತಿರುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರ ಪೈಕಿ ಶೇ. 70 ಮಂದಿಯ ಸಾಲದ ಬಾಧೆಯಿಂದ ತತ್ತರಿಸುತ್ತಿದ್ದಾರೆ.

ಇಷ್ಟೇ ಅಲ್ಲದೆ, ಲಾಕ್‌ಡೌನ್ ನಂತರ ದೇಶದ ವಿವಿಧೆಡೆಯಿಂದ ಬಿಹಾರದ 15 ಜಿಲ್ಲೆಗಳಿಗೆ ವಾಪಾಸಾಗಿರುವ 177 ಕಾರ್ಮಿಕರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಊರಿಗೆ ಪ್ರಯಾಣವನ್ನು ಆರಂಭಿಸುವ ಮುನ್ನ ಈ ಕಾರ್ಮಿಕರು ಸರಾಸರಿ 18 ದಿನಗಳ ಕಾಲ ಸಂಕಷ್ಟದಲ್ಲಿ ಸಿಲುಕಿದ್ದರೆಂದು ಸಮೀಕ್ಷಾ ವರದಿ ತಿಳಿಸಿದೆ.

ತಾವಿದ್ದ ಮನೆಗಳ ಮಾಲಕರು ತಮ್ಮನ್ನು ಮನೆಖಾಲಿ ಮಾಡುವಂತೆ ಹೇಳಿದ್ದರಿಂದ ತಾವು ಅನಿವಾರ್ಯವಾಗಿ ನಗರಗಳನ್ನು ತೊರೆಯಬೇಕಾಯಿತು ಎಂದು ಕಾರ್ಮಿಕರು ತಿಳಿಸಿದ್ದಾರೆ. ಶೇ.26 ಮಂದಿಗೆ ಜೀವನ ನಿರ್ವಹಣೆಗೆ ಯಾವುದೇ ಉದ್ಯೋಗ ಇಲ್ಲದಿರುವುದು ಅವರು ನಗರ ತೊರೆಯಲು ಕಾರಣವಾಯಿತೆಂದು ಸಮೀಕ್ಷಾ ವರದಿ ತಿಳಿಸಿದೆ.

ಲಾಕ್‌ಡೌನ್ ಆನಂತರ ಹಠಾತ್ತನೆ ತಮ್ಮ ಆದಾಯದಲ್ಲಿ ಕಡಿತವುಂಟಾಗಿದ್ದರಿಂದ ಕುಟುಂಬಕ್ಕೆ ಲಭ್ಯವಿರುವ ಆಹಾರದ ಪ್ರಮಾಣವು ಶೇ.72ರಷ್ಟಿದ್ದುದು, ಶೇ.8ಕ್ಕೆ ಕುಸಿದಿರುವುದಾಗಿ ಸಮೀಕ್ಷೆ ತಿಳಿಸಿದೆ. ಲಾಕ್‌ಡೌನ್ ಮುಂಚಿನ ದಿನಗಳಿಗೆ ಹೋಲಿಸಿದರೆ ಶೇ.71 ಮಂದಿಗೆ ನೀರಿನ ಸಮರ್ಪಕ ಲಭ್ಯತೆಯಿತ್ತು. ಆದರೆ ಲಾಕ್‌ಡೌನ್ ಸಂದರ್ಭದಲ್ಲಿ ಅದು ಶೇ.38ಕ್ಕೆ ಕುಸಿದಿದೆ ಎಂದು ವರದಿ ತಿಳಿಸಿದೆ.

 ಲಾಕ್‌ಡೌನ್ ಆನಂತರ ಸುಮಾರು 16.10 ಕೋಟಿ ಮಂದಿ ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಸಮೀಕ್ಷಾ ತಂಡದ ಸದಸ್ಯರಾದ ರಾಹುಲ್ ಸುರೇಶ್ ಸಪ್ಕಾಳ್ ತಿಳಿಸಿದ್ದಾರೆ.

ಲಾಕ್‌ಡೌನ್ ಆನಂತರ ಶೇ.66 ವಲಸೆ ಕಾರ್ಮಿಕರು ಯಾವುದೇ ವೇತನವಿಲ್ಲದೆ ಮನೆಗಳಿಗೆ ವಾಪಸಾಗಿದ್ದಾರೆ. ಶೇ.14 ಮಂದಿ ಪೂರ್ಣ ವೇತನ ಪಡೆದಿದ್ದಾರೆ ಹಾಗೂ ಶೇ.21 ಮಂದಿ ಭಾಗಶಃ ವೇತನವಷ್ಟೇ ದೊರೆತಿದೆ.

ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ. 40 ಮಂದಿಗೆ ಲಾಕ್‌ಡೌನ್‌ಗೆ ಮೊದಲು ಸರಾಸರಿ ಪ್ರತಿ ವ್ಯಕ್ತಿಗೆ 53 ಸಾವಿರ ರೂ. ಸಾಲವಿತ್ತು. ಆದರೆ ಲಾಕ್‌ಡೌನ್ ಆನಂತರ ಅವರ ಸಾಲದ ಪ್ರಮಾಣವು 40 ಸಾವಿರದಿಂದ ಹಿಡಿದು 2.80 ಲಕ್ಷ ರೂ.ವರೆಗೆ ಏರಿದೆ. ಮನೆ ಖರ್ಚನ್ನು ಸರಿದೂಗಿಸಲು, ತುರ್ತು ಆರೋಗ್ಯ ಸನ್ನಿವೇಶ, ಮುಂಗಾರು ಋತುವಿನಲ್ಲಿ ಕೃಷಿ ಚಟುವಟಿಕೆಗಳಿಗೆ ತಗಲುವ ವೆಚ್ಚಗಳ ಕಾರಣದಿಂದಾಗಿ ವಸೆ ಕಾರ್ಮಿಕರ ಸಾಲದ ಪ್ರಮಾಣದಲ್ಲಿ ಏರಿಕೆಯಾಗಿದೆಯೆಂದು ಸಮೀಕ್ಷೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X