Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಾದ್ಯಂತ ಜೂ.30ರವರೆಗೆ ಲಾಕ್‍ಡೌನ್:...

ದೇಶಾದ್ಯಂತ ಜೂ.30ರವರೆಗೆ ಲಾಕ್‍ಡೌನ್: ಯಾವುದಕ್ಕೆಲ್ಲ ವಿನಾಯಿತಿ ? ಇಲ್ಲಿದೆ ಸಂಪೂರ್ಣ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ30 May 2020 8:55 PM IST
share
ದೇಶಾದ್ಯಂತ ಜೂ.30ರವರೆಗೆ ಲಾಕ್‍ಡೌನ್: ಯಾವುದಕ್ಕೆಲ್ಲ ವಿನಾಯಿತಿ ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಮೇ 30: ಕೋವಿಡ್-19 ಕಂಟೈನ್ಮೆಂಟ್ ಝೋನ್‍ಗಳಲ್ಲಿ ಲಾಕ್‍ಡೌನ್ ಅನ್ನು ಜೂ.30ರವರೆಗೆ ವಿಸ್ತರಿಸಲಾಗಿದ್ದು, ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದೆಡೆ ಹಂತ ಹಂತವಾಗಿ ಎಲ್ಲ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡಿ ಕೇಂದ್ರ ಗೃಹ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಹಂತ-1: ಧಾರ್ಮಿಕ ಸ್ಥಳಗಳು ಹಾಗೂ ಪ್ರಾರ್ಥನಾ ಸ್ಥಳಗಳು, ಹೊಟೇಲ್, ರೆಸ್ಟೋರೆಂಟ್‍ಗಳು, ಶಾಪಿಂಗ್ ಮಾಲ್‍ಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುವ ಮಾರ್ಗಸೂಚಿಗಳನ್ವಯ ಜೂ.8ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

ಹಂತ-2: ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ, ತರಬೇತಿ, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಸಂಬಂಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳು, ಸಾಂಸ್ಥಿಕ ಮಟ್ಟದಲ್ಲಿ ಪೋಷಕರು ಹಾಗೂ ಇತರ ಸಂಬಂಧಪಟ್ಟವರ ಜೊತೆ ಸಮಾಲೋಚನೆ ನಡೆಸಿ ಅವರಿಂದ ಪಡೆದ ಅಭಿಪ್ರಾಯಗಳ ಆಧಾರದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ ತಿಂಗಳಲ್ಲಿ ಆರಂಭಿಸಲಾಗುವುದು.

ಹಂತ-3: ಅಂತರ್ ರಾಷ್ಟ್ರೀಯ ವಿಮಾನಯಾನ, ಮೆಟ್ರೋ ರೈಲು, ಚಲನಚಿತ್ರ ಮಂದಿರ, ಜಿಮ್, ಈಜುಕೊಳ, ಮನರಂಜನಾ ಪಾರ್ಕ್, ಥಿಯೇಟರ್, ಬಾರ್, ಸಭಾಂಗಣ, ಅಸೆಂಬ್ಲಿ ಹಾಲ್ ಹಾಗೂ ಸೆಮಿನಾರ್ ಸ್ಥಳಗಳು, ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನಾ, ಅಕಾಡೆಮಿಕ್, ಸಾಂಸ್ಕೃತಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸಲು ಪರಿಸ್ಥಿತಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅವಕಾಶವನ್ನು ಕಲ್ಪಿಸಲಾಗುವುದು.

ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜೂ.30ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸುವ ಮಾರ್ಗಸೂಚಿಗಳನ್ನು ಆಧರಿಸಿ ಜಿಲ್ಲಾಡಳಿತಗಳು ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಬೇಕು.

ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಅಗತ್ಯ ಚಟುವಟಿಕೆಗಳು ಹೊರತುಪಡಿಸಿ ವೈಯಕ್ತಿಕ ವಾಹನಗಳ ಸಂಚಾರವನ್ನು ದೇಶಾದ್ಯಂತ ನಿರ್ಬಂಧಿಸಲಾಗಿದೆ. ಸ್ಥಳೀಯ ಪ್ರಾಧಿಕಾರಗಳು ಈ ಸಂಬಂಧ ಆದೇಶಗಳನ್ನು ಹೊರಡಿಸಬೇಕು.

ಕಂಟೈನ್ಮೆಂಟ್ ಝೋನ್‍ಗಳಲ್ಲಿ ಅಗತ್ಯ ಚಟುವಟಿಕೆಗಳು ಹೊರತುಪಡಿಸಿ ಬೇರೆ ಚಟುವಟಿಕೆಗಳಿಗೆ ಅವಕಾಶವಿಲ್ಲ. ವೈದ್ಯಕೀಯ ತುರ್ತು ಹಾಗೂ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಈ ಝೋನ್‍ಗಳಿಂದ ಸಾರ್ವಜನಿಕರು ಹೊರಗೆ ಹೋಗುವುದಾಗಲಿ, ಹೊರಗಿನಿಂದ ಒಳಗೆ ಬರುವುದಾಗಲಿ ಮಾಡಲು ಅವಕಾಶವಿಲ್ಲ.

ಕಂಟೈನ್ಮೆಂಟ್ ಝೋನ್‍ಗಳ ಹೊರಗೆ ಬಫರ್ ಝೋನ್‍ಗಳನ್ನು ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಗುರುತಿಸಬೇಕು. ಬಫರ್ ಝೋನ್‍ಗಳಲ್ಲಿ ಹೇರಲಾಗುವ ನಿರ್ಬಂಧಗಳನ್ನು ಜಿಲ್ಲಾಡಳಿತಗಳು ವಿಧಿಸಬೇಕು.

ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪರಿಸ್ಥಿತಿಯನ್ನು ಆಧರಿಸಿ ಕಂಟೈನ್ಮೆಂಟ್ ಝೋನ್‍ಗಳ ಹೊರಗೆ ಕೆಲವು ಚಟುವಟಿಕೆಗಳನ್ನು ನಿರ್ಬಂಧಿಸುವುದಾಗಲಿ ಅಥವಾ ಬೇಡಿಕೆಗೆ ಅನುಸಾರವಾಗಿ ಅವಕಾಶ ಕಲ್ಪಿಸಬಹುದಾಗಿದೆ.

ಅಂತರ್ ರಾಜ್ಯ ವ್ಯಾಪ್ತಿಯಲ್ಲಿ ಸಂಚರಿಸಲು ವ್ಯಕ್ತಿಗಳಿಗೆ ಹಾಗೂ ಸರಕುಗಳಿಗೆ ಪ್ರತ್ಯೇಕ ಅನುಮತಿ, ಇ-ಪಾಸ್ ಪಡೆಯುವ ಅಗತ್ಯವಿಲ್ಲ. ಆದರೆ, ರಾಜ್ಯ ಸರಕಾರಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸಂಚಾರ ನಿರ್ಬಂಧಿಸುವುದಾದರೆ ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಸರಕು ಸಾಗಣೆ ಹಾಗೂ ಕಾರ್ಗೋ ಚಟುವಟಿಕೆಗಳಿಗೆ ರಾಜ್ಯ ಸರಕಾರಗಳಾಗಲಿ, ಕೇಂದ್ರಾಡಳಿತ ಪ್ರದೇಶಗಳಾಗಿ ನಿರ್ಬಂಧಿಸುವಂತಿಲ್ಲ.

65 ವರ್ಷ ಮೇಲ್ಪಟ್ಟ ನಾಗರಿಕರು, ಗರ್ಭಿಣಿ ಮಹಿಳೆಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯವಾಗಿ ಅಥವಾ ಆರೋಗ್ಯ ಹಿನ್ನೆಲೆ ಹೊರಗೆ ಹೋಗುವುದನ್ನು ಹೊರತುಪಡಿಸಿ ಮನೆಯಲ್ಲಿ ಇರಬೇಕು.

ಕಚೇರಿಗಳು ಹಾಗೂ ಇನ್ನಿತರ ಕಾರ್ಯಕ್ಷೇತ್ರಗಳಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗಳು, ಕಾರ್ಮಿಕರು ತಮ್ಮ ಮೊಬೈಲ್ ಫೋನ್‍ಗಳಲ್ಲಿ ಆರೋಗ್ಯ ಸೇತು ಆ್ಯಪ್ ಅನ್ನು ಅಳವಡಿಸಿಕೊಳ್ಳಬೇಕು. ಜಿಲ್ಲಾಡಳಿತಗಳು ಪ್ರತಿಯೊಬ್ಬರಿಗೂ ಕೋವಿಡ್-19 ಸೋಂಕಿನಿಂದ ರಕ್ಷಿಸಿಕೊಳ್ಳುವ ಉದ್ದೇಶದಿಂದ ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡಿಕೊಂಡು, ಕಾಲಕಾಲಕ್ಕೆ ತಮ್ಮ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸುವಂತೆ ಸಲಹೆ ನೀಡಬೇಕು.

ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ವಿಕೋಪ ನಿರ್ವಹಣಾ ಕಾಯ್ದೆ 2005ರಡಿಯಲ್ಲಿ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಎಲ್ಲ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗಳು ಶಿಸ್ತಿನಿಂದ ಈ ಕ್ರಮಗಳ ಅನುಷ್ಠಾನದ ಕಡೆ ಗಮನಹರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X