Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ 17 ಗ್ರಾಮಗಳ 26...

ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳಲ್ಲಿ ಸೀಲ್‌ಡೌನ್

ವಾರ್ತಾಭಾರತಿವಾರ್ತಾಭಾರತಿ3 Jun 2020 10:41 PM IST
share
ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳಲ್ಲಿ ಸೀಲ್‌ಡೌನ್

ಉಡುಪಿ, ಜೂ.3: ಕೊರೋನ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಂಕಿತ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್‌ಎಎಸ್ಸೈ ಮನೆ ಸಹಿತ ಒಟ್ಟು 26 ನಿಗದಿತ ಪ್ರದೇಶವನ್ನು ಇಂದು ಸೀಲ್‌ಡೌನ್ ಮಾಡಲಾಗಿದೆ.

ಕಾಪು ತಾಲೂಕಿನ ಶಿರ್ವ ಗ್ರಾಮದ ಬಲ್ಲಾಡಿ ಎಂಬಲ್ಲಿರುವ ಡಿಎಆರ್ ಎಎಸ್ಸೈ ಅವರ ಮನೆಯ ಪ್ರದೇಶವನ್ನು ಕಂಟೇನ್‌ಮೆಂಟ್ ಮತ್ತು ಇಡೀ ಶಿರ್ವ ಗ್ರಾಮವನ್ನು ಬಫರ್ ವಲಯವನ್ನಾಗಿ ಘೋಷಿಸಲಾಗಿದೆ. ಸೋಂಕಿತರು ಈಗಾ ಗಲೇ ಕುಂದಾಪುರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿನ ಕಂಟೇನ್‌ಮೆಂಟ್ ವಲಯ ವ್ಯಾಪ್ತಿಯಲ್ಲಿ ಒಟ್ಟು ಎರಡು ಮನೆಗಳು ಬರುತ್ತವೆ.

ಬೈಂದೂರು ತಾಲೂಕಿನಲ್ಲಿ ಒಟ್ಟು ಏಳು ಗ್ರಾಮಗಳ 15 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಯಡ್ತರೆ ಗ್ರಾಮದ ಆರು ಪ್ರತ್ಯೇಕ ಮನೆ, ಮರವಂತೆ ಗ್ರಾಮದ ಪ್ರತ್ಯೇಕ ನಾಲ್ಕು ಮನೆ(ಒಟ್ಟು ಏಳು ಮಂದಿ ಸೋಂಕಿತರು), ಯಳಜಿತ್, ಜಡ್ಕಲ್, ನಾಡಾ, ಹಡವು, ಕೊಲ್ಲೂರು ಗ್ರಾಮ ಗಳಲ್ಲಿ ತಲಾ ಒಂದು ಮನೆಯ ಪ್ರದೇಶದ ಸುತ್ತಮುತ್ತಲು ಕಂಟೇನ್‌ಮೆಂಟ್ ರೆನ್ ಘೋಷಿಸಲಾಗಿದೆ. ಇಲ್ಲಿ ಒಟ್ಟು 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕಳೆದ ಮೂರು ದಿನಗಳಲ್ಲಿ ಬೈಂದೂರು ತಾಲೂಕಿನ ಒಟ್ಟು 27 ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಎರಡು, ತಲ್ಲೂರು ಮತ್ತು ಬೀಜಾಡಿ ಗ್ರಾಮಗಳ ತಲಾ ಒಂದು ಕಡೆಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಮತ್ತು ಕರ್ಕುಂಜೆ ಗ್ರಾಮಗಳನ್ನು ಕಂಟೇನ್‌ಮೆಂಟ್ ವಲಯವನ್ನಾಗಿ ಘೋಷಿಸ ಲಾಗಿದೆ. ಅದೇ ರೀತಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಲಾಡಿ ಗ್ರಾಮದ ಎರಡು ಕಡೆಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ.

ಬ್ರಹ್ಮಾವರ ತಾಲೂಕಿನ ಮತ್ತು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮವನ್ನು ಸೀಲ್‌ಡೌನ್ ಮಾಡಿ, ಕಂಟೇನ್‌ಮೆಂಟ್ ವಲಯನ್ನಾಗಿ ಘೋಷಿಸಲಾಗಿದೆ. ತೋಟದ ಮಧ್ಯೆ ಇರುವುದರಿಂದ ಇಲ್ಲಿ ಒಂದು ಮನೆಯನ್ನು ಮಾತ್ರ ಇದರ ವ್ಯಾಪ್ತಿಗೆ ಒಳಪಡಿಸಲಾಗಿದೆ. ಈ ಮನೆಯಲ್ಲಿ ಸೋಂಕಿತ ಸಹಿತ ಒಟ್ಟು ಮೂರು ಮಂದಿ ವಾಸವಾಗಿದ್ದರು ಎಂದು ಅಧಿಕಾರಿ ಗಳು ಮಾಹಿತಿ ನೀಡಿದ್ದಾರೆ. ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಒಂದು ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಾಲೂಕು ಕಚೇರಿ ಮೂಲಗಳು ತಿಳಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X