Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶವನ್ನು ವಿಭಜಿಸಲು ಟ್ರಂಪ್ ಯತ್ನ: ಮಾಜಿ...

ದೇಶವನ್ನು ವಿಭಜಿಸಲು ಟ್ರಂಪ್ ಯತ್ನ: ಮಾಜಿ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Jun 2020 9:55 PM IST
share
ದೇಶವನ್ನು ವಿಭಜಿಸಲು ಟ್ರಂಪ್ ಯತ್ನ: ಮಾಜಿ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಆರೋಪ

ವಾಶಿಂಗ್ಟನ್, ಜೂ. 4: ಅಮೆರಿಕದಾದ್ಯಂತ ಅಶಾಂತಿ ನೆಲೆಸಿರುವ ಈ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಹಾಗೂ ಪ್ರಬುದ್ಧ ನಾಯಕತ್ವವನ್ನು ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಅವರದೇ ಸರಕಾರದಲ್ಲಿ ರಕ್ಷಣಾ ಕಾರ್ಯದರ್ಶಿಯಾಗಿದ್ದ ಜಿಮ್ ಮ್ಯಾಟಿಸ್ ಬುಧವಾರ ಆರೋಪಿಸಿದ್ದಾರೆ.

ಸಿರಿಯದಿಂದ ಪೂರ್ಣ ಪ್ರಮಾಣದಲ್ಲಿ ಅಮೆರಿಕದ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಟ್ರಂಪ್‌ರ ನಿರ್ಧಾರವನ್ನು ಪ್ರತಿಭಟಿಸಿ ಮ್ಯಾಟಿಸ್ 2018 ಡಿಸೆಂಬರ್‌ನಲ್ಲಿ ರಕ್ಷಣಾ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರಸಕ್ತ ದೇಶಾದ್ಯಂತ ನಡೆಯುತ್ತಿರುವ ಜನಾಂಗೀಯ ತಾರತಮ್ಯ ರ್ಯಾಲಿಗಳಿಗೂ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

“ಅಮೆರಿಕದ ಜನತೆಯನ್ನು ಒಗ್ಗೂಡಿಸಲು ಪ್ರಯತ್ನಗಳನ್ನೇ ಮಾಡದ ಅಧ್ಯಕ್ಷರೊಬ್ಬರನ್ನು ನಾನು ನನ್ನ ಜೀವಮಾನದಲ್ಲಿ ನೋಡುತ್ತಿರುವುದು ಇದೇ ಮೊದಲು. ಅವರು ಪ್ರಯತ್ನಗಳನ್ನು ಮಾಡುತ್ತಿರುವಂತೆ ಕನಿಷ್ಠ ನಟನೆಯನ್ನೂ ಮಾಡುತ್ತಿಲ್ಲ” ಎಂದು ದ ಅಟ್ಲಾಂಟಿಕ್‌ನಲ್ಲಿ ಪ್ರಕಟಗೊಂಡಿರುವ ಕಟು ಹೇಳಿಕೆಯೊಂದರಲ್ಲಿ ಮ್ಯಾಟಿಸ್ ಹೇಳಿದ್ದಾರೆ.

“ಇದಕ್ಕೆ ಬದಲಾಗಿ ಅವರು ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ನಿವೃತ್ತ ಮರೀನ್ ಜನರಲ್ ಕೂಡ ಆಗಿರುವ ಮ್ಯಾಟಿಸ್ ನುಡಿದರು. ಹಾಲಿ ಅಧ್ಯಕ್ಷರೊಬ್ಬರನ್ನು ಟೀಕಿಸುವುದು ನನಗೆ ಸರಿ ಕಾಣಿಸುವುದಿಲ್ಲ ಎಂಬುದಾಗಿ ಅವರು ಈ ಹಿಂದೆ ಹೇಳಿದ್ದರು.

ಪ್ರಬುದ್ಧ ನಾಯಕತ್ವವಿಲ್ಲದ ಮೂರು ವರ್ಷಗಳ ಪರಿಣಾಮಗಳನ್ನು ನಾವು ಇಂದು ನೋಡುತ್ತಿದ್ದೇವೆ ಎಂದರು.

ದೇಶಾದ್ಯಂತ ತಲೆಯೆತ್ತಿರುವ ಜನಾಂಗೀಯ ಅಶಾಂತಿಯ ನಡುವೆಯೇ, ಸೋಮವಾರ ಡೊನಾಲ್ಡ್ ಟ್ರಂಪ್ ತನ್ನನ್ನು ತಾನು ಕಾನೂನು ಮತ್ತು ಸುವ್ಯವಸ್ಥೆಯ ಅಧ್ಯಕ್ಷ ಎಂಬುದಾಗಿ ಘೋಷಿಸಿಕೊಂಡರು ಹಾಗೂ ಹೆಚ್ಚುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಮೆರಿಕದ ನಗರಗಳಲ್ಲಿ ಸೇನೆಯನ್ನು ನಿಯೋಜಿಸುವ ಬೆದರಿಕೆಯನ್ನು ಒಡ್ಡಿದರು.

ಟ್ರಂಪ್‌ರಿಂದ ಸಂವಿಧಾನದ ಉಲ್ಲಂಘನೆ

“ಸುಮಾರು 50 ವರ್ಷಗಳ ಹಿಂದೆ ನಾನು ಸೇನೆ ಸೇರಿದಾಗ, ಸಂವಿಧಾನವನ್ನು ಬೆಂಬಲಿಸುವ ಮತ್ತು ರಕ್ಷಿಸುವ ಪ್ರತಿಜ್ಞೆಯನ್ನು ನಾನು ಕೈಗೊಂಡಿದ್ದೆ ಎಂದು” ಜಿಮ್ ಮ್ಯಾಟಿಸ್ ಹೇಳಿದ್ದಾರೆ.

ಅದೇ ಪ್ರತಿಜ್ಞೆಯನ್ನು ಸ್ವೀಕರಿಸಿದ ಸೈನಿಕರಿಗೆ ತಮ್ಮದೇ ಸಹ ನಾಗರಿಕರ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕುವಂತೆ ಯಾವುದೇ ಸಂದರ್ಭದಲ್ಲಾದರೂ ಆದೇಶ ನೀಡಬಹುದು ಎನ್ನುವುದನ್ನು ನಾನು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಅತ್ಯಂತ ವೈಭವೀಕೃತ ಜನರಲ್!

ತನ್ನನ್ನು ಟೀಕಿಸಿರುವ ಮಾಜಿ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್‌ಗೆ ತೀರುಗೇಟು ನೀಡಿರುವ ಡೊನಾಲ್ಡ್ ಟ್ರಂಪ್, ಅವರೊಬ್ಬರು ಅತ್ಯಂತ ವೈಭವೀಕೃತ ಜನರಲ್ (ಸೇನಾಧಿಕಾರಿ) ಆಗಿದ್ದಾರೆ ಎಂದು ಹೇಳಿದ್ದಾರೆ.

ಬಹುಷಃ ಬರಾಕ್ ಒಬಾಮ ಮತ್ತು ನನ್ನ ನಡುವಿನ ಏಕೈಕ ಸಾಮ್ಯತೆಯೆಂದರೆ, ಜಗತ್ತಿನ ಅತ್ಯಂತ ವೈಭವೀಕೃತ ಜನರಲ್ ಆಗಿರುವ ಮ್ಯಾಟಿಸ್‌ರನ್ನು ಉಚ್ಚಾಟಿಸಿದ ಗೌರವವನ್ನು ನಾವಿಬ್ಬರೂ ಹೊಂದಿದ್ದೇವೆ. ನಾನು ಅವರ ರಾಜೀನಾಮೆಯನ್ನು ಕೇಳಿ ಪಡೆದೆ. ಅದಕ್ಕಾಗಿ ನನಗೆ ಹೆಮ್ಮೆಯೆನಿಸುತ್ತಿದೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X