Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯ ಪೊಲೀಸ್ ವಸತಿಗೃಹ ಸಹಿತ 14...

ಉಡುಪಿಯ ಪೊಲೀಸ್ ವಸತಿಗೃಹ ಸಹಿತ 14 ಪ್ರದೇಶ ಸೀಲ್‌ಡೌನ್

ಜಿಲ್ಲೆಯ ಒಟ್ಟು 41 ಗ್ರಾಮಗಳಲ್ಲಿ ಕಂಟೇನ್ಮೆಂಟ್ ವಲಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ1 Jun 2020 10:39 PM IST
share
ಉಡುಪಿಯ ಪೊಲೀಸ್ ವಸತಿಗೃಹ ಸಹಿತ 14 ಪ್ರದೇಶ ಸೀಲ್‌ಡೌನ್

ಉಡುಪಿ, ಜೂ.1: ಕೊರೋನ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಉಡುಪಿ ನಗರದಲ್ಲಿರುವ ಪೊಲೀಸ್ ಅಧಿಕಾರಿಗಳ ವಸತಿ ಗೃಹ ಸಹಿತ ಜಿಲ್ಲೆ ಯಾದ್ಯಂತ ಒಟ್ಟು 14 ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಕಳೆದ ಐದು ದಿನಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 41 ಗ್ರಾಮಗಳಲ್ಲಿ ಕಂಟೇನ್ಮೆಂಟ್ ವಲಯವನ್ನು ಘೋಷಿಸಲಾಗಿದೆ.

ಉಡುಪಿ ತಾಲೂಕಿನಲ್ಲಿ ಸೋಂಕಿತ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ವಾಸವಾಗಿರುವ ಉಡುಪಿ ನಗರದ 6 ಮನೆಗಳಿರುವ ಒಂದು ವಸತಿ ಗೃಹವನ್ನು ಕಂಟೇನ್‌ಮೆಂಟ್ ವಲಯವಾಗಿ ಘೋಷಿಸಲಾಗಿದೆ ಅದೇ ರೀತಿ ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರದಲ್ಲಿರುವ ಎರಡು ಪ್ರತ್ಯೇಕ ಮನೆಗಳನ್ನು ಕಂಟೇನ್‌ಮೆಂಟ್ ಮತ್ತು ಇಡೀ ಪುತ್ತೂರು ಗ್ರಾಮವನ್ನು ಬಫರ್ ರೆನ್ ಆಗಿ ಘೋಷಣೆ ಮಾಡಲಾಗಿದೆ.

 ಬೈಂದೂರು ತಾಲೂಕಿನ ಕಿರಿಮಂಜೇಶ್ವರ, ಬೀಜೂರು, ಪಡುವರಿ, ಯಡ್ತರೆ ಹಾಗೂ ನಾಡ ಗ್ರಾಮದಲ್ಲಿರುವ ನಿರ್ದಿಷ್ಟ ಪ್ರದೇಶವನ್ನು ಕಂಟೇನ್ ‌ಮೆಂಟ್ ರೆನ್ ಆಗಿ ಘೋಷಿಸಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಾಡ ಗ್ರಾಮದ ಒಂದೇ ಮನೆಯ ನಾಲ್ವರಲ್ಲಿ ಕೊರೋನ ಪಾಸಿಟಿವ್ ಬಂದಿ ರುವ ಬಗ್ಗೆ ವರದಿಯಾಗಿದೆ.

ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಒಂದೇ ಮನೆಯಲ್ಲಿ ಐವರಿಗೆ ಕೊರೋನ ಪಾಸಿಟಿವ್ ಬಂದಿರುವುದರಿಂದ ಆ ಪ್ರದೇಶವನ್ನು ಕಂಟೇನ್ ಮೆಂಟ್ ರೆನ್ ಆಗಿ ಮಾಡಲಾಗಿದೆ. ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಒಂದೇ ದಿನ 15 ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಈ ಎರಡು ತಾಲೂಕಿನ 12 ಗ್ರಾವುಗಳನ್ನು ಸೀಲ್‌ಡೌನ್ ಮಾಡ ಲಾಗಿದೆ.

ಬ್ರಹ್ಮಾವರ ತಾಲೂಕಿನಲ್ಲಿ ಶಂಕರನಾರಾಯಣ ಪೊಲೀಸ್ ಸಿಬ್ಬಂದಿ ವಾಸ ವಾಗಿರುವ ಕೋಟ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ವಾಸ ವಾಗಿರುವ ಹೇರೂರು ಗ್ರಾಮವನ್ನು ಕಂಟೇನ್‌ಮೆಂಟ್ ರೆನ್ ಆಗಿ ಘೋಷಿಸಲಾಗಿದೆ. ಕಾರ್ಕಳ ತಾಲೂಕಿನ ನಲ್ಲೂರು ಮತ್ತು ಎರ್ಲಪಾಡಿ ಗ್ರಾಮದ ನಿಗದಿತ ಪ್ರದೇಶವನ್ನು ಸೀಲ್‌ಡೌನ್ ಮಾಡಿ, ಸಾರ್ವಜನಿಕರ ಸಂಚಾರ ನಿರ್ಬಂಧಿಸಿ, ಕ್ರಮ ತೆಗೆದುಕೊಳ್ಳಲಾಗಿದೆ.

ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಪಡುಹಿತ್ಲು ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರಲ್ಲಿ ಕೊರೋನ ಪಾಸಿಟಿವ್ ಧೃಡಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಕಂಟೇನ್‌ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ. ಸ್ಥಳಕ್ಕೆ ಕಾಪು ತಹಶೀಲ್ದಾರ್ ಮಹಮ್ಮದ್ ಇಸ್ಹಾಕ್, ಪಡುಬಿದ್ರಿ ಪಿಎಸ್‌ಐ ಸುಬ್ಬಣ್ಣ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿ.ಬಿ. ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X