Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಎ ಪ್ರತಿಭಟನಕಾರರನ್ನು...

ಸಿಎಎ ಪ್ರತಿಭಟನಕಾರರನ್ನು ಬಿಡುಗಡೆಗೊಳಿಸಿ: ಮೋದಿ, ಅಮಿತ್ ಶಾಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಕ್ಕೂಟದ ಪತ್ರ

ವಾರ್ತಾಭಾರತಿವಾರ್ತಾಭಾರತಿ1 Jun 2020 8:36 PM IST
share
ಸಿಎಎ ಪ್ರತಿಭಟನಕಾರರನ್ನು ಬಿಡುಗಡೆಗೊಳಿಸಿ: ಮೋದಿ, ಅಮಿತ್ ಶಾಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಕ್ಕೂಟದ ಪತ್ರ

ಹೊಸದಿಲ್ಲಿ, ಜೂ.1: ಭಾರತದಲ್ಲಿ ಹಲವಾರು ಮಾನವಹಕ್ಕುಗಳ ಹೋರಾಟ ಗಾರರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆಯೆಂದು ಆರೋಪಿಸಿ ಫ್ರಾನ್ಸ್ ಮೂಲದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಕ್ಕೂಟ (ಐಎಫ್‌ಎಚ್‌ಆರ್) ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆದ ಶಾಂತಿಯುತ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರೆಂಬ ಕಾರಣಕ್ಕಾಗಿ ಸಾಮಾಜಿಕ ಹೋರಾಟಗಾರರ ಬಂಧಿಸಿರುವ ಬಗ್ಗೆ ಅದು ಆತಂಕ ವ್ಯಕ್ತಪಡಿಸಿದೆ.

ದಿಲ್ಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿದ್ದ ವಿದ್ಯಾರ್ಥಿ ನಾಯಕಿಯರಾದ ದೇವಾಂಗನ ಕಾಲಿಟಾ ಹಾಗೂ ನಟಾಶಾ ನರ್ವಾಲ್ ಅವರ ಬಂಧನವನ್ನು ಕೂಡಾ ಅದು ಖಂಡಿಸಿದೆ. ನ್ಯಾಯಯುತವಾದ ಮಾನವಹಕ್ಕು ಹೋರಾಟ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ್ದಕ್ಕಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ ಎಂದ ಐಎಫ್‌ಎಚ್‌ಆರ್ ಅಸಮಾಧಾನ ವ್ಯಕ್ತಪಡಿಸಿದೆ.

ಮಾನವಹಕ್ಕು ಹೋರಾಟಗಾರರಾದ ಮೀರಾನ್ ಹೈದರ್, ಗುಲಿಫ್ಶಾ ಫಾತಿಮಾ, ಸಫೂರಾ ಝರ್ಗಾರ್, ಶಿಫಾವುರ್ರಹ್ಮಾನ್, ಆಸೀಫ್‌ಇಕ್ಬಾಲ್, ಅಖಿಲ್ ಗೊಗೊಯ್, ಖಫೀಲ್ ಖಾನ್ ಹಾಗೂ ಉಮರ್ ಖಾಲಿದ್ ಅವರ ಬಂಧನದ ಬಗ್ಗೆಯೂ ಐಎಫ್‌ಎಚ್‌ಆರ್ ಆತಂಕ ವ್ಯಕ್ತಪಡಿಸಿದೆ. ಇವರೆಲ್ಲರನ್ನು 2020ರಲ್ಲಿ ದೇಶಾದ್ಯಂತ ಭುಗಿಲೆದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾತ್ರ ವಹಿಸಿದ ಆರೋಪದಲ್ಲಿ ಬಂಧಿಸಲಾಗಿದೆ.

ಮಹಿಳೆಯರು ಸೇರಿದಂತೆ ಮಾನವಹಕ್ಕು ಹೋರಾಟಗಾರರನ್ನು ಬಂಧಿಸುವಾಗ ಸೂಕ್ತ ವಿಧಿವಿಧಾನಗಳನ್ನು ಅನುಸರಿಲ್ಲವೆಂದು ಪತ್ರವು ಆರೋಪಿಸಿದೆ. ಮಾನವಹಕ್ಕು ಹೋರಾಟಗಾರ್ತಿ ಝರ್ಗಾರ್ ಅವರು ಗರ್ಭಿಣಿಯಾಗಿದ್ದರೂ, ಅವರನ್ನು ಏಕಾಂತ ಬಂಧನದಲ್ಲಿರಿಸಲಾಗಿದೆ .ಸಿಎಎ ಅನ್ನು ವಿರೋಧಿಸಿದ್ದಕ್ಕೆ ಪ್ರತೀಕಾರವಾಗಿ ಶರ್ಜಿಲ್ ಇಮಾಮ್, ಖಾಲಿದ್ ಸೈಫಿ ಸೇರಿದಂತೆ ಹಲವಾರು ಮಾನವಹಕ್ಕು ಹೋರಾಟಗಾರರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯಡಿ ಬಂಧಿಸಿ, ಕಿರುಕುಳ ನೀಡಲಾಗುತ್ತಿದೆ ಎಂದು ಪತ್ರವು ಆಪಾದಿಸಿದೆ.

ಭಾರತ ಸರಕಾರವು ತಕ್ಷಣವೇ ಹಾಗೂ ನಿಶರ್ತವಾಗಿ ಎಲ್ಲಾ ಮಾನವಹಕ್ಕು ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಹಾಗೂ ಈ ಪ್ರಕರಣಗಳಲ್ಲಿ ಮಾನವಹಕ್ಕು ಆಯೋಗವು ಮಧ್ಯಪ್ರವೇಶಿಸಬೇಕೆಂದು ಐಎಫ್‌ಎಚ್‌ಆರ್ ಪತ್ರದಲ್ಲಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X