Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಗಡಿ ಉಸ್ತುವಾರಿಗೆ ನೂತನ ಕಮಾಂಡರ್...

ಭಾರತದ ಗಡಿ ಉಸ್ತುವಾರಿಗೆ ನೂತನ ಕಮಾಂಡರ್ ನೇಮಿಸಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ5 Jun 2020 11:08 PM IST
share
ಭಾರತದ ಗಡಿ ಉಸ್ತುವಾರಿಗೆ ನೂತನ ಕಮಾಂಡರ್ ನೇಮಿಸಿದ ಚೀನಾ

ಹೊಸದಿಲ್ಲಿ, ಜೂ. 5: ಗಡಿ ಬಿಕ್ಕಟ್ಟನ್ನು ಅಂತ್ಯಗೊಳಿಸುವ ಉದ್ದೇಶದಿಂದ ಶನಿವಾರ ಉಭಯ ದೇಶಗಳ ಹಿರಿಯ ಸೇನಾಧಿಕಾರಿಗಳ ಮಧ್ಯೆ ಮಹತ್ವದ ಸಭೆ ನಿಗದಿಯಾಗಿರುವ ಮಧ್ಯೆಯೇ, ಭಾರತ-ಚೀನಾ ಗಡಿಯಲ್ಲಿ ಉಸ್ತುವಾರಿ ನಿರ್ವಹಿಸುವ ಉದ್ದೇಶದಿಂದ ಚೀನಾವು ತನ್ನ ವೆಸ್ಟರ್ನ್ ಥಿಯೇಟರ್ ಕಮಾಂಡ್ ಗ್ರೌಂಡ್(ಪಶ್ಚಿಮ ಸೇನಾ ಕಮಾಂಡ್ ವಿಭಾಗ)ಗೆ ನೂತನ ಸೇನಾ ಕಮಾಂಡರ್ ಅನ್ನು ನೇಮಿಸಿದೆ.

ಲೆಫ್ಟಿನೆಂಟ್ ಜನರಲ್ ಕ್ಸುಕ್ವಿಲಿಂಗ್‌ರನ್ನು ವೆಸ್ಟರ್ನ್ ಥಿಯೇಟರ್ ಕಮಾಂಡ್ ಗ್ರೌಂಡ್ ಸೇನಾಪಡೆಯ ಹೊಸ ಕಮಾಂಡರ್ ಆಗಿ ನೇಮಿಸಲಾಗಿದೆ ಎಂದು ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ)ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಘೋಷಿಸಲಾಗಿದೆ. ಇದಕ್ಕೂ ಮುನ್ನ ಕ್ಸುಕ್ವಿಲಿಂಗ್ ಈಸ್ಟರ್ನ್ ಥಿಯೇಟರ್ ಕಮಾಂಡರ್‌ನಲ್ಲಿ ಕಾರ್ಯ ನಿರ್ವಹಿಸಿದ್ದರು.

ಭಾರತದೊಂದಿಗಿನ 3,488 ಕಿ.ಮೀ ವ್ಯಾಪ್ತಿಯ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಪಿಎಲ್‌ಎಯ ವೆಸ್ಟರ್ನ್ ಥಿಯೇಟರ್ ಕಮಾಂಡ್ ಪಹರೆಕಾರ್ಯ ನಿರ್ವಹಿಸುತ್ತಿದೆ. ಇದು ಭೂಸೇನೆ, ವಾಯುಪಡೆ, ರಾಕೆಟ್ ಪಡೆಯನ್ನು ಹೊಂದಿದ್ದು ಜ. ಝಾವೊ ರೊಂಗ್‌ಕ್ವಿ ನೇತೃತ್ವದಡಿ ಕಾರ್ಯ ನಿರ್ವಹಿಸುತ್ತಿದೆ.

ಉಭಯ ಸೇನೆಯ ಲೆಫ್ಟಿನೆಂಟ್ ಜನರಲ್ ಗಳ ನೇತೃತ್ವದಲ್ಲಿ ಶನಿವಾರ ನಡೆಯಲಿರುವ ಸಭೆಯು ಭಾರತ-ಚೀನಾ ಸೇನೆಗಳ ಮಧ್ಯೆ ನಡೆಯುತ್ತಿರುವ ಪ್ರಥಮ ವಿಸ್ತೃತ ಮಾತುಕತೆಯಾಗಿದ್ದು , ಪೂರ್ವ ಲಡಾಖ್ ವಲಯದಲ್ಲಿ ತಿಂಗಳಿನಿಂದ ಮುಂದುವರಿದಿರುವ ಬಿಕ್ಕಟ್ಟಿನ ನಿವಾರಣೆಯ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ.

ಅರುಣಾಚಲ ಪ್ರದೇಶವು ದಕ್ಷಿಣ ಟಿಬೆಟ್‌ನ ಭಾಗವಾಗಿದೆ ಎಂಬುದು ಚೀನಾದ ವಾದವಾಗಿದ್ದರೆ, ಭಾರತ ಇದನ್ನು ವಿರೋಧಿಸುತ್ತಿದೆ. ಗಡಿ ವಿವಾದ ಇತ್ಯರ್ಥವಾದರೆ ಮಾತ್ರ ಗಡಿಭಾಗದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ಉಭಯ ದೇಶಗಳೂ ಹೇಳಿವೆ.

ಗಡಿವಿವಾದ ಸೂಕ್ತ ರೀತಿಯಲ್ಲಿ ಇತ್ಯರ್ಥಕ್ಕೆ ಬದ್ಧ: ಚೀನಾ

ಭಾರತದೊಂದಿಗಿರುವ ಪ್ರಸಕ್ತ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ತಾನು ಬದ್ಧನಾಗಿರುವುದಾಗಿ ಚೀನಾ ಹೇಳಿದೆ.

ಬೀಜಿಂಗ್‌ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಚೀನಾದ ವಿದೇಶ ವ್ಯವಹಾರ ಇಲಾಖೆಯ ವಕ್ತಾರ ಜೆಂಗ್ ಶುವಾಂಗ್, ಸದ್ಯಕ್ಕೆ ಚೀನಾ ಮತ್ತು ಭಾರತದ ನಡುವಿನ ಗಡಿಪ್ರದೇಶದಲ್ಲಿ ಪರಿಸ್ಥಿತಿ ಒಟ್ಟಾರೆಯಾಗಿ ಸ್ಥಿರ ಮತ್ತು ನಿಯಂತ್ರಿಸಬಹುದಾದ ಸ್ಥಿತಿಯಲ್ಲಿದೆ ಎಂದರು.

ನಮ್ಮಲ್ಲಿ ಪೂರ್ಣ ಪ್ರಮಾಣದ ಗಡಿ ಸಂಬಂಧಿತ ಕಾರ್ಯವಿಧಾನಗಳಿವೆ ಮತ್ತು ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಸಾಧನಗಳ ಮೂಲಕ ನಿಕಟ ಸಂವಹನ ನಡೆಸುತ್ತೇವೆ. ಗಡಿ ವಿವಾದವನ್ನು ಸೂಕ್ತ ರೀತಿಯಲ್ಲಿ ಇತ್ಯರ್ಥಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X