Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಡರ್ ಮಾಡಿದ್ದು ಮೊಬೈಲ್; ಬಂದದ್ದು...

ಆರ್ಡರ್ ಮಾಡಿದ್ದು ಮೊಬೈಲ್; ಬಂದದ್ದು ಆಲೂಗಡ್ಡೆ, ಸೋಪು, ಕಲ್ಲು !

ಆನ್‍ಲೈನ್‍ ವಂಚನೆಗೊಳಗಾದ ಚಿಕ್ಕಮಗಳೂರಿನ ವ್ಯಕ್ತಿ; ಪೊಲೀಸರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ7 Jun 2020 7:41 PM IST
share
ಆರ್ಡರ್ ಮಾಡಿದ್ದು ಮೊಬೈಲ್; ಬಂದದ್ದು ಆಲೂಗಡ್ಡೆ, ಸೋಪು, ಕಲ್ಲು !

ಚಿಕ್ಕಮಗಳೂರು, ಜೂ.7: ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ಮತ್ತಿತರ ವಸ್ತುಗಳನ್ನು ಆನ್‍ಲೈನ್‍ ನಲ್ಲಿ ಮಾರಾಟ ಮಾಡುವ ಕಾರ್ಪೋರೇಟ್ ಸಂಸ್ಥೆ ಅಮೆಝಾನ್ ನಿಂದ ಮೊಬೈಲ್ ಆರ್ಡರ್ ಮಾಡಿದ್ದ ವ್ಯಕ್ತಿಯೊಬ್ಬರು ಮೋಸ ಹೋದ ಪ್ರಕರಣವೊಂದು ರವಿವಾರ ವರದಿಯಾಗಿದೆ.

ಜಿಲ್ಲೆಯ ಶೃಂಗೇರಿ ಪಟ್ಟಣದ ನಿವಾಸಿ ಹೈದರ್ ಅಲಿ ಎಂಬವರು ವಂಚನೆಗೊಳಗಾಗಿದ್ದು, ಅವರು ಆನ್‍ಲೈನ್‍ನಲ್ಲಿ ನೋಂದಣಿ ಮಾಡಿದ್ದ ರೆಡ್​​​ಮಿ ಮೊಬೈಲ್‍ಗೆ ಬದಲಾಗಿ ಸೋಪು, ಆಲೂಗಡ್ಡೆ ಹಾಗೂ ಕಲ್ಲುಗಳಿರುವ ಬಾಕ್ಸ್ ನೀಡಿ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಹೈದರ್ ಅಲಿ ಅವರು ಅಮೆಝಾನ್ ಸಂಸ್ಥೆಯ ವೆಬ್‍ಸೈಟ್‍ ನಲ್ಲಿ ರೆಡ್​​​ಮಿ ನೋಟ್-8 ಮೊಬೈಲ್‍ ಅನ್ನು ಆರ್ಡರ್  ಮಾಡಿದ್ದರು. ರವಿವಾರ ಸಂಸ್ಥೆಯ ಸಿಬ್ಬಂದಿ ಪಟ್ಟಣದಲ್ಲಿ ಹೈದರ್ ಅಲಿ ಮನೆಗೆ ಮೊಬೈಲ್ ಬಾಕ್ಸ್ ಅನ್ನು ಡೆಲಿವರಿ ಮಾಡಿದ್ದರು. ಅದೃಷ್ಟವಶಾತ್ ಸಿಬ್ಬಂದಿ ಎದುರೇ ಹೈದರ್ ಅಲಿ ಮೊಬೈಲ್ ಬಾಕ್ಸ್ ತೆರದಿದ್ದು, ಈ ವೇಳೆ ಮೊಬೈಲ್ ಬಾಕ್ಸ್ ನಲ್ಲಿದ್ದ ವಸ್ತುಗಳನ್ನು ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ. ಮೊಬೈಲ್ ಬಾಕ್ಸ್ ನಲ್ಲಿ ರೆಡ್​​​ಮಿ​​​ ಮೊಬೈಲ್ ಬದಲಾಗಿ ಸೋಪು, ಕಲ್ಲು, ಆಲೂಗಡ್ಡೆಗಳನ್ನು ಕಳಿಸಲಾಗಿದ್ದು, ಕೂಡಲೇ ಅವರು ಸಿಬ್ಬಂದಿಗೆ ಹಣ ನೀಡದೇ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.

ನಾಲ್ಕು ದಿನಗಳ ಹಿಂದೆ ರೆಡ್​​​ಮಿ ನೋಟ್ 8 ಮೊಬೈಲ್‍ಗೆ ಅಮೆಝಾನ್ ನಲ್ಲಿ ಆರ್ಡರ್ ಮಾಡಿದ್ದೆ. ರವಿವಾರ ಬೆಳಗ್ಗೆ ಡೆಲಿವರಿ ಬಾಯ್  ಮೊಬೈಲ್‍ನ ಬಾಕ್ಸ್ ಅನ್ನು ಮನೆಗೆ ತಂದು ಕೊಟ್ಟಿದ್ದಾರೆ. ಬಾಕ್ಸ್ ತೆರೆದು ನೋಡಿದಾಗ ಅದರೊಳಗೆ ಕಲ್ಲು, ವಿಮ್ ಸೋಪು, ಆಲೂಗಡ್ಡೆಯನ್ನು ಇಟ್ಟು ಪ್ಯಾಕ್ ಮಾಡಿರುವುದು ಕಂಡು ಬಂದಿದೆ. ಅಮೆಝಾನ್ ಸಂಸ್ಥೆ ತನ್ನ ಗ್ರಾಹಕರಿಗೆ ಹೀಗೆ ಹಿಂದೆಯೂ ಮೋಸ ಮಾಡಿರುವುದನ್ನು ಗಮನಿಸಿದ್ದರಿಂದ ತಾನು ಕೂಡಲೇ ಬಾಕ್ಸ್ ಪರಿಶೀಲಿಸಿದ್ದರಿಂದ ವಂಚನೆ ಬಯಲಾಗಿದೆ. ಅಮೆಝಾನ್‍ನಂತಹ ದೊಡ್ಡ ಸಂಸ್ಥೆಗಳೇ ಹೀಗೆ ತನ್ನ ಗ್ರಾಹಕರಿಗೆ ವಂಚನೆ ಮಾಡಿದರೆ ಬೇರೆ ಸಂಸ್ಥೆಗಳು ಯಾವ ರೀತಿಯಲ್ಲಿ ವಂಚನೆ ಮಾಡುತ್ತಿರಬಹುದೆಂದು ಊಹಿಸಲು ಸಾಧ್ಯವಾಗುತ್ತಿಲ್ಲ. ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ.

- ಹೈದರ್ ಅಲಿ, ವಂಚನೆಗೊಳಗಾದ ಗ್ರಾಹಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X