Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ವಿಶೇಷ...

ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ವಿಶೇಷ ರಿಯಾಯಿತಿ: ಡಾ.ಅಶ್ವತ್ಥನಾರಾಯಣ

ಇಎಸ್‍ಡಿಎಂ ಉದ್ಯಮಗಳಿಗೆ ಮುಕ್ತ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ2 Jun 2020 11:31 PM IST
share
ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ವಿಶೇಷ ರಿಯಾಯಿತಿ: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಜೂ.2: ಐಟಿ, ಬಿಟಿ ಮತ್ತು ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಹೂಡಿಕೆ ಮಾಡುವವರಿಗೆ ರಾಜ್ಯ ಸರಕಾರದಿಂದ ಹಲವು ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಗಳವಾರ ನಗರದ ಎಂ.ಎಸ್.ಬಿಲ್ಡಿಂಗ್‍ನಲ್ಲಿರುವ ಸಭಾಂಗಣದಲ್ಲಿ ಇನ್ವೆಸ್ಟ್ ಇಂಡಿಯಾ ವತಿಯಿಂದ ಪ್ರಮುಖ ರಾಜ್ಯಗಳ ಐಟಿ ಇಲಾಖೆ ಪ್ರಮುಖರು ಹಾಗೂ ಕಂಪೆನಿಗಳ ಮುಖ್ಯಸ್ಥರ ಜತೆ ಏರ್ಪಡಿಸಿದ್ದ ವೀಡಿಯೊ ಸಂವಾದದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಹೂಡಿಕೆದಾರರಿಗೆ ಭೂ ಸ್ವಾಧೀನ, ತೆರಿಗೆ ಮುಂತಾದ ವಿಚಾರದಲ್ಲಿ ಈಗಾಗಲೆ ಸರಕಾರ ಹಲವು ವಿನಾಯಿತಿಗಳನ್ನು ನೀಡುತ್ತಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಕರ್ನಾಟಕ ಹೂಡಿಕೆ ಸ್ನೇಹಿ ಆಡಳಿತ ಇರುವ ರಾಜ್ಯವಾಗಿದ್ದು, ಉದ್ಯಮಿಗಳು ಇದರ ಅನುಕೂಲ ಪಡೆದುಕೊಳ್ಳಬೇಕೆಂದು ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇಎಸ್‍ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟೆಮ್ ವಿನ್ಯಾಸ ಮತ್ತು ಉತ್ಪಾದನೆ) ವಲಯದಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದ್ದು, ಜಾಗತಿಕ ಹೂಡಿಕೆಗಳನ್ನು ಆಕರ್ಷಿಸಲು ಸಮರ್ಥವಾಗಿದೆ. ನುರಿತ ವೃತ್ತಿಪರರು, ಅಪರಿಮಿತ ಅವಕಾಶಗಳಿರುವ ರಾಜ್ಯ ನಮ್ಮದು. ಇಎಸ್‍ಡಿಎಂ ವಲಯ ಸೇರಿದಂತೆ ಐಟಿ-ಬಿಟಿ ಹೂಡಿಕೆಗೆ ಹೇರಳ ಅವಕಾಶ ಇದ್ದು, ಇದನ್ನು ಬಳಸಿಕೊಳ್ಳುವಂತೆ ಕಂಪನಿಗಳನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯ ಎಲ್ಲರಿಗೂ ಸಲ್ಲುವಂತದ್ದು ಉದ್ಯಮಿಗಳಿಗೆ ಪೂರಕ ವಾತಾವರಣ, ಐಟಿ ಕೌಶಲ, ಮಾನವ ಸಂಪನ್ಮೂಲ ಎಲ್ಲವೂ ಇಲ್ಲಿ ಲಭ್ಯವಿದೆ. ಹಾಗಾಗಿ, ನಮ್ಮ ಸರ್ಧೆ ಇತರ ರಾಜ್ಯಗಳ ಜತೆಗಲ್ಲ ಬದಲಾಗಿ ಪ್ರಮುಖ ರಾಷ್ಟ್ರಗಳು ಹಾಗೂ ಕಂಪನಿಗಳೊಂದಿಗೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಹೈಟೆಕ್ ಉದ್ಯಮ ಅದರಲ್ಲೂ ವಿಶೇಷವಾಗಿ ಇಎಸ್‍ಡಿಎಂ ವಲಯದ ಕೇಂದ್ರ ಕರ್ನಾಟಕ ಎಂಬುದು ಗಮನಾರ್ಹ. ಇಎಸ್‍ಡಿಎಂ ರಫ್ತಿನಲ್ಲಿ ರಾಜ್ಯದ ಪಾಲು ಶೇ.64ರಷ್ಟಿದೆ. ನಮ್ಮ ರಾಜ್ಯ ಅತಿದೊಡ್ಡ ಚಿಪ್ ವಿನ್ಯಾಸ ಕೇಂದ್ರವಾಗಿದ್ದು, ದೇಶದ ಶೇ. 70 ರಷ್ಟು ಚಿಪ್ ವಿನ್ಯಾಸಕರಿಗೆ ನೆಲೆಯಾಗಿದೆ. ನಮ್ಮ ಕೆಇಎಸ್‍ಡಿಎಂ ನೀತಿ 2017-2022 ರಲ್ಲಿ ಉಲ್ಲೇಖಿಸಿರುವಂತೆ, ಈ ಅವಧಿಯಲ್ಲಿ 2000 ಇಎಸ್‍ಡಿಎಂ ಸ್ಟಾರ್ಟ್‍ಅಪ್‍ಗಳ ಬೆಳವಣಿಗೆಗೆ ಉತ್ತೇಜಿಸುವ ಜತೆಗೆ 2025ರ ವೇಳೆಗೆ 20 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಕೌಶಲ ಅಭಿವೃದ್ಧಿಗೆ ಒತ್ತು ನೀಡುವ ಜತೆಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

ಉದ್ಯಮ ಸ್ನೇಹಿ ಕಾರ್ಮಿಕ ಕಾನೂನುಗಳು, ಹಿತಕರವಾದ ಹವಾಮಾನ, ಕಾನೂನು ಮತ್ತು ಸುವ್ಯವಸ್ಥೆ ಪಾಲನೆ, ನುರಿತ ವೃತ್ತಿಪರರು, ಕಾಸ್ಮೋಪಾಲಿಟನ್ ಪರಿಸರ, ಹೂಡಿಕೆಗೆ ಪೂರಕವಾದ ನೀತಿಗಳು ಮತ್ತು ಉದ್ಯಮ ಸ್ಥಾಪನೆಗೆ ಏಕ ಗವಾಕ್ಷಿ ವ್ಯವಸ್ಥೆ ಇರುವುದರಿಂದ ಕರ್ನಾಟಕ ಹಲವು ವಿದೇಶಿ ಹೂಡಿಕೆದಾರರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ಇಎಸ್‍ಡಿಎಂ ವಲಯದಲ್ಲಿ ಲಭ್ಯವಿರುವ ಅಪರಿಮಿತ ಅವಕಾಶಗಳನ್ನು ಬಳಸಿಕೊಳ್ಳಲು ಎಲ್ಲ ಕಂಪನಿಗಳಿಗೆ ಕರ್ನಾಟಕ ಮುಕ್ತ ಆಹ್ವಾನ ನೀಡುತ್ತದೆ. ಮುಂಬರುವ ದಿನಗಳಲ್ಲಿ ಇಎಸ್‍ಡಿಎಂ ವಲಯವನ್ನು ಉತ್ತುಂಗಕ್ಕೆ ಒಯ್ಯವಲ್ಲಿ ನಮ್ಮ ಜತೆ ಕೈಜೋಡಿಸಲು ಸಭೆಯಲ್ಲಿ ಮನವಿ ಮಾಡಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಇನ್ವೆಸ್ಟ್ ಇಂಡಿಯಾ ಸಿಇಒ ದೀಪಕ್ ಬಾಗ್ಲಾ, ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಅಜಯ್ ಪ್ರಕಾಶ್, ಜಂಟಿ ಕಾರ್ಯದರ್ಶಿ ಸೌರಭ್ ಗೌರ್, ಐಟಿ ಬಿಟಿ, ವಿಜ್ಞಾನ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಹೂಡಿಕೆ ತಜ್ಞ ರಾಘವ್ ಗುಪ್ತಾ, ಇನ್ವೆಸ್ಟ್ ಇಂಡಿಯಾದ ಎಎಸ್‍ಡಿಎಂ ಮುಖ್ಯಸ್ಥ ಅತುಲ್ ಬಿಸ್ತಾ, ಆಂಧ್ರಪ್ರದೇಶದ ವಿಶೇಷ ಮುಖ್ಯಕಾರ್ಯದರ್ಶಿ ಕರಿಕಾಲ್ ವಾಲ್ವಾನ್, ಹರಿಯಾಣದ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಕುರ್ ಗುಪ್ತ, ತಮಿಳುನಾಡಿನ ಕೈಗಾರಿಕೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ತಿರು ಎನ್ ಮುರುಘಾನಂದಮ್ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X