Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೌಕರರಿಗೆ ವೇತನ ಪಾವತಿಸದ ಮಾಲಕರ ವಿರುದ್ಧ...

ನೌಕರರಿಗೆ ವೇತನ ಪಾವತಿಸದ ಮಾಲಕರ ವಿರುದ್ಧ ಕಠಿಣ ಕ್ರಮ ಬೇಡ: ಕೇಂದ್ರಕ್ಕೆ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ4 Jun 2020 8:26 PM IST
share
ನೌಕರರಿಗೆ ವೇತನ ಪಾವತಿಸದ ಮಾಲಕರ ವಿರುದ್ಧ ಕಠಿಣ ಕ್ರಮ ಬೇಡ: ಕೇಂದ್ರಕ್ಕೆ ಸುಪ್ರೀಂ

ಹೊಸದಿಲ್ಲಿ,ಜೂ.4: ಲಾಕ್‌ಡೌನ್ ಅವಧಿಯಲ್ಲಿ ತಮ್ಮ ನೌಕರರಿಗೆ ಪೂರ್ತಿ ವೇತನ ಪಾವತಿಸದ ಸಂಸ್ಥೆಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಗುರುವಾರ ಆದೇಶ ನೀಡಿದೆ.

 ಲಾಕ್‌ಡೌನ್ ಸಂದರ್ಭ ಉದ್ಯೋಗಿಗಳಿಗೆ ಪೂರ್ತಿ ವೇತನ ಪಾವತಿಸುವಂತೆ ಸೂಚಿಸಿ ಕೇಂದ್ರ ಗೃಹ ಸಚಿವಾಲಯವು ಮಾರ್ಚ್ 29ರಂದು ಸುತ್ತೋಲೆಯನ್ನು ಹೊರಡಿಸಿತ್ತು. ಪೂರ್ಣ ವೇತನ ಪಾವತಿಸದ ಉದ್ಯೋಗದಾತರ ವಿರುದ್ಧ ಕಠಿಣಕ್ರಮ ಕೈಗೊಳ್ಳುವುದಾಗಿ ಅದು ಸೂಚಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಆದೇಶ ಹೊರಡಿಸಿದೆ.

ಲಾಕ್‌ಡೌನ್ ಅವಧಿಯಲ್ಲಿ ನೌಕರರ ವೇತನಗಳನ್ನು ಕಡಿತಗೊಳಿಸುವುದಾಗಲಿ ಅಥವಾ ಅವರನ್ನು ಕೆಲಸದಿಂದ ವಜಾಗೊಳಿಸದಂತೆಯೂ ಉದ್ಯೋಗದಾತರಿಗೆ ಸಲಹೆ ನೀಡುವಂತೆ ಸೂಚಿಸಿ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ಕಾರ್ಯದರ್ಶಿಯವರು, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು

ಶೇಕಡ 100ರಷ್ಟು ವೇತನ ಪಾವತಿಸುವಲ್ಲಿ ವಿಫಲರಾದ ಉದ್ಯೋಗದಾತರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕೆಂಬ ಕೇಂದ್ರ ಗೃಹ ಸಚಿವಾಲಯದ ಸುತ್ತೋಲೆಯ ಬಗ್ಗೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ.ಕೌಲ್ ಹಾಗೂ ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠ ಆತಂಕ ವ್ಯಕ್ತಪಡಿಸಿತು.

 ಕೇಂದ್ರ ಗೃಹ ಸಚಿವಾಲಯದ ಸುತ್ತೋಲೆಯ ಬಗ್ಗೆ ತನಗೆ ಭಿನ್ನ ಅಭಿಪ್ರಾಯವಿರುವುದಾಗಿ ಹೇಳಿದ ನ್ಯಾಯಪೀಠವು ಲಾಕ್‌ಡೌನ್ ಅವಧಿಯಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಯಬೇಕಾದ ಅಗತ್ಯವಿದೆಯೆಂದು ಹೇಳಿತು. ಲಾಕ್‌ಡೌನ್ ಅವಧಿಯಲ್ಲಿ ನೌಕರರಿಗೆ ವೇತನ ಪಾವತಿ ಹಾಗೂ ಕೈಗಾರಿಕೆಗಳ ರಕ್ಷಣೆ ಇವೆರಡರ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದರು.

ಉದ್ಯೋಗಿಗಳನ್ನು ವೇತನದಿಂದ ವಂಚಿತರನ್ನಾಗಿ ಮಾಡಬಾರದೆಂಬ ಕಾಳಜಿಯು ನ್ಯಾಯಾಲಯಕ್ಕಿದೆ. ಆದರೆ ಲಾಕ್ ‌ಡೌನ್‌ನಿಂದಾಗಿ ಉದ್ಯೋಗದಾತರಿಗೆ ತಮ್ಮ ನೌಕರರಿಗೆ ವೇತನವನ್ನು ಪಾವತಿಸಲು ಬೇಕಾದಷ್ಟು ಹಣವೂ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಕೂಡಾ ತನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಒಂದು ಸಂತುಲಿತವಾದ ಕ್ರಮದ ಅಗತ್ಯವಿದೆ ಎಂದು ನ್ಯಾಯಾಲಯವು ಈ ಬಗ್ಗೆ ಸಲ್ಲಿಸಲಾದ ಅರ್ಜಿಗಳ ಕುರಿತಾಗಿ ತನ್ನ ತೀರ್ಪನ್ನು ಕಾದಿರಿಸುತ್ತಾ ತಿಳಿಸಿತು.

ನೌಕರರಿಗೆ ವೇತನವನ್ನು ಪಾವತಿಸದ ಉದ್ಯೋಗದಾತರರನ್ನು ಶಿಕ್ಷಿಸುವ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆಯೇ ಎಬುದಾಗಿಯೂ ಅದು ಪ್ರಶ್ನಿಸಿತು.

 ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳು ತಾವು ಕೆಲಸ ಮಾಡುವ ಊರಲ್ಲೇ ಉಳಿಯುವಂತೆ ಮಾಡಲು ನೆರವಾಗಬೇಕೆಂಬ ಉದ್ದೇಶದಿಂದ ಈ ಸುತ್ತೋಲೆಯನ್ನು ಕೇಂದ್ರ ಸರಕಾರ ಹೊರಡಿಸಿತ್ತು ಎಂದು ಅಟಾರ್ನಿ ಜನರಲಂ ಕೆ.ಕೆ. ವೇಣುಗೋಪಾಲನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X