Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಕೋವಿಡ್-19 ನಿರ್ವಹಣೆಗೆ...

ಮೋದಿ ಸರಕಾರದ ಕೋವಿಡ್-19 ನಿರ್ವಹಣೆಗೆ ಆರೋಗ್ಯ ಪರಿಣಿತರ ಅಸಮಾಧಾನ

"ಕೇಂದ್ರ ಆರೋಗ್ಯ ತಜ್ಞರಿಗಿಂತ ಅಧಿಕಾರಿಗಳನ್ನೇ ಅವಲಂಭಿಸಿದೆ"

ವಾರ್ತಾಭಾರತಿವಾರ್ತಾಭಾರತಿ31 May 2020 11:07 PM IST
share
ಮೋದಿ ಸರಕಾರದ ಕೋವಿಡ್-19 ನಿರ್ವಹಣೆಗೆ ಆರೋಗ್ಯ ಪರಿಣಿತರ ಅಸಮಾಧಾನ

ಹೊಸದಿಲ್ಲಿ, ಮೇ 31: ಭಾರತವು 5ನೇ ಹಂತದ ಲಾಕ್‌ಡೌನ್‌ಗೆ ಸಿದ್ಧವಾಗುತ್ತಿರುವಂತೆಯೇ, ಕೊರೋನ ವೈರಸ್ ಹಾವಳಿಯನ್ನು ನಿಭಾಯಿಸುವ ಕೇಂದ್ರ ಸರಕಾರವು ಸಾಂಕ್ರಾಮಿಕ ರೋಗ ತಜ್ಞರ ಬದಲಿಗೆ ಅಧಿಕಾರಿಗಳನ್ನೇ ಹೆಚ್ಚು ಅವಲಂಭಿಸುತ್ತಿದೆ ಎಂದು ದೇಶದ ಮೂರು ಪ್ರಮುಖ ವೈದ್ಯಕೀಯ ವೃತ್ತಿಪರರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಸಾರ್ವಜನಿಕ ಆರೋಗ್ಯ ಸಂಸ್ಥೆ, ಇಂಡಿಯನ್ ಅಸೋಸಿಯೇಶನ್ ಆಫ್ ಪ್ರಿವೆಂಟಿವ್ ಆ್ಯಂಡ್ ಸೋಶಿಯಲ್ ಮೆಡಿಸಿನ್ ಹಾಗೂ ಭಾರತೀಯ ಸಾಂಕ್ರಾಮಿಕ ರೋಗ ತಜ್ಞರ ಸಂಘದ ಸದಸ್ಯರು ಇತ್ತೀಚೆಗೆ ಬಿಡುಗಡೆಗೊಳಿಸಿದ ಜಂಟಿ ಹೇಳಿಕೆಯೊಂದರಲ್ಲಿ ಈ ಅಸಾಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೋವಿಡ್-19 ಸೋಂಕಿನ ಸಾಮುದಾಯಿಕ ಹರಡುವಿಕೆಯು ಆರಂಭಗೊಂಡಿದೆ ಎಂದವರು ಹೇಳಿದ್ದಾರೆ.

ಸಾಮುದಾಯಿಕ ಔಷಧಿ ಕೇಂದ್ರದ ಡಾ.ಶಶಿಕಾಂತ್, ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್), ಬನಾರಸ್ ಹಿಂದೂ ವಿವಿಯ ಮಾಜಿ ಪ್ರೊಫೆಸರ್ ಡಾ.ಡಿ.ಸಿ.ಎಸ್. ರೆಡ್ಡಿ ಈ ಹೇಳಿಕೆಗೆ ಸಹಿಹಾಕಿದ ಪ್ರಮುಖ ಆರೋಗ್ಯ ತಜ್ಞರಾಗಿದ್ದಾರೆ.

ಕೋವಿಡ್-19 ನಿಯಂತ್ರಣಕ್ಕಾಗಿ ಭಾರತವು ಹೇರಿರುವ ಲಾಕ್‌ಡೌನ್ ಅತ್ಯಂತ ಕರಾಳವೆಂದು ಅರೋಗ್ಯತಜ್ಞರು ಬಣ್ಣಿಸಿದ್ದಾರೆ. ಕೋವಿಡ್-19ನಿಂದ ತತ್ತರಿಸಿರುವ ಭಾರತಕ್ಕೆ ಲಾಕ್‌ಡೌನ್ ಹೇರಿಕೆಯು , ದುರಂತಕಾರಿ ಹೊರೆಯಾಗಿದೆ ಎಂದವರು ಹೇಳಿದ್ದಾರೆ.

ಕೋವಿಡ್-19 ನಿರ್ವಹಣೆಯಲ್ಲಿ ಸರಕಾರವು ಅತಿಯಾಗಿ ಸಾಮಾನ್ಯ ಆಡಳಿತಾತ್ಮಕ ಅಧಿಕಾರಿಗಳನ್ನು ಅವಲಂಭಿಸಿದೆಯೇ ಹೊರತು ವೈದ್ಯಕೀಯ ತಜ್ಞರನ್ನಲ್ಲವೆಂದು, ಆರೋಗ್ಯ ಪರಿಣತರು ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳಿಗೆ ಹೋಲಿಸಿದರೆ ರೋಗ ಹರಡುವಿಕೆಯ ಬಗ್ಗೆ ಉತ್ತಮವಾದ ಗ್ರಹಿಕೆಯುಳ್ಳ ಸೋಂಕುತಜ್ಞರ ಜೊತೆ ಸಮಾಲೋಚನೆ ನಡೆಸಿರುತ್ತಿದ್ದಲ್ಲಿ, ಫಲಿತಾಂಶ ಉತ್ತಮವಾಗಿರಬಹುದಾಗಿತ್ತು ಎಂದು ಹೇಳಿಕೆಯು ತಿಳಿಸಿದೆ.

ಸಾಂಕ್ರಾಮಿಕ ರೋಗ ಹಾವಳಿಯ ಆರಂಭದಲ್ಲೇ ವಲಸೆ ಕಾರ್ಮಿಕರನ್ನು ಅವರ ಊರಿಗೆ ವಾಪಾಸಾಗಲು ಅವಕಾಶ ನೀಡಿದ್ದಲ್ಲಿ, ಪರಿಸ್ಥಿತಿ ಇಂದು ಭಿನ್ನವಾಗಿರುತ್ತಿತ್ತು ಎಂದವರು ಹೇಳಿದ್ದಾರೆ.

ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ತಾವು ರೂಪಿಸಿರುವ 11 ಅಂಶಗಳ ಕಾರ್ಯಸೂಚಿಯನ್ನು ತಜ್ಞರು ಮೋದಿ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಪರೀಕ್ಷಾ ಫಲಿತಾಂಶಗಳು ಸೇರಿದಂತೆ ಕೋವಿಡ್-19ಗೆ ಸಂಬಂಧಿಸಿದ ಎಲ್ಲಾ ದತ್ತಾಂಶಗಳನ್ನು ಬಹಿರಂಗಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ರಾಷ್ಟ್ರಾದ್ಯಂತ ಹೇರಿರುವ ಲಾಕ್‌ಡೌನ್‌ನ್ನು ರದ್ದುಪಡಿಸಬೇಕು ಹಾಗೂ ಅವುಗಳ ಬದಲಿಗೆ ಕೆಲವು ನಿರ್ದಿಷ್ಟ ನಿರ್ಬಂಧಗಳನ್ನು ಹೇರಬೇಕು ಎಂದು ಅದು ಸಲಹೆ ಮಾಡಿದೆ.

ವಾಡಿಕೆಯ ಆರೋಗ್ಯ ಸೇವೆಳ ಪುನಾರಂಭ, ರೋಗತಪಾಸಣೆ ವ್ಯವಸ್ಥೆಯನ್ನು ಹೆಚ್ಚಿಸುವುದು ಹಾಗೂ ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ಗರಿಷ್ಠ ಪ್ರಮಾಣದಲ್ಲಿ ಪಿಪಿಇ ಕಿಟ್ ಲಭ್ಯವಾಗುವಂತೆ ಮಾಡುವುದು ಇತ್ಯಾದಿ ಸಲಹೆಗಳನ್ನು ಆರೋಗ್ಯ ಪರಿಣಿತರು ಕೇಂದ್ರ ಸರಕಾರಕ್ಕೆ ನೀಡಿದ್ದಾರೆ.

ರವಿವಾರ ಭಾರತದಲ್ಲಿ ಕೋವಿಡ್ 19 ಪ್ರಕರಣಗಳು 1.83 ಲಕ್ಷವನ್ನು ದಾಟಿದೆ.

ಸಾಮುದಾಯಿಕ ಹರಡುವಿಕೆ ಆರಂಭ?

ಈಗಾಗಲೇ ಸೋಂಕಿನ ಸಾಮುದಾಯಿಕ ಹರಡುವಿಕೆಯು ದೇಶದ ವಿಶಾಲ ಜನವರ್ಗಗಳಲ್ಲಿ ಆರಂಭಗೊಂಡಿದ್ದು, ಕೋವಿಡ್-19 ಸೋಂಕನ್ನು ಈ ಹಂತದಲ್ಲಿ ತೊಲಗಿಸಬಹುದೆಂಬುದನ್ನು ನಿರೀಕ್ಷಿಸುವುದು ಅವಾಸ್ತವಿಕವಾದೀತು ಎಂದು ಆರೋಗ್ಯ ತಜ್ಞರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಪರಿಣಿತರ ಈ ಹೇಳಿಕೆಯು ದೇಶದಲ್ಲಿ ಕೊರೋನದ ಸಾಮು ದಾಯಿಕವಾಗಿ ಹರಡುತ್ತಿಲ್ಲವೆಂಬ ಮೋದಿ ಸರಕಾರದ ಹೇಳಿಕೆಗೆ ತದ್ವಿರುದ್ಧವಾದುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X