Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಷ್ಟ ಭರಿಸುವುದಾದರೆ ಹೋಂಸ್ಟೇ ಮುಚ್ಚಲು...

ನಷ್ಟ ಭರಿಸುವುದಾದರೆ ಹೋಂಸ್ಟೇ ಮುಚ್ಚಲು ಸಿದ್ಧ: ಕೂರ್ಗ್ ಹೋಂಸ್ಟೇ ಅಸೋಸಿಯೇಶನ್

ವಾರ್ತಾಭಾರತಿವಾರ್ತಾಭಾರತಿ7 Jun 2020 12:49 PM IST
share
ನಷ್ಟ ಭರಿಸುವುದಾದರೆ ಹೋಂಸ್ಟೇ ಮುಚ್ಚಲು ಸಿದ್ಧ: ಕೂರ್ಗ್ ಹೋಂಸ್ಟೇ ಅಸೋಸಿಯೇಶನ್

ಮಡಿಕೇರಿ ಜೂ.7: ಡಿಸೆಂಬರ್ ಅಂತ್ಯದವರೆಗೆ ಕೊಡಗಿನ ಹೋಂಸ್ಟೇಗಳನ್ನು ತೆರೆಯಲು ಅವಕಾಶ ನೀಡಬಾರದೆಂದು ದುರುದ್ದೇಶಪೂರಿತ ಹೇಳಿಕೆ ನೀಡಿರುವವವರು ಹೋಂಸ್ಟೇಗಳನ್ನೇ ನಂಬಿ ಬದುಕು ಸಾಗಿಸುತ್ತಿರುವ ಮಾಲಕರು ಹಾಗೂ ನೌಕರರಿಗೆ ಆಗುವ ಸಂಪೂರ್ಣ ನಷ್ಟವನ್ನು ಭರಿಸುವುದಾದರೆ ಹೋಂಸ್ಟೇಗಳನ್ನು ಮುಚ್ಚಲು ಸಿದ್ಧವೆಂದು ಕೂರ್ಗ್ ಹೋಂಸ್ಟೇ ಅಸೋಸಿಯೇಶನ್ ಹೇಳಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಬಿ.ಜಿ.ಅನಂತಶಯನ ಹೋಂಸ್ಟೇಗಳನ್ನು ಅವಲಂಬಿಸಿಕೊಂಡು ಜೀವನ ಸಾಗಿಸುವುದು ಕೂಡ ಬದುಕಿನ ಒಂದು ಹಕ್ಕಾಗಿದ್ದು, ಇದನ್ನು ಕಸಿದುಕೊಳ್ಳುವುದಕ್ಕಾಗಿ ಪಿತೂರಿ ನಡೆಸಿದರೆ ಅಂತಹವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಎರಡೂವರೆ ತಿಂಗಳ ಲಾಕ್ ಡೌನ್ ನಿಂದಾಗಿ ಹೋಂಸ್ಟೇ ಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಎರಡು ವರ್ಷಗಳ ಅತಿವೃಷ್ಟಿಯಿಂದಲೂ ಸಾಕಷ್ಟು ನಷ್ಟವಾಗಿದೆ. ಹೋಂಸ್ಟೇಗಳನ್ನು ತೆರೆಯಲು ಸರಕಾರವೇ ಅನುಮತಿ ನೀಡಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಅತಿಥಿ ಸತ್ಕಾರವನ್ನು ಮಾಡಲಿದ್ದೇವೆ. ಕಷ್ಟ, ನಷ್ಟಗಳ ನಡುವೆ ಹೋಂಸ್ಟೇಗಳನ್ನು ಆರಂಭಿಸದೆ ಇದ್ದರೆ ಇವುಗಳನ್ನೇ ನಂಬಿರುವ ನೌಕರ ವರ್ಗದ ಕುಟುಂಬಗಳು ಬೀದಿಗೆ ಬರುತ್ತವೆ ಎಂದರು.

ದೊಡ್ಡ ದೊಡ್ಡ ರೆಸಾರ್ಟ್‌ಗಳ ಪರ ಮಾತನಾಡುವವರು ಮಧ್ಯಮ ವರ್ಗ ನಡೆಸುವ ಹೋಂಸ್ಟೇಗಳ ವಿರುದ್ಧ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಇದರ ಹಿಂದೆ ಯಾವುದೋ ಲಾಭದ ದುರುದ್ದೇಶ ಅಡಗಿದೆ ಎಂದು ಅನಂತಶಯನ ಆರೋಪಿಸಿದರು.

ಹೋಂಸ್ಟೇಗಳಿಗಿಂತ ರೆಸಾರ್ಟ್ ಮತ್ತು ಲಾಡ್ಜ್‌ಗಳಲ್ಲಿ ಆರೋಗ್ಯ ವರ್ಧಕ ವ್ಯವಸ್ಥೆಗಳಿಗೆ ವೆಚ್ಚ ಹೆಚ್ಚಾಗುತ್ತದೆ. ಹೋಂಸ್ಟೇಗಳಲ್ಲಿ 2ರಿಂದ 5 ಕೋಣೆಗಳು ಮಾತ್ರ ಇರುವುದರಿಂದ ಕೋವಿಡ್ 19 ಸಂಬಂಧಿತ ಮುಂಜಾಗೃತಾ ಕ್ರಮಗಳಿಗೆ ಮತ್ತು ಪರೀಕ್ಷೆಗೆ ಹೆಚ್ಚಿನ ವೆಚ್ಚವಾಗುವುದಿಲ್ಲ. ಈಗಾಗಲೇ ಅಧಿಕೃತ ಹೋಂಸ್ಟೇಗಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯ ಸುರಕ್ಷಾ ವ್ಯವಸ್ಥೆಗಳಿಗೆ ಆದ್ಯತೆ ನೀಡಲಾಗಿದೆ. ಆದರೆ ವಿನಾಕಾರಣ ಹೋಂಸ್ಟೇಗಳ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರ ಹಾದಿ ತಪ್ಪಿಸುವ ಕಾರ್ಯ ನಡೆಯುತ್ತಿದೆ. ಇದೇ ಕಾರಣಕ್ಕೆ ಮುಂದೊಂದು ದಿನ ಬಂದ ಅತಿಥಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದರೆ ಹೇಳಿಕೆ ನೀಡಿದವರೇ ಹೊಣೆ ಹೊರಬೇಕಾಗುತ್ತದೆ ಎಂದು ಅನಂತಶಯನ ಎಚ್ಚರಿಕೆ ನೀಡಿದರು. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕೊಡಗನ್ನು ಕೈಬಿಡಲಾಗಿದೆ
ಲಾಕ್ ಡೌನ್ ಸಡಿಲಿಕೆಯ ನಂತರ ರಾಜ್ಯದ ಪ್ರವಾಸೋದ್ಯಮದ ಚೇತರಿಕೆಗೆ ಅಗತ್ಯ ರೂಪುರೇಷಗಳನ್ನು ಸಿದ್ಧಪಡಿಸುವ ಸಂದರ್ಭ ಸರ್ಕಾರ ಸುಮಾರು 14 ಜಿಲ್ಲೆಗಳಿಗೆ ಆದ್ಯತೆ ನೀಡಿದೆ. ಪ್ರವಾಸಿತಾಣಗಳು ಇಲ್ಲದ ಪ್ರದೇಶಗಳನ್ನು ಕೂಡ ಸೇರ್ಪಡೆಗೊಳಿಸಲಾಗಿದೆ. ಆದರೆ ಜನಪ್ರಿಯ ಪ್ರವಾಸಿತಾಣಗಳ ಮೂಲಕ ವಿಶ್ವದ ಗಮನ ಸೆಳೆದಿರುವ ಕೊಡಗು ಜಿಲ್ಲೆಯನ್ನೇ ಕೈಬಿಡಲಾಗಿದೆ ಎಂದು ಅನಂತಶಯನ ಬೇಸರ ವ್ಯಕ್ತಪಡಿಸಿದರು. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ಜಿಲ್ಲೆಯನ್ನು ಸೇರಿಸಲು ಕೋರಿಕೊಳ್ಳಲಾಗಿದೆ ಎಂದರು.

ಪದಾಧಿಕಾರಿ ಅಂಬೆಕಲ್ಲು ನವೀನ್ ಕುಶಾಲಪ್ಪಮಾತನಾಡಿ, ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಲು ಇದು ಸಕಾಲವಾಗಿದ್ದು, ಜಿಲ್ಲಾಡಳಿತ ತಕ್ಷಣ ಕಾರ್ಯೋನ್ಮುಖವಾಗಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮೋಂತಿಗಣೇಶ್, ಶಶಿಮೊಣ್ಣಪ್ಪ ಉಪಸ್ಥಿತರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X