Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೂಡಿನಬಳಿ ಯುವಕರಿಗೆ ಶೌರ್ಯ ಪ್ರಶಸ್ತಿ...

ಗೂಡಿನಬಳಿ ಯುವಕರಿಗೆ ಶೌರ್ಯ ಪ್ರಶಸ್ತಿ ನೀಡಿ, ಜೀವರಕ್ಷಕ ಸಾಮಗ್ರಿ ಒದಗಿಸಿ : ತಹಶಿಲ್ದಾರ್ ಗೆ ಎಸ್ ಡಿಪಿಐ ಮನವಿ

ವಾರ್ತಾಭಾರತಿವಾರ್ತಾಭಾರತಿ1 Jun 2020 11:10 PM IST
share
ಗೂಡಿನಬಳಿ ಯುವಕರಿಗೆ ಶೌರ್ಯ ಪ್ರಶಸ್ತಿ ನೀಡಿ, ಜೀವರಕ್ಷಕ ಸಾಮಗ್ರಿ ಒದಗಿಸಿ : ತಹಶಿಲ್ದಾರ್ ಗೆ ಎಸ್ ಡಿಪಿಐ ಮನವಿ

ಬಂಟ್ವಾಳ, ಜೂ.1: ನೆರೆ, ಪ್ರವಾಹ ಸಹಿತ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣಾ ಕಾರ್ಯದಲ್ಲಿ ನಿರಂತರ ತೊಡಗಿಸಿ ಕೊಂಡಿರುವ ಹಾಗೂ ನೀರು ಪಾಲದವರ ರಕ್ಷಣೆಗೆ ಕೂಡಲೇ ಧಾವಿಸುವ ಗೂಡಿನಬಳಿ, ಪಾಣೆಮಂಗಳೂರು ಪರಿಸರದ ಯುವಕರ ತ‍ಂಡಕ್ಕೆ ಫೈಬರ್ ದೋಣಿ ಸಹಿತ ಜೀವ ರಕ್ಷಕ ಸಾಮಗ್ರಿ ಒದಗಿಸುವುದರ ಜೊತೆಗೆ ಅವರು ಈವರೆಗೆ ಮಾಡಿರುವ ರಕ್ಷಣಾ ಕಾರ್ಯವನ್ನು ಪರಿಗಣಿಸಿ ರಾಜ್ಯ, ಕೇಂದ್ರ ಸರಕಾರದಿಂದ ಶೌರ್ಯ ಪ್ರಶಸ್ತಿಗೆ ತಾಲೂಕು, ಜಿಲ್ಲಾಡಳಿತ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಎಸ್.ಡಿ.ಪಿ.ಐ. ವತಿಯಿಂದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮ‌ನವಿ ಸೋಮವಾರ ಸಲ್ಲಿಸಲಾಯಿತು.

ಪ್ರತೀ ವರ್ಷ ಮಳೆಗಾಲದಲ್ಲಿ ನೇತ್ರಾವತಿ ನದಿ ತುಂಬಿ ಹರಿಯುವ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ನದಿ ಪಾತ್ರದ ತಗ್ಗು ಪ್ರದೇಶಗಳ ಮನೆಗಳು ಮುಳುಗಡೆಯಾಗುತ್ತವೆ. ಈ ಸಂದರ್ಭದಲ್ಲಿ ಇಲ್ಲಿನ ಕೆಲವು ಯುವಕರು ತಮ್ಮ ಜೀವದ ಹಂಗನ್ನು ತೊರೆದು ಸಂತ್ರಸ್ತರನ್ನು ರಕ್ಷಣೆ ಮಾಡುತ್ತಾರೆ. ಯಾರಾದರೂ ನೀರು ಪಾಲಾದರೆ ಕೂಡಲೇ ಧಾವಿಸಿ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ. ಹಲವು ಜೀವಗಳನ್ನು ರಕ್ಷಿಸಿದ್ದಾರೆ. ಅಲ್ಲದೆ ಜಿಲ್ಲೆ, ಹೊರ ಜಿಲ್ಲೆಗಳಲ್ಲಿ ನೀರು ಪಾಲಾದವರ ಮೃತದೇಹವನ್ನು ಶೋಧ ನಡೆಸಿ ನೀರಿನಿಂದ ಮೇಲೆಕ್ಕೆತ್ತಲು ಅಧಿಕಾರಿಗಳು ಈ ಯುವಕರ ಸಹಾಯ ಪಡೆಯುತ್ತಾರೆ.

ಇತ್ತೀಚೆಗೆ ನಿಶಾಂತ್ ಎಂಬ ಯುವಕ ಆತ್ಮಹತ್ಯೆ ಮಾಡಲು ನೇತ್ರಾವತಿ ನದಿಗೆ ಹಾರಿದಾಗ ಆತನನ್ನು ಬದುಕಿಸಲು ತಂಡದ ಮುಹಮ್ಮದ್, ತೌಸೀಫ್, ಸಮೀರ್, ಝಾಹಿದ್ ಮತ್ತು ಆರಿಫ್ ಪಿ.ಜೆ. ಎಂಬವರು ಕೊನೆ ಕ್ಷಣದವರೆಗೆ ಪ್ರಯತ್ನಿಸಿದ್ದಾರೆ‌. ಈ ಯುವಕರನ್ನು ವಿವಿಧ ಸಂಘ, ಸಂಸ್ಥೆಗಳು, ಪಕ್ಷಗಳಿಂದ ಸನ್ಮಾನಿಸಲಾಗಿದೆ. ಆದರೆ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ಯುವಕರ ಶೌರ್ಯವನ್ನು ಗುರುತಿಸಿಲ್ಲ ಎಂದು ಮನವಿಯಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ. 

ಯುವಕರ ತಂಡಕ್ಕೆ ತರಬೇತಿ ನೀಡುವ ಜೊತೆಗೆ ದೋಣಿ ಸಹಿತ ಜೀವ ರಕ್ಷಕ ಸಾಮಗ್ರಿಗಳನ್ನು ಕೂಡಲೇ ಒದಗಿಸಬೇಕು. ಜೀವ ರಕ್ಷಣೆ ಮಾಡಿದವರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ನೀಡುವ ಶೌರ್ಯ ಪ್ರಶಸ್ತಿಗಳನ್ನು ಈ ಯುವಕರಿಗೆ ನೀಡಲು ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಕೂಡಲೇ ಸರಕಾರಕ್ಕೆ ಶಿಫಾರಸು ಮಾಡಬೇಕು. ಅಲ್ಲದೆ ಯುವಕರಿಗೆ ಪ್ರೋತ್ಸಾಹ ಧನ ನೀಡಬೇಕು. ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಹಲವು ಆತ್ಮಹತ್ಯೆ ಪ್ರಕರಣಗಳು ನಡೆದಿರುವುದರಿಂದ ಈ ಪ್ರದೇಶದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಸದಸ್ಯೆರಾದ ಝೀನತ್ ಫೈರೋಜ್, ಸಂಶಾದ್ ಬಾನು, ಎಸ್ ಡಿಪಿಐ ಗೂಡಿನಬಳಿ ವಾರ್ಡ್ ಸಮಿತಿ ಅಧ್ಯಕ್ಷ ಸಫೀವುಲ್ಲಾ, ಕಾರ್ಯದರ್ಶಿ ಫಿರೋಝ್, ಪಾಪ್ಯುಲರ್ ಫ್ರಂಟ್ ವಲಯಾಧ್ಯಕ್ಷ ಅಬ್ದುಲ್ ರಹಿಮಾನ್ ಗೂಡಿನಬಳಿ, ಎಸ್ ಡಿಪಿಐ ಕಾರ್ಯಕರ್ತರಾದ ಅನ್ಸಾರ್ ಮತ್ತು ಅನ್ವರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X