Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಅನಧಿಕೃತ ಮೀನು ಮಾರಾಟ...

ಉಪ್ಪಿನಂಗಡಿ: ಅನಧಿಕೃತ ಮೀನು ಮಾರಾಟ ತೆರವು; ಕಾರ್ಯಾಚರಣೆ ಸಂದರ್ಭ ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ4 Jun 2020 10:40 PM IST
share
ಉಪ್ಪಿನಂಗಡಿ: ಅನಧಿಕೃತ ಮೀನು ಮಾರಾಟ ತೆರವು; ಕಾರ್ಯಾಚರಣೆ ಸಂದರ್ಭ ಮಾತಿನ ಚಕಮಕಿ

ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್‌ನ ರಾಷ್ಟ್ರೀಯ ಹೆದ್ದಾರಿ ಬದಿ ಅನಧಿಕೃತವಾಗಿ ಟೆಂಪೋದಲ್ಲಿ ಮೀನು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ, ತೆರವುಗೊಳಿಸಿದ ಘಟನೆ ನಡೆದಿದೆ.

ಇಲ್ಲಿನ ಗಾಂಧಿಪಾರ್ಕ್ ಬಳಿ ಕೆಲವು ಯುವಕರು ಮಿನಿ ಗೂಡ್ಸ್ ಟೆಂಪೋವೊಂದರಲ್ಲಿ ಕಳೆದ ಮೂರು ದಿನಗಳಿಂದ ಮೀನು ಮಾರಾಟಕ್ಕೆ ತೊಡಗಿದ್ದರು. ಗುರುವಾರ ಏಕಾಏಕಿ ಕಾರಿನಲ್ಲಿ ಬಂದ ಉಪ್ಪಿನಂಗಡಿ ಪಿಡಿಒ ಮೀನು ಮಾರಾಟದ ಗೂಡ್ಸ್ ಟೆಂಪೋದ ಅನಧಿಕೃತ ಮಾರಾಟಕ್ಕೆ ತಡೆ ಹಾಕಿದಾಗ ವ್ಯಾಪಾರಸ್ಥರು ಮತ್ತು ಸರಕಾರಿ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಪಿಡಿಒಗೆ ಯುವಕರು ಅವಾಚ್ಯ ಶಬ್ದದಲ್ಲಿ ನಿಂದಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಸ್ ಆಗಿದೆ.

ಪರಿಸ್ಥಿತಿ ಉದ್ವಿಗ್ನತೆಗೆ ಒಳಗಾಗುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚುದುರಿಸಿ ಯಾರು ಯಾವುದೇ ಕೆಲಸ ಮಾಡುವುದಿದ್ದಲ್ಲಿ ಕಾನೂನು ಬದ್ಧವಾಗಿಯೇ ಮಾಡಬೇಕೆಂದು ಎಚ್ಚರಿಕೆ ನೀಡಿದರು.

ಬಳಿಕ ಗ್ರಾ.ಪಂ.ನಲ್ಲಿ ಈ ಬಗ್ಗೆ ಮಾತುಕತೆ ನಡೆಯಿತು. ಉಪ್ಪಿನಂಗಡಿಯಲ್ಲಿ ಈಗಾಗಲೇ ಪಂಚಾಯತ್ ವತಿಯಿಂದಲೇ ಮೀನು ಮಾರುಕಟ್ಟೆ ಚಾಲ್ತಿಯಲ್ಲಿರುವುದರಿಂದ ಅನಧಿಕೃತ ಮೀನು ಮಾರಾಟಕ್ಕೆ ಅವಕಾಶವಿಲ್ಲ ಎನ್ನುವುದು ಪಂಚಾಯತ್ ಆಡಳಿತದ ವಾದವಾಗಿತ್ತು. ಕೊನೆಗೆ ಉಪ್ಪಿನಂಗಡಿ ಪೇಟೆಯಲ್ಲಿ ಗ್ರಾ.ಪಂ. ವತಿಯಿಂದ ಮೀನು ಮಾರುಕಟ್ಟೆ ಚಾಲ್ತಿಯಿರುವುದರಿಂದ ವಾರ್ಡ್ ನಂಬರ್ 1ರಲ್ಲಿ ಅನಧಿಕೃತವಾಗಿ ಮೀನು ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಗ್ರಾ.ಪಂ. ಸೂಚನೆ ನೀಡಿತು.

ಅನಧಿಕೃತ ಅಂಗಡಿಗಳಿಗೆ ಅವಕಾಶ ನೀಡಬಾರದೆಂದು ಉಪ್ಪಿನಂಗಡಿ ಗ್ರಾ.ಪಂ.ನ ಕಳೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದರ ಅನುಷ್ಠಾನಕ್ಕೆ ತಾನು ಮುಂದಾಗಿದ್ದೆ. ಪ್ರಮುಖವಾಗಿ ಸ್ವಚ್ಛತೆಗೆ ಆದ್ಯತೆ ನೀಡಿ ಹಾಗೂ ಇಲ್ಲಿ ಮೀನು ಮಾರುಕಟ್ಟೆ ಟೆಂಡರ್ ಕೊಡಲಾಗಿದೆ ಎಂಬ ಕಾರಣದಿಂದ ಮೊದಲಾಗಿ ಮೀನಿನ ಅಂಗಡಿ ತೆರವಿಗೆ ನಾನು ಮುಂದಾದೆ. ತಾನು ಹೊಸದಾಗಿ ಇಲ್ಲಿಗೆ ಬಂದಿರುವುದರಿಂದ ಈ ಹಿಂದೆಯೂ ಅನಧಿಕೃತ ಅಂಗಡಿಗಳ ತೆರವಿಗೆ ಮಾಡಲಾದ ನಿರ್ಣಯ ಅನುಷ್ಠಾನವಾಗಿದೆಯೋ ಇಲ್ಲವೋ ಗೊತ್ತಿಲ್ಲ. ಈ ನಿರ್ಣಯಗಳನ್ನೆಲ್ಲಾ ನಾನು ಅನುಷ್ಠಾನಕ್ಕೆ ತರುತ್ತೇನೆ. ಅನಧಿಕೃತ ಅಂಗಡಿಗಳ ಬಗ್ಗೆ ಯಾವುದೇ ರಾಜಕೀಯ ಬರಬಾರದು. ಸಮಾನವಾಗಿ ಎಲ್ಲರಿಗೂ ನ್ಯಾಯ ಕಲ್ಪಿಸಬೇಕು. ಆದ್ದರಿಂದ ಎಲ್ಲಿಯೂ ಅನಧಿಕೃತ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ. ಪ್ರತಿಯೊಂದು ಅನಧಿಕೃತ ಅಂಗಡಿಗಳನ್ನೂ ಹಂತಹಂತವಾಗಿ ತೆಗೆಯುವ ಕಾರ್ಯ ಮಾಡುತ್ತೇನೆ.

-ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್
ಅಭಿವೃದ್ಧಿ ಅಧಿಕಾರಿ, ಉಪ್ಪಿನಂಗಡಿ ಗ್ರಾ.ಪಂ.


ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ಅನಧಿಕೃತ ಅಂಗಡಿಗಳು ಸಾಕಷ್ಟಿವೆ. ಇವುಗಳಿಂದ ತೊಂದರೆಗಳಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ನನ್ನಲ್ಲಿಗೆ ಬಂದಿದೆ. ಆದ್ದರಿಂದ ಅನಧಿಕೃತ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸಲು ಸೂಚಿಸುವಂತೆ ನಾನು ಈಗಾಗಲೇ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅನಧಿಕೃತ ಅಂಗಡಿಗಳ ತೆರವಿನಲ್ಲಿ ಯಾವುದೇ ಧರ್ಮ ಬೇಧ, ರಾಜಕೀಯ ಬೇಧ ಇರಬಾರದು. ಎಲ್ಲರಿಗೂ ಸಮಾನ ನ್ಯಾಯ ಒದಗಬೇಕು.
- ಸಂಜೀವ ಮಠಂದೂರು
ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ

.........................

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಧರ್ಮ, ರಾಜಕೀಯ ಬೇಧವನ್ನು ನಾವು ಒಪ್ಪುವುದಿಲ್ಲ. ಉಪ್ಪಿನಂಗಡಿಯ ಗ್ರಾ.ಪಂ.ನಲ್ಲಿ ಧರ್ಮಾಧಾರಿತ ರಾಜಕೀಯ ನಡೆಯುತ್ತಿದ್ದು, ಇದು ಮುಂದುವರಿದಲ್ಲಿ ಸಂಘಟನೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವುದಿದ್ದಲ್ಲಿ ನಿರ್ದಿಷ್ಟ ಸಮುದಾಯವನ್ನು ನೋಡದೇ ಎಲ್ಲಾ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು.
- ಸಂದೀಪ್ ಕುಪ್ಪೆಟ್ಟಿ
ಅಧ್ಯಕ್ಷರು, ವಿಶ್ವಹಿಂದೂ ಪರಿಷತ್ ಉಪ್ಪಿನಂಗಡಿ ಘಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X