Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್-19 ಲಸಿಕೆಗಳ ಮೇಲೆ ಸಮಾನ ಹಕ್ಕು:...

ಕೋವಿಡ್-19 ಲಸಿಕೆಗಳ ಮೇಲೆ ಸಮಾನ ಹಕ್ಕು: 37 ದೇಶಗಳು, ಡಬ್ಲ್ಯುಎಚ್‌ಒ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ30 May 2020 10:26 PM IST
share
ಕೋವಿಡ್-19 ಲಸಿಕೆಗಳ ಮೇಲೆ ಸಮಾನ ಹಕ್ಕು: 37 ದೇಶಗಳು, ಡಬ್ಲ್ಯುಎಚ್‌ಒ ಪ್ರತಿಪಾದನೆ

ಝೂರಿಕ್ (ಸ್ವಿಟ್ಸರ್‌ಲ್ಯಾಂಡ್), ಮೇ 30: ನೂತನ-ಕೊರೋನ ವೈರಸ್ ಕಾಯಿಲೆಯ ಚಿಕಿತ್ಸೆಗೆ ಸಂಬಂಧಿಸಿದ ಸಂಭಾವ್ಯ ಲಸಿಕೆಗಳು, ಔಷಧಗಳು ಮತ್ತು ಇತರ ಪರೀಕ್ಷಾ ಸಲಕರಣೆಗಳ ಮೇಲೆ ಎಲ್ಲ ದೇಶಗಳಿಗೂ ಸಮಾನ ಹಕ್ಕಿರಬೇಕು ಎಂಬುದಾಗಿ 37 ದೇಶಗಳು ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶುಕ್ರವಾರ ಮನವಿ ಮಾಡಿವೆ.

ಪೇಟೆಂಟ್ ಕಾನೂನುಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಈ ದೇಶಗಳು ಮತ್ತು ವಿಶ್ವ ಆರೋಗ್ಯ ಸಂಸ್ಥೆ, ಮಹತ್ವದ ಔಷಧಗಳು ಮತ್ತು ಲಸಿಕೆಗಳನ್ನು ಪಡೆಯುವಲ್ಲಿ ಈ ಕಾನೂನುಗಳು ತಡೆಯಾಗಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿವೆ.

ಈಗಾಗಲೇ 100ಕ್ಕೂ ಅಧಿಕ ಲಸಿಕೆಗಳು ಮತ್ತು ಔಷಧಿಗಳು ವಿವಿಧ ಅಭಿವೃದ್ಧಿ ಹಂತಗಳಲ್ಲಿದ್ದು, ಶ್ರೀಮಂತ ದೇಶಗಳು ಅವುಗಳಲ್ಲಿ ಹಣವನ್ನು ಸುರಿಯುತ್ತಿವೆ. ಹಾಗಾಗಿ, ಯಾವುದಾದರೊಂದು ಲಸಿಕೆ ಅಥವಾ ಔಷಧಿ ಯಶಸ್ಸು ಕಂಡರೆ, ಅದನ್ನು ಪಡೆಯುವ ಸರದಿಯ ಮುಂಚೂಣಿಯಲ್ಲಿ ಈ ದೇಶಗಳು ಇರುತ್ತವೆ ಎಂಬ ಭಯವನ್ನು ಅಭಿವೃದ್ಧಿ ಹೊಂದುತ್ತಿರುವ ಮತ್ತು ಸಣ್ಣ ದೇಶಗಳು ವ್ಯಕ್ತಪಡಿಸಿವೆ.

ಕೊರೋನ ವೈರಸ್ ಸಂಬಂಧಿ ಲಸಿಕೆಗಳು, ಪರೀಕ್ಷಾ ಸಲಕರಣೆಗಳು, ಔಷಧಿಗಳು, ಔಷಧಾ ವಿಧಾನಗಳು ಹಾಗೂ ಇತರ ಪ್ರಮುಖ ಸಲಕರಣೆಗಳನ್ನು ಜಾಗತಿಕ ಸಾರ್ವಜನಿಕ ವಸ್ತುಗಳು ಎಂಬುದಾಗಿ ಪರಿಗಣಿಸಿ ಸಾರ್ವತ್ರಿಕವಾಗಿ ಎಲ್ಲರಿಗೂ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಕೋಸ್ಟರಿಕ ದೇಶದ ಅಧ್ಯಕ್ಷ ಕಾರ್ಲೋಸ್ ಅಲ್ವರಾಡೊ ಹೇಳಿದರು.

ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆಯು ಒಗ್ಗಟ್ಟಿನ ಕ್ರಮಕ್ಕಾಗಿ ಜಾಗತಿಕ ಮನವಿ ಮಾಡಿದೆ ಹಾಗೂ ಈ ಅಭಿಯಾನದಲ್ಲಿ ಸೇರ್ಪಡೆಗೊಳ್ಳುವಂತೆ ಇತರ ದೇಶಗಳಿಗೆ ಕರೆ ನೀಡಿದೆ.

ಇದು ಜನರಿಗೆ ಆದ್ಯತೆ ನೀಡುವ ಸಮಯ: ವಿಶ್ವಸಂಸ್ಥೆ ಮುಖ್ಯಸ್ಥ

ಹೊಸತನದ ಸಂಶೋಧನೆಗಳಲ್ಲಿ ಪೇಟೆಂಟ್‌ಗಳು ವಹಿಸುವ ಮಹತ್ವದ ಪಾತ್ರವನ್ನು ವಿಶ್ವ ಆರೋಗ್ಯ ಸಂಸ್ಥೆಯು ಗುರುತಿಸುತ್ತದೆ. ಆದರೆ ಇದು ಜನರಿಗೆ ಆದ್ಯತೆ ನೀಡಬೇಕಾದ ಸಮಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಶುಕ್ರವಾರ ನಡೆದ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X