Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆನ್‌ಲೈನ್‌ನಲ್ಲಿ ಬೈಕ್ ಮಾರಲು ಹೋಗಿ 12...

ಆನ್‌ಲೈನ್‌ನಲ್ಲಿ ಬೈಕ್ ಮಾರಲು ಹೋಗಿ 12 ಸಾವಿರ ರೂ. ಕಳೆದುಕೊಂಡ ಉಪ್ಪಿನಂಗಡಿಯ ಯುವಕ!

ವಾರ್ತಾಭಾರತಿವಾರ್ತಾಭಾರತಿ30 May 2020 2:59 PM IST
share
ಆನ್‌ಲೈನ್‌ನಲ್ಲಿ ಬೈಕ್ ಮಾರಲು ಹೋಗಿ 12 ಸಾವಿರ ರೂ. ಕಳೆದುಕೊಂಡ ಉಪ್ಪಿನಂಗಡಿಯ ಯುವಕ!

ಉಪ್ಪಿನಂಗಡಿ, ಮೇ 30: ಆನ್‌ಲೈನ್ ವೆಬ್‌ಸೈಟ್ ಮೂಲಕ ಬೈಕ್ ಮಾರಲು ಮುಂದಾದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಅಲ್ಲಿ ದೊರೆತ ಗ್ರಾಹಕನ ಮಾತಿನ ಮೋಡಿಗೆ ಸಿಲುಕಿ ತನ್ನ ಉಳಿತಾಯ ಖಾತೆಯಲ್ಲಿದ್ದ 12 ಸಾವಿರ ರೂ.ನ್ನು ಕಳೆದುಕೊಂಡ ಘಟನೆ ಬಜತ್ತೂರು ಗ್ರಾಮದಲ್ಲಿ ನಡೆದಿದೆ.

ಬಜತ್ತೂರು ನಿವಾಸಿ, ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಯುವಕ ತನ್ನ ಬೈಕನ್ನು ಮಾರಾಟ ಮಾಡಲು ಉದ್ದೇಶಿಸಿ ಓಎಲ್‌ಒಕ್ಸ್‌ನಲ್ಲಿ ಬೈಕ್‌ನ ವಿವರವನ್ನು ಅಪ್ಲೋಡ್ ಮಾಡಿದ್ದ. ಆ ಬಳಿಕ 8876992541 ನಂಬ್ರದ ಪೋನ್‌ನಿಂದ ಈತನಿಗೆ ವ್ಯಕ್ತಿಯೋರ್ವ ಕರೆ ಮಾಡಿ ತಾನು ಬೈಕ್ ಖರೀದಿಸಲಿಚ್ಛಿಸಿದ್ದು, ಹಣ ಹೇಗೆ ಕಳುಹಿಸಲಿ ಎಂದು ವಿಚಾರಿಸಿದ್ದಾನೆ. ಈ ವೇಳೆ ಫೋನ್ ಪೇ ಮುಖೇನ ಹಣ ಕಳುಹಿಸಿ ಎಂದು ವಿದ್ಯಾರ್ಥಿ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿಯ ವಾಟ್ಸ್ ಆ್ಯಪ್ ಗೆ ಗ್ರಾಹಕ ಕ್ಯೂ ಆರ್ ಕೋಡ್ ವೊಂದನ್ನು ಕಳುಹಿಸಿ ಅದನ್ನು ನಿಮ್ಮ ಫೋನ್ ಪೇಯಿಂದ ಸ್ಕ್ಯಾನ್ ಮಾಡಿದರೆ ನನ್ನ ಖಾತೆಯಿಂದ ನಿಮ್ಮ ಖಾತೆಗೆ ಹಣ ವರ್ಗಾವಣೆಯಾಗುತ್ತದೆ. ನಾಳೆ ಮುಂಜಾನೆ ನಾನು ಬಂದು ಬೈಕ್ ಪಡೆದುಕೊಂಡು ಹೋಗುವೆ ಎಂದು ತಿಳಿಸಿದ್ದಾನೆ.

ಈ ವೇಳೆ ಗ್ರಾಹಕ ತನ್ನ ಫೋನ್ ಪೇ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡಬೇಕಾಗಿರುವಲ್ಲಿ ತಾನೇ ಗ್ರಾಹಕನ ಕ್ಯೂಆರ್ ಕೋಡನ್ನು ಸ್ಕ್ಯಾನ್ ಮಾಡಿದರೆ ತನ್ನ ಖಾತೆಯಿಂದಲೇ ಆತನ ಖಾತೆಗೆ ಜಮೆ ಆಗುವ ಬಗ್ಗೆ ವಿದ್ಯಾರ್ಥಿಗೆ ಸಂಶಯ ಬಂದಿದೆ. ಈ ಬಗ್ಗೆ ಗ್ರಾಹಕನ ಸೋಗಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯಲ್ಲಿ ಪ್ರಶ್ನಿಸಿದ್ದನ್ನಾದರೂ, ಆತನ ಮಾತಿನ ಮೋಡಿಗೆ ಸಿಲುಕಿದ ವಿದ್ಯಾರ್ಥಿಯು ವಂಚಕ ಕಳುಹಿಸಿದ ಕ್ಯೂಆರ್ ಕೋಡನ್ನು ಸ್ಕ್ಯಾನ್ ಮಾಡಿದ್ದಾನೆ. ಕೂಡಲೇ ವಿದ್ಯಾರ್ಥಿಯ ಉಳಿತಾಯ ಖಾತೆಯಿಂದ 12 ಸಾವಿರ ರೂ. ಲಪಟಾಯಿಸಲ್ಪಟ್ಟಿದೆ.

ಈ ವಂಚನೆಯ ಬಗ್ಗೆ ವಿದ್ಯಾರ್ಥಿಯು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾನೆ.

ಒಟಿಪಿ ಪಡೆದು ವಂಚಿಸುವ ವಂಚನಾ ಜಾಲದ ಬಗ್ಗೆ ಜನತೆ ಜಾಗೃತರಾಗುತ್ತಿದ್ದಂತೆಯೇ ಫೋನ್ ಪೇ ವ್ಯವಸ್ಥೆಯ ಬಗ್ಗೆ ಪೂರ್ಣ ಅರಿವನ್ನು ಹೊಂದಿರದ ಮಂದಿಯನ್ನು ಮಾತಿನ ಮೋಡಿಯಲ್ಲಿ ವಂಚಿಸುವ ಜಾಲಗಳೂ ಇದೀಗ ಕಾರ್ಯೋನ್ಮುಖಗೊಂಡಿವೆ. ನಾಗರಿಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X