Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ...

‘ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....’

ಕೊರೋನ ನಿರ್ವಹಣೆ: ಸರಕಾರದ ವಿರುದ್ಧದ ಟೀಕೆ ಪ್ರಶಂಸೆಯಾಗಿ ಬದಲಾದಾಗ!

ವಾರ್ತಾಭಾರತಿವಾರ್ತಾಭಾರತಿ1 Jun 2020 2:26 PM IST
share
‘ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....’

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ. ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಪರೀಕ್ಷೆಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ  ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ. ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ.. ಇತ್ಯಾದಿ.

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ‘ಗುಜರಾತ್ ಮಾಡೆಲ್’ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ. ಇತ್ತೀಚೆಗೆ, ಇವೆಲ್ಲವನ್ನೂ  ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು. ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು

ಆದರೆ ಈ ಟೀಕೆಗಳು ದಿನಗಳೆದಂತೆ ಹೇಗೆ ಬದಲಾಗುತ್ತಾ ಹೋಗಿ ಪ್ರಶಂಸೆಗಳಾಗಿ ಮಾರ್ಪಾಡಾಯಿತು ಎನ್ನುವ ಕ್ರೋನಾಲಜಿಯನ್ನು ನೀವು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

"ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ"

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ  ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು!

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

"ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಅಲಹಾಬಾದ್ ಕೋರ್ಟು ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ  ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು"

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ  ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು.

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ....!

- ಶಿವಸುಂದರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X