Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ ಸಮೀಪದ ಏತಮೊಗರುವಿನಲ್ಲಿ...

ಗುರುಪುರ ಸಮೀಪದ ಏತಮೊಗರುವಿನಲ್ಲಿ ಲಕ್ಷಾಂತರ ರೂ. ತರಕಾರಿ ನಷ್ಟ

ಕಲ್ಕತ್ತ ಮೂಲದ ಕೃಷಿಕ ಜಾವೆದ್ ಅಲಿಯ ಗೋಳು !

ವಾರ್ತಾಭಾರತಿವಾರ್ತಾಭಾರತಿ2 Jun 2020 11:13 PM IST
share
ಗುರುಪುರ ಸಮೀಪದ ಏತಮೊಗರುವಿನಲ್ಲಿ ಲಕ್ಷಾಂತರ ರೂ. ತರಕಾರಿ ನಷ್ಟ

ಗುರುಪುರ, ಜೂ.2: ಗುರುಪುರ ಸಮೀಪದ ಏತಮೊಗರುವಿನ ಸುಮಾರು 25 ಎಕರೆ ಜಮೀನಿನಲ್ಲಿ ನಾನಾ ಬಗೆಯ ತರಕಾರಿ ಬೆಳೆದ ಕಲ್ಕತ್ತಾ ಮೂಲದ ಜಾವೆದ್ ಅಲಿ ಮತ್ತವರ ಕುಟುಂಬ ಲಾಕ್‌ಡೌನ್‌ನಿಂದ ಸಂಪೂರ್ಣ ನಷ್ಟ ಅನುಭವಿಸಿದ್ದು, ಸರಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಐದಾರು ವರ್ಷದಿಂದ ಬದನೆ, ಸೋರೆಕಾಯಿ ಬೂದುಕುಂಬಳಕಾಯಿ, ಸೌತೆ, ಆಗಲಕಾಯಿ, ಬೆಂಡೆಕಾಯಿ ಜೊತೆಗೆ ಕಲ್ಲಂಗಡಿ ಬೆಳೆಸುತ್ತಿ ರುವ ಜಾವೆದ್ ಅಲಿಗೆ ಈ ಬಾರಿ ಆಕಾಶವೇ ತಲೆ ಮೇಲೆ ಬಿದ್ದಂತಾಗಿದೆ. ಪ್ರತಿ ವರ್ಷವೂ ನಗರದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಇವರು, ಈ ಬಾರಿ ಕೊರೋನ-ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ.

ನಿರೀಕ್ಷೆಗೂ ಮೀರಿದ ತರಕಾರಿ ಉತ್ಪಾದನೆಯಾದರೂ ಕೂಡ ಸಾಗಾಟಕ್ಕೆ ವಾಹನ, ಗ್ರಾಹಕರು ಮತ್ತು ಸೂಕ್ತ ಮಾರುಕಟ್ಟೆಯೂ ಇಲ್ಲದೆ ಕಂಗಾಲಾಗಿದ್ದಾರೆ. ಹಾಗಾಗಿ ಕೊಳೆಯುವ ಬದಲು ಕಡಿಮೆ ಬೆಲೆಗೆ ಸ್ಥಳೀಯರಿಗೆ ಮಾರಾಟ ಮಾಡುತ್ತಿದ್ದಾರೆ. ಇದೀಗ ತರಕಾರಿ ಖರೀದಿಸು ವವರೂ ಇಲ್ಲದೆ ಮಾರಾಟಕ್ಕೂ ಅವಕಾಶವಿಲ್ಲದೆ ಏಳು ಎಕರೆ ಜಮೀನಿನಲ್ಲಿ ಬೆಳೆದ ಬದನೆ, 1 ಎಕರೆ ಜಮೀನಿನಲ್ಲಿ ಬೆಳೆದ ಆಗಲಕಾಯಿ ಹಾಗೂ ಸೋರೆಕಾಯಿ, ಬೂದುಕುಂಬಳ ಕೊಳೆತು ಭೂಮಿ ಪಾಲಾಗಿದೆ.

ಸರಕಾರದ ಯಾವುದೇ ನೆರವಿಲ್ಲದೆ, ಸ್ಥಳೀಯರ ಹಡೀಲು ಗದ್ದೆಗಳನ್ನು ಲೀಸ್‌ಗೆ ಪಡೆದು, ಫಲ್ಗುಣಿ ನದಿ ನೀರು ಬಳಸಿಕೊಂಡು ಕಳೆದ ಐದು ವರ್ಷಗಳಿಂದ ಜಾವೆದ್ ಅಲಿ ಮತ್ತವರ ಕುಟುಂಬದ ಸದಸ್ಯರು ಇಲ್ಲಿ ಕಷ್ಟಪಟ್ಟು ತರಕಾರಿ ಬೆಳೆಸುತ್ತಿದ್ದಾರೆ. ನಷ್ಟ ಅನುಭವಿಸಿದ ಬಳಿಕ ಸಾವಿರಾರು ಗಿಡಗಳನ್ನು ಕಿತ್ತು ತೆಗೆಯಲಾಗಿದೆ. ಎಲ್ಲೆಡೆ ಹಾಳಾದ ಬದನೆ ಬಿದ್ದು, ಹಸಿರು ಪ್ರದೇಶವೀಗ ಹಳದಿಮಯವಾಗಿದೆ.

ಕಳೆದ ಮೂರು ತಿಂಗಳಲ್ಲಿ ದೂರದ ಊರುಗಳಿಂದ ಬಂದಿರುವ ಸುಮಾರು 15 ಮಂದಿ ಕೃಷಿ ಕೂಲಿ ಕಾರ್ಮಿಕರಿಗೆ ತಿಂಗಳಿಗೆ 12,000 ರೂಪಾಯಿ ವೇತನ ನೀಡುತ್ತಿದ್ದ ನಾನು ಇದೀಗ ನಷ್ಟದಿಂದ ಸಂಪೂರ್ಣ ಸೋತು ಹೋಗಿದ್ದೇನೆ. ಮುಂದಿನ ತರಕಾರಿ ಸೀಸನ್ ಹೊತ್ತಿಗೆ ಇಲ್ಲಿ ತರಕಾರಿ ಬೆಳೆಯಬೇಕಿದ್ದರೆ, ಸರಕಾರದ ನೆರವು ಬೇಕಿದೆ. ಸ್ಥಳೀಯರಲ್ಲಿ ನನ್ನ ಅಳಲು ತೋಡಿಕೊಂಡಿದ್ದೇನೆ. ನಾನು ಹೊರ ರಾಜ್ಯದವನಾದರೂ ಇಲ್ಲಿನ ಮಣ್ಣು ನನ್ನ ಕೈ ಬಿಟ್ಟಿಲ್ಲ. ಮಂಗಳೂರಿನ ಮಾರುಕಟ್ಟೆಗೆ ದಿನನಿತ್ಯ ತರಕಾರಿ ಹಾಕುತ್ತಾ ಬಂದಿದ್ದೇನೆ. ಈಗ ಕೊರೋನ-ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವೆ. ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸರಕಾರದ ನೆರವಿನ ನಿರೀಕ್ಷೆಯಲ್ಲಿರುವೆ ಎಂದು ಜಾವೆದ್ ಅಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X