Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎಕ್ಸ್ ಪರ್ಟೈಸ್, ಅಲ್ ಮುಝೈನ್ ಕಂಪೆನಿಗಳ...

ಎಕ್ಸ್ ಪರ್ಟೈಸ್, ಅಲ್ ಮುಝೈನ್ ಕಂಪೆನಿಗಳ ಅತಂತ್ರ ಉದ್ಯೋಗಿಗಳು ಶೀಘ್ರವೇ ಬಾಡಿಗೆ ವಿಮಾನದಲ್ಲಿ ಮಂಗಳೂರಿಗೆ

ಕೊನೆಗೂ ಸಿಕ್ಕಿತು ಅನುಮತಿ !

ವಾರ್ತಾಭಾರತಿವಾರ್ತಾಭಾರತಿ29 May 2020 10:20 PM IST
share
ಎಕ್ಸ್ ಪರ್ಟೈಸ್, ಅಲ್ ಮುಝೈನ್ ಕಂಪೆನಿಗಳ ಅತಂತ್ರ ಉದ್ಯೋಗಿಗಳು ಶೀಘ್ರವೇ ಬಾಡಿಗೆ ವಿಮಾನದಲ್ಲಿ ಮಂಗಳೂರಿಗೆ

ಜುಬೈಲ್, ಮೇ 29: ಕೊರೋನ ಲಾಕ್ ಡೌನ್ ನಿಂದ ಸೌದಿಯಲ್ಲಿ ಅತಂತ್ರರಾಗಿ ತಾಯ್ನಾಡಿಗೆ ಮರಳಲು ಕಾದು ಕಂಗಾಲಾಗಿರುವ ಕನ್ನಡಿಗರಿಗೆ ಕೊನೆಗೂ ಆಶಾಕಿರಣ ಗೋಚರಿಸಿದೆ.

ತಮ್ಮ ಕಂಪೆನಿಯಲ್ಲಿ ಉದ್ಯೋಗಕ್ಕಾಗಿ ಬಂದು ಲಾಕ್ ಡೌನ್ ನಿಂದ ಉದ್ಯೋಗವಿಲ್ಲದೆ ಖಾಲಿ ಕುಳಿತವರನ್ನು ಊರಿಗೆ ಕಳಿಸಲು ಕೆಲವು ಪ್ರತಿಷ್ಠಿತ ಕಂಪೆನಿಗಳು ಮಾಡಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಹಾಗಾಗಿ ಮೇ 30 ರಿಂದ ಈ ಕಂಪೆನಿಗಳು ನೇಮಿಸಿದ ಬಾಡಿಗೆ ವಿಮಾನಗಳಲ್ಲಿ ತಮ್ಮಲ್ಲಿ ಕೆಲಸಕ್ಕಾಗಿ ವಿಸಿಟ್ ವೀಸಾದಲ್ಲಿ ಹೋಗಿ ಅಲ್ಲಿ ಸಿಲುಕಿರುವವರು ಮಂಗಳೂರಿಗೆ ಬರಲಿದ್ದಾರೆ.

ಈ ಬಗ್ಗೆ ವಾರ್ತಾಭಾರತಿಗೆ ಮಾಹಿತಿ ನೀಡಿದ ಎಕ್ಸ್ ಪರ್ಟೈಸ್ ಕಂಟ್ರಾಕ್ಟಿಂಗ್ ಕಂಪೆನಿಯ ಆಡಳಿತ ನಿರ್ದೇಶಕ ಕೆ ಎಸ್ ಶೇಖ್ ಕರ್ನಿರೆ ಹಾಗು ಸಹೋದರರು "ಮುಂದಿನ ವಾರದೊಳಗೆ ಮಂಗಳೂರಿಗೆ ಎರಡು ಬಾಡಿಗೆ ವಿಮಾನಗಳಲ್ಲಿ ಇಲ್ಲಿಂದ ಜನರನ್ನು ಕಳಿಸಲು ನಮಗೆ ಅನುಮತಿ ಸಿಕ್ಕಿದೆ. ಮೊದಲ ಎರಡು ವಿಮಾನಗಳಲ್ಲಿ ಒಟ್ಟು 360 ಜನರು ಮಂಗಳೂರಿಗೆ ಪ್ರಯಾಣಿಸಲಿದ್ದಾರೆ. ದಿಲ್ಲಿ, ತಿರುವನಂತಪುರಂ, ಚೆನ್ನೈ, ಹೈದರಾಬಾದ್ ಗಳಿಗೆ ಕಂಪೆನಿ ನೇಮಿಸಿದ ಇತರ ಏಳು ಬಾಡಿಗೆ ವಿಮಾನಗಳಲ್ಲಿ ಜನರು ಪ್ರಯಾಣಿಸಲಿದ್ದಾರೆ.  ಅವರ ಸಂಪೂರ್ಣ ಪ್ರಯಾಣ ಖರ್ಚು ಹಾಗು ಊರಿಗೆ ತಲುಪಿದ ಬಳಿಕ ಕ್ವಾರಂಟೇನ್ ಖರ್ಚನ್ನು ನಮ್ಮ ಕಂಪೆನಿಯೇ ಭರಿಸಲಿದೆ. ನಾವು ಕಳೆದ ಒಂದೂವರೆ ತಿಂಗಳಿಂದ ಇದಕ್ಕಾಗಿ ಮಾಡಿದ ಸತತ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ಪ್ರಧಾನ ಮಂತ್ರಿಗಳು, ವಿದೇಶಾಂಗ ಸಚಿವರು, ಕೇಂದ್ರ ನಾಗರೀಕ ವಿಮಾನಯಾನ ಸಚಿವರು, ಕರ್ನಾಟಕ ಮುಖ್ಯಮಂತ್ರಿಗಳಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ವಿಮಾನ ಮಂಗಳೂರಿಗೆ ಬರಲು ಹಾಗು ಅಲ್ಲಿ ಕ್ವಾರಂಟೇನ್ ಗೆ ಸಹಕರಿಸಲು ಒಪ್ಪಿಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೂ ಧನ್ಯವಾದಗಳು. ನಮ್ಮ ಈ ಪ್ರಯತ್ನಕ್ಕೆ -ಪ್ರಾರಂಭದಿಂದಲೇ ಪೂರ್ಣ ಸಹಕಾರ ನೀಡಿ ಈ ವಿಷಯವನ್ನು ಸರಕಾರದ ಗಮನಕ್ಕೆ ತರುವಲ್ಲಿ ವಿಶೇಷ ಶ್ರಮ ವಹಿಸಿದ ವಾರ್ತಾಭಾರತಿಗೆ ನಮ್ಮ ವಿಶೇಷ ಅಭಿನಂದನೆಗಳು" ಎಂದು ಹೇಳಿದ್ದಾರೆ. 

ಮಂಗಳೂರಿನ ಇನ್ನೋರ್ವ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಝಕರಿಯ ಬಜ್ಪೆ ಅವರ ಅಲ್ ಮುಝೈನ್ ಕಂಪೆನಿಗೂ ಮಂಗಳೂರಿಗೆ ಮೂರು ಬಾಡಿಗೆ ವಿಮಾನಗಳನ್ನು ಕಳಿಸುವ ಅನುಮತಿ ಸಿಕ್ಕಿದೆ ಎಂದು ಮಾಹಿತಿ ಬಂದಿದೆ. ಜೂನ್ 2, 5 ಹಾಗು 8 ರಂದು ಈ ಮೂರು ವಿಮಾನಗಳು ಮಂಗಳೂರಿಗೆ ಬರಲಿವೆ ಎಂದು ಝಕರಿಯ ಅವರು ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X