Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಖಾಸಗಿ ಶಾಲೆಗಳು ಮತ್ತು ಆನ್‌ಲೈನ್ ತರಗತಿ

ಖಾಸಗಿ ಶಾಲೆಗಳು ಮತ್ತು ಆನ್‌ಲೈನ್ ತರಗತಿ

ಎಂ.ರಫೀಕ್, ಉಳ್ಳಾಲಎಂ.ರಫೀಕ್, ಉಳ್ಳಾಲ5 Jun 2020 11:09 PM IST
share

ಮಾನ್ಯರೇ,

ಜಗತ್ತಿನಾದ್ಯಂತ ಮಹಾಮಾರಿ ‘ಕೊರೋನ ವೈರಸ್’ನಿಂದ ಜನ ತತ್ತರಿಸಿರುವಾಗ ನಮ್ಮ ದೇಶದಲ್ಲಿ ಕೂಡ ಅದರ ಅಟ್ಟಹಾಸ ದಿನೇದಿನೇ ಹೆಚ್ಚುತ್ತಿದೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ತೀವ್ರವಾಗಿ ಬೆಳೆಯುತ್ತಿದೆ. ಕರಾವಳಿಯೂ ಇದಕ್ಕೆ ಹೊರತಲ್ಲ. ಹೀಗಿರುವಾಗ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ, ಶಾಲಾರಂಭದ ಬಗ್ಗೆ ಸರಕಾರವು ಮುಂದಿನ ತಿಂಗಳು ನಿರ್ಧಾರ ಕೈಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನಮ್ಮ ಮಕ್ಕಳು ಎಷ್ಟರಮಟ್ಟಿಗೆ ಸುರಕ್ಷಿತ ಎಂಬುದು ಬಹುತೇಕ ವಿದ್ಯಾರ್ಥಿ ಪೋಷಕರ ಪ್ರಶ್ನೆಯಾಗಿದೆ. ನಮ್ಮ ಮಕ್ಕಳ ಸುರಕ್ಷೆ ನಮ್ಮ ಕೈಯಲ್ಲಿದೆ. ಸದ್ಯದ ಮಟ್ಟಿಗೆ ಶಾಲಾರಂಭ ವಿಳಂಬವಾದರೂ ಯಾವುದೇ ಅಡ್ಡಿಯಿಲ್ಲ ಎನ್ನುವುದು ಹೆಚ್ಚಿನ ಪೋಷಕರ ನಿಲುವಾಗಿದೆ. 5.0 ಲಾಕ್‌ಡೌನ್‌ನಲ್ಲಿ ಹಲವಾರು ನಿಯಮಗಳು ಸಡಿಲಿಕೆಯಾದರೂ ಕೊರೋನ ರೋಗಿಗಳ ಸಂಖ್ಯೆ ಇಳಿಮುಖವಾಗುತ್ತಿಲ್ಲ. ಈ ಸನ್ನಿವೇಶದಲ್ಲಿ ಶಾಲಾರಂಭಕ್ಕೆ ಸರಕಾರ ಹಸಿರು ನಿಶಾನೆ ತೋರಿಸಿದರೂ ಮಕ್ಕಳನ್ನು ಶಾಲೆಗೆ ಕಳುಹಿಸುವ ನಿರ್ಧಾರವನ್ನು ಪೋಷಕರೇ ಕೈಗೊಳ್ಳಬೇಕಿದೆ. ಇಲ್ಲಿ ಕೆಲವೊಂದು ಖಾಸಗಿ ಶಾಲೆಗಳು ಶುಲ್ಕವನ್ನು ಸಂಗ್ರಹಿಸುವ ಸಲುವಾಗಿ ‘ಆನ್‌ಲೈನ್ ತರಗತಿ’ ಎನ್ನುವ ನೂತನ ಆವಿಷ್ಕಾರವನ್ನು ಸಾಕಾರಗೊಳಿಸುವ ಪ್ರಯತ್ನ ನಡೆಸುತ್ತಿವೆ. ಆದರೆ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ಎಷ್ಟರಮಟ್ಟಿಗೆ ಉಪಯುಕ್ತ ಎಂದು ಹೇಳಲಾಗದು. ಈ ಆನ್‌ಲೈನ್ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ, ಗಮನ, ಶಿಸ್ತು ಬಗ್ಗೆಯೂ ಪೋಷಕರು ಆಲೋಚಿಸಬೇಕಿದೆ. ಅಷ್ಟೇ ಅಲ್ಲ ಹಲವು ಕಡೆ ಅಂತರ್ಜಾಲದ ಸಂಪರ್ಕವೂ ಸಮರ್ಪಕವಾಗಿಲ್ಲ. ಯಾವುದೇ ಶಾಲೆಯು ಈ ಆನ್‌ಲೈನ್ ಶಿಕ್ಷಣ ಆರಂಭಿಸುವುದಾದರೆ ಮೊದಲಿಗೆ ವಿದ್ಯಾರ್ಥಿ ಪೋಷಕರ ಸಭೆ ಕರೆದು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಉತ್ತಮ. ಪೋಷಕರೊಂದಿಗೆ ಚರ್ಚಿಸದೆ ಖಾಸಗಿ ಶಾಲಾಡಳಿತ ಮಂಡಳಿಯ ಇಂತಹ ನಿರ್ಧಾರ ಖಂಡನೀಯ. ಹಾಗಾಗಿ ಪೋಷಕರು ಎಚ್ಚೆತ್ತು ತಮ್ಮ ಮಕ್ಕಳು ಕಲಿಯುವ ಶಾಲೆಯ ಇಂತಹ ನಿರ್ಧಾರದ ಬಗ್ಗೆ ಪ್ರಶ್ನೆ ಮಾಡಬೇಕು ಹಾಗೂ ಮಕ್ಕಳಿಗೆ ಸಮರ್ಪಕವಾದ ಶಿಕ್ಷಣ ಲಭಿಸುವಂತೆ ನೋಡಿಕೊಳ್ಳಬೇಕಾಗಿದೆ.

share
ಎಂ.ರಫೀಕ್, ಉಳ್ಳಾಲ
ಎಂ.ರಫೀಕ್, ಉಳ್ಳಾಲ
Next Story
X