Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರೀಚಿಕೆಯಾದ ರಸ್ತೆ ಸಂಪರ್ಕ ಸೌಲಭ್ಯ:...

ಮರೀಚಿಕೆಯಾದ ರಸ್ತೆ ಸಂಪರ್ಕ ಸೌಲಭ್ಯ: ಮಹಿಳೆಯ ಮೃತದೇಹವನ್ನು ಕೋಲಿಗೆ ಕಟ್ಟಿ ಹೊತ್ತು ಸಾಗಿದ ಕುಟುಂಬಸ್ಥರು

ವಾರ್ತಾಭಾರತಿವಾರ್ತಾಭಾರತಿ2 Jun 2020 11:57 PM IST
share
ಮರೀಚಿಕೆಯಾದ ರಸ್ತೆ ಸಂಪರ್ಕ ಸೌಲಭ್ಯ: ಮಹಿಳೆಯ ಮೃತದೇಹವನ್ನು ಕೋಲಿಗೆ ಕಟ್ಟಿ ಹೊತ್ತು ಸಾಗಿದ ಕುಟುಂಬಸ್ಥರು

ಚಿಕ್ಕಮಗಳೂರು, ಜೂ.2: ಆಧುನಿಕ ಕಾಲದಲ್ಲೂ ನಾಗರಿಕ ಸೌಲಭ್ಯಗಳಿಂದ ವಂಚಿತರಾಗಿರುವ ಕಾಫಿನಾಡಿನ ಕುಗ್ರಾಮವೊಂದರಲ್ಲಿ ರಸ್ತೆ, ಸೇತುವೆಯ ಸೌಲಭ್ಯಗಳ ಕೊರತೆಯಿಂದಾಗಿ ಮೃತದೇಹವೊಂದನ್ನು ಕೋಲಿಗೆ ಕಟ್ಟಿಕೊಂಡು ಸಾಗಿಸಿದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಹೋಬಳಿ ವ್ಯಾಪ್ತಿಯಲಿರುವ ಕಳಕೋಡು ಮೇಗಲಮಕ್ಕಿ ಸಮೀಪದ ಮನುಕುಂಬ್ರಿ ಎಂಬ ಗಿರಿಜನರೇ ವಾಸವಿರುವ ಗ್ರಾಮದಲ್ಲಿ ಈ ಘಟನೆ ವರದಿಯಾಗಿದ್ದು, ಕಳಸ ಪಟ್ಟಣದಿಂದ ಸುಮಾರು 15 ಕಿಮೀ ದೂರವಿರುವ ಈ ಗಿರಿಜನರ ಹಾಡಿಯಲ್ಲಿ ಸುಮಾರು 50 ವರ್ಷದ ಶಾರದಮ್ಮ ಎಂಬ ಮಹಿಳೆ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಗ್ರಾಮಕ್ಕೆ ಹಿಂದಿನಿಂದಲೂ ಯಾವುದೇ ರಸ್ತೆ ಸಂಪರ್ಕ ಇಲ್ಲದ ಪರಿಣಾಮ ಯಾವುದೇ ವಾಹನಗಳು ಬರಲು ಸಾಧ್ಯವಿರದ ಕಾರಣ ಶಾರದಮ್ಮ ಅವರ ಕುಟುಂಬಸ್ಥರು ಮಹಿಳೆಯನ್ನು ಕಂಬಳಿಯಲ್ಲಿ ಸುತ್ತಿಕೊಂಡು ಕೋಲಿಗೆ ಹಗ್ಗದಲ್ಲಿ ಕಟ್ಟಿ ಹೊತ್ತುಕೊಂಡು ಬಂದು ಕಳಸ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು.

ಕಳೆದ ಮೂರು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಮಹಿಳೆ ವೈದ್ಯರ ಚಿಕಿತ್ಸೆಗೆ ಸ್ಪಂದಿಸದ ಪರಿಣಾಮ ಮಂಗಳವಾರ ಸಂಜೆ ವೇಳೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತ ಮಹಿಳೆಯನ್ನು ಕಳಸ ಪಟ್ಟಣದಿಂದ ಕಳಸಕೋಡು ಗ್ರಾಮದವರೆಗೆ ಆಂಬುಲೆನ್ಸ್ ನಲ್ಲಿ ಶವವನ್ನು ಕೊಂಡೊಯ್ದ ಕುಟುಂಬಸ್ಥರು ಕಳಕೋಡು ಗ್ರಾಮದಿಂದ ಮಹಿಳೆಯ ಶವವನ್ನು ಕಂಬಳಿಯಲ್ಲಿ ಸುತ್ತಿ ಕಂಬಕ್ಕೆ ಕಟ್ಟಿಕೊಂಡು ಮನುಕುಂಬ್ರಿ ಗ್ರಾಮಕ್ಕೆ ಹೊತ್ತು ಸಾಗಿಸಿದ್ದಾರೆಂದು ತಿಳಿದು ಬಂದಿದೆ.

ಮನುಕುಂಬ್ರಿ ಗ್ರಾಮದಲ್ಲಿನ ಗಿರಿಜನ ಹಾಡಿ ಕಳೆದ ಅನೇಕ ವರ್ಷಗಳಿಂದ ನಾಗರಿಕ ಸೌಲಭ್ಯಗಳಿಂದ ವಂಚಿತವಾಗಿದ್ದು, ಈ ಗ್ರಾಮಕ್ಕೆ ರಸ್ತೆಯಂತಹ ನಾಗರಿಕ ಸೌಲಭ್ಯಗಳು ಇನ್ನೂ ಮರಿಚೀಕೆಯಾಗಿದೆ. ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವಂತೆ ನಿವಾಸಿಗಳು ಅನೇಕ ಬಾರಿ ಸಂಬಂಧಿಸಿದ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡರೂ ಇದುವರೆಗೂ ರಸ್ತೆ ಸಂಪರ್ಕದ ಭಾಗ್ಯ ಈ ಗ್ರಾಮದ ಜನರಿಗೆ ಧಕ್ಕಿಲ್ಲ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಕೋಲಿಗೆ ಕಟ್ಟಿಕೊಂಡು ಹೊತ್ತು ಸಾಗಿದ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದ್ದು, ಈ ಭಾಗದ ಶಾಸಕರು, ಸಚಿವರು, ಜನಪ್ರತನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಧುನಿಕ ಕಾಲದಲ್ಲಿ ಮನುಷ್ಯ ಚಂದ್ರನ ಮೇಲೆ ಕಾಲಿಡುವಂತಹ ತಂತ್ರಜ್ಞಾನದ ಪ್ರಗತಿಯಾಗಿದ್ದರೂ ಆದಿವಾಸಿಗಳು ವಾಸಿಸುವ ಕುಗ್ರಾಮಗಳಿಗೆ ರಸ್ತೆಯಂತಹ ಮೂಲಸೌಕರ್ಯಗಳನ್ನು ಕಲ್ಪಿಸದ ಸರಕಾರಗಳಿಗೆ ಈ ಘಟನೆ ನಿಜಕ್ಕೂ ತಲೆತಗ್ಗಿಸುವಂತಹ ವಿಚಾರವಾಗಿದೆ ಎಂದು ಜಿಲ್ಲೆಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X