ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ನಿಂದನೆ: ಆರೋಪಿಯ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ಜಿಸಿಸಿ ಕೊಡಗು ಘಟಕ ಆಗ್ರಹ
ಕೊಡಗು, ಜೂ.7: ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ನಿಂದನೆ ಪೋಸ್ಟ್ಗಳನ್ನು ಹಾಕಿದ ಆರೋಪಿ ಕುಶಾಲನಗರದ ವಿಂಧ್ಯಾ ಪುಣಚ್ಚ ಎಂಬವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ಜಿಸಿಸಿ ಕೊಡಗು ಘಟಕ ಒತ್ತಾಯಿಸಿದೆ.
ಈ ದುಷ್ಕೃತ್ಯದ ವಿರುದ್ಧ ಹಲವು ಸಂಘಸಂಸ್ಥೆಗಳು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಇಂತಹ ಸಮಾಜಘಾತುಕ ವ್ಯಕ್ತಿಗಳು ನಡೆಸುತ್ತಿರುವ ಕಿಡಿಗೇಡಿ ಕೃತ್ಯಗಳನ್ನು ಕೂಡಲೇ ಮಟ್ಟ ಹಾಕಿ, ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಶಾಂತಿ ಹಾಗೂ ಸೌಹಾರ್ದವನ್ನು ಉಳಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕು ಎಂದು ಎಸ್ಕೆಎಸ್ಸೆಸ್ಸೆಫ್ ಜಿಸಿಸಿ ಕೊಡಗು ಘಟಕ ಪ್ರಕಟನೆಯಲ್ಲಿ ಒತ್ತಾಯಿಸಿದೆ.
Next Story