Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 70 ವರ್ಷಗಳಲ್ಲಿ ಆಗದ ಸಾಧನೆ ಒಂದೇ...

70 ವರ್ಷಗಳಲ್ಲಿ ಆಗದ ಸಾಧನೆ ಒಂದೇ ವರ್ಷದಲ್ಲಿ ಆಗಿದೆ: ಡಿಸಿಎಂ ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ1 Jun 2020 11:35 PM IST
share
70 ವರ್ಷಗಳಲ್ಲಿ ಆಗದ ಸಾಧನೆ ಒಂದೇ ವರ್ಷದಲ್ಲಿ ಆಗಿದೆ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ, ಜೂ.1: ಕಳೆದ 70 ವರ್ಷಗಳಲ್ಲಿ ಆಗದ ಎಷ್ಟೋ ಅಭಿವೃದ್ಧಿ ಕಾರ್ಯಗಳನ್ನು ಮೋದಿ 2.0 ಸರಕಾರ ಮೊದಲ ವರ್ಷದಲ್ಲೇ ಸಾಧಿಸಿ, ದೇಶದಲ್ಲಿ ದೊಡ್ಡ ಮಟ್ಟದ ಸುಧಾರಣೆ ತರಲು ಕಾರಣವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರಿ ಒಂದು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ರಾಮನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು, ಜನಾದೇಶದೊಂದಿಗೆ 2019 ಮೇ 30ರಂದು ಎರಡನೇ ಅವಧಿಗೆ ಮೋದಿ ಸರಕಾರ ಅಧಿಕಾರಕ್ಕೆ ಬಂತು. ಈ ಜನಾದೇಶವನ್ನು ಉತ್ತಮ ಆಡಳಿತ ನೀಡಲು ಬಳಸಿಕೊಂಡು, ದೇಶಕ್ಕೆ ಸ್ಥಿರ ಸರಕಾರ ಕೊಟ್ಟ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ತಂತ್ರಜ್ಞಾನ ಬಳಕೆ ಮೂಲಕ ಕಳೆದ 70 ವರ್ಷಗಳಲ್ಲಿ ಆಗದ ಕೆಲಸಗಳನ್ನು ದೃಢ ಸಂಕಲ್ಪದೊಂದಿಗೆ ಮೋದಿ 2.0 ಸರಕಾರ ಸಾಧಿಸಿ ತೋರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮೊದಲ ಅವಧಿಯಲ್ಲಿ ಜಾರಿ ತಂದ ಜನಧನ್, ವಿಮೆ, ಪಿಂಚಣಿ, ಆಯುಷ್ಮಾನ್, ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ವಚ್ಛ ಭಾರತ, ಉಜಾಲಾ, ಉಜ್ವಲಾ, ಜನೌಷಧಿ ಮುಂತಾದ ಜನಪರ ಯೋಜನೆಗಳು ಹಾಗೂ ನೋಟ್ ಬ್ಯಾನ್, ಹಣಕಾಸು ವಹಿವಾಟಿಗೆ ಆಧಾರ್ ಕಡ್ಡಾಯಗೊಳಿಸುವ ಕಠಿಣ ನಿರ್ಧಾರಗಳು ದೇಶಕ್ಕೆ ಭದ್ರ ಬುನಾದಿಯಾಗಿವೆ. 30 ಕೋಟಿ ಜನರನ್ನು ಹೊಸದಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ತಂದ ಸರಕಾರ, ಯೋಜನೆಯ ಲಾಭವನ್ನು ಅವರ ಖಾತೆಗೆ ನೇರವಾಗಿ ಜಮೆಯಾಗುವಂತೆ ನೋಡಿಕೊಂಡು ಆಡಳಿತದಲ್ಲಿ ಪಾರದರ್ಶಕತೆ ತಂದಿತು. ಮುಖ್ಯವಾಗಿ, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸುವಂಥ ಮಹತ್ವದ ನಿರ್ಣಯಗಳೇ ಎರಡನೇ ಅವಧಿಗೂ ಜನ ಮೋದಿ ಸರಕಾರವನ್ನು ಆಯ್ಕೆ ಮಾಡಲು ಕಾರಣವಾದವು ಎಂದರು.

ತ್ರಿವಳಿ ತಲಾಖ್ ನಿಷೇಧ: ತ್ರಿವಳಿ ತಲಾಖ್ ನಿಷೇಧಿಸುವ 'ಮುಸ್ಲಿಂ ಮಹಿಳೆ (ವೈವಾಹಿಕ ಹಕ್ಕುಗಳು) ವಿಧೇಯಕ 2019’ ಜಾರಿಗೆ ತರುವ ಮೂಲಕ ಮುಸ್ಲಿಂ ಮಹಿಳೆಯರ ವಿರುದ್ಧ ನಡೆಯುತ್ತಿದ್ದ ದೌರ್ಜನ್ಯವನ್ನು ಮೋದಿ ಸರಕಾರ ತಡೆಗಟ್ಟಿದೆ. ಜತೆಗೆ, ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿತಂದು, ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಬಂದಿದೆ ಎಂದು ಹೇಳಿದರು.

ಕೊವಿಡ್ ನಿರ್ವಹಣೆ ವಿಶ್ವಕ್ಕೆ ಪ್ರೇರಣೆ: ಕೊವಿಡ್‍ನಂತಹ ಪರಿಸ್ಥಿತಿಯಲ್ಲಿ 132 ಕೋಟಿ ಜನರ ರಕ್ಷಣೆಗೆ ಬಂದವರು ಪ್ರಧಾನಿ. ಅಗತ್ಯ ಕ್ರಮ ವಹಿಸದೇ ಸೋಂಕು ವ್ಯಾಪಕವಾಗಿ ಬೇರೆ ದೇಶಗಳು ತತ್ತರಿಸಿಹೋದ ಸಂದರ್ಭದಲ್ಲಿ ಇಡೀ ವಿಶ್ವ ಈಗ ಭಾರತದತ್ತ ಬೆರಗಿನಿಂದ ನೋಡುವಂತಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X