Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಫ್ಯಾಕ್ಟ್ ಚೆಕ್: ಭಾರತವನ್ನು ಬೆಂಬಲಿಸಿ...

ಫ್ಯಾಕ್ಟ್ ಚೆಕ್: ಭಾರತವನ್ನು ಬೆಂಬಲಿಸಿ ವಿಶ್ವ ನಾಯಕರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಹರಡಿದ ‘ಪೋಸ್ಟ್ ಕಾರ್ಡ್’

ಭಾರತ-ಚೀನಾ ಗಡಿ ವಿವಾದ

ವಾರ್ತಾಭಾರತಿವಾರ್ತಾಭಾರತಿ3 Jun 2020 6:12 PM IST
share
ಫ್ಯಾಕ್ಟ್ ಚೆಕ್: ಭಾರತವನ್ನು ಬೆಂಬಲಿಸಿ ವಿಶ್ವ ನಾಯಕರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಹರಡಿದ ‘ಪೋಸ್ಟ್ ಕಾರ್ಡ್’

ಹೊಸದಿಲ್ಲಿ: ಕಳೆದ ಮೂರು ವಾರಗಳಿಂದ ಲಡಾಖ್ ಪ್ರಾಂತ್ಯದಲ್ಲಿ ಭಾರತ-ಚೀನಾ ನಡುವೆ ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವಂತೆಯೇ ಸದಾ ಸುಳ್ಳುಗಳನ್ನು ಹಂಚುವ ಕುಖ್ಯಾತಿ ಗಳಿಸಿರುವ ‘ಪೋಸ್ಟ್ ಕಾರ್ಡ್ ನ್ಯೂಸ್’ ಇತ್ತೀಚೆಗೆ  ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಶೇರ್ ಮಾಡಿತ್ತು. ಆ ಪೋಸ್ಟ್ ನಲ್ಲಿ ಭಾರತ-ಚೀನಾ  ವಿವಾದ ವಿಚಾರದಲ್ಲಿ ಭಾರತವನ್ನು ಬೆಂಬಲಿಸಿ ಇಸ್ರೇಲ್, ರಷ್ಯಾ, ಅಮೆರಿಕಾ ಮತ್ತು ಜಪಾನ್ ದೇಶಗಳ ಮುಖ್ಯಸ್ಥರು ನೀಡಿದ್ದಾರೆನ್ನಲಾದ ಹೇಳಿಕೆಗಳನ್ನು ನೀಡಲಾಗಿತ್ತು.

‘ಭಾರತದ ಮೇಲೆ ದಾಳಿ ನಡೆಸಲು ಯೋಜಿಸುವವರು ಮೊದಲು ನಮ್ಮನ್ನು ಎದುರಿಸಬೇಕು’ (ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು), ‘ನಾವು ಯಾವತ್ತೂ ಭಾರತದ ಜತೆಗಿದ್ದೇವೆ’ (ರಷ್ಯಾದ ವ್ಲಾದಿಮಿರ್ ಪುಟಿನ್), ‘ಭಾರತ ನಮ್ಮ ಸ್ನೇಹಿತ ಹಾಗೂ ನಾವು ಯಾವತ್ತೂ ಭಾರತದ ಜತೆಗಿದ್ದೇವೆ’ (ಡೊನಾಲ್ಡ್ ಟ್ರಂಪ್), ‘ಒಂದು ವೇಳೆ ಭಾರತದ ಮೇಲೆ ಚೀನಾ ದಾಳಿ ನಡೆಸಿದರೆ ಅದು ಚೀನಾದ ಅಂತ್ಯದ ಆರಂಭ’ (ಜಪಾನ್ ಪ್ರಧಾನಿ ಶಿನ್ಝೋ ಅಬೆ) ಅವರದ್ದೆಂದು ಹೇಳಲಾದ ಹೇಳಿಕೆಗಳನ್ನು ನೀಡಲಾಗಿತ್ತು.

ಈ ರೀತಿಯ ಹೇಳಿಕೆ ಹಾಗೂ ಆ ದೇಶಗಳ ನಾಯಕರ ಚಿತ್ರಗಳಿರುವ ಒಂದು ಇಮೇಜ್ ಅನ್ನು ಪೋಸ್ಟ್ ಕಾರ್ಡ್ ನ್ಯೂಸ್ ಮೇ 30ರಂದು ಪೋಸ್ಟ್ ಮಾಡಿತ್ತು. ಇದನ್ನು 850ಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು.

ಈ ಪೋಸ್ಟ್ ಹಾಗೂ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಲು ಎಲ್ಲಾ ಹೇಳಿಕೆಗಳನ್ನು altnews.in ರಿವರ್ಸ್ ಸರ್ಚ್ ಮಾಡಿದರೂ ಯಾವುದೇ ಫಲಿತಾಂಶ ದೊರಕಿರಲಿಲ್ಲ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ರಾಯಭಾರಿ ಈ ಗಡಿ ವಿವಾದ ಕುರಿತಂತೆ ಅಧಿಕೃತ ಹೇಳಿಕೆ ನೀಡಿದ್ದರೂ ಅವುಗಳಿಗೂ ಈ ಪೋಸ್ಟ್‍ನಲ್ಲಿ ನೀಡಿರುವ ಹೇಳಿಕೆಗೂ ಸಂಬಂಧವೇ ಇಲ್ಲ.

ಜಪಾನ್ ಮತ್ತು ಇಸ್ರೇಲ್ ಈ ಕುರಿತಂತೆ ಇನ್ನೂ ಯಾವುದೇ ಸಾರ್ವಜನಿಕ ಹೇಳಿಕೆ ನೀಡಿಲ್ಲ. ಆದುದರಿಂದ ಪೋಸ್ಟ್ ಕಾರ್ಡ್ ಮಾಡಿದ ಸೋಶಿಯಲ್ ಮೀಡಿಯಾ ಪೋಸ್ಟ್ ಸುಳ್ಳೆಂದು ಸಾಬೀತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X