Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜನಾಂಗೀಯ ತಾರತಮ್ಯವನ್ನು ಸುಟ್ಟು ಹಾಕಿ:...

ಜನಾಂಗೀಯ ತಾರತಮ್ಯವನ್ನು ಸುಟ್ಟು ಹಾಕಿ: ಜಾರ್ಜ್ ಫ್ಲಾಯ್ಡ್ ಸಾವು ಖಂಡಿಸಿ ಜಗತ್ತಿನಾದ್ಯಂತ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Jun 2020 8:26 PM IST
share
ಜನಾಂಗೀಯ ತಾರತಮ್ಯವನ್ನು ಸುಟ್ಟು ಹಾಕಿ: ಜಾರ್ಜ್ ಫ್ಲಾಯ್ಡ್ ಸಾವು ಖಂಡಿಸಿ ಜಗತ್ತಿನಾದ್ಯಂತ ಪ್ರತಿಭಟನೆ

ಲಂಡನ್, ಜೂ. 7: ಜನಾಂಗೀಯ ತಾರತಮ್ಯ ಮತ್ತು ಪೊಲೀಸ್ ದೌರ್ಜನ್ಯಗಳನ್ನು ವಿರೋಧಿಸಿ ಶನಿವಾರ ಜಾಗತಿಕ ಮಟ್ಟದಲ್ಲಿ ಪ್ರತಿಭಟನಾ ಪ್ರದರ್ಶನಗಳು ಮತ್ತು ಮೆರವಣಿಗೆಗಳು ನಡೆದವು. ಸಿಡ್ನಿಯಿಂದ ಲಂಡನ್‌ವರೆಗೆ, ಆಕ್ರೋಶಿತ ಪ್ರತಿಭಟನಕಾರರು ಮೊಣಕಾಲೂರುತ್ತಾ, ತಮಟೆಗಳನ್ನು ಬಡಿಯುತ್ತಾ ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಬೇರುಬಿಟ್ಟಿರುವ ಜನಾಂಗೀಯ ತಾರತಮ್ಯ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಅಮೆರಿಕದ ಮಿನಸೋಟ ರಾಜ್ಯದ ಮಿನಪೊಲಿಸ್ ನಗರದಲ್ಲಿ ಕರಿಯ ಜನಾಂಗದ ಜಾರ್ಜ್ ಫ್ಲಾಯ್ಡ್ ಪೊಲೀಸ್ ಸುಪರ್ದಿಯಲ್ಲಿ ಪ್ರಾಣಬಿಟ್ಟ ಘಟನೆಯನ್ನು ಪ್ರತಿಭಟಿಸಿ ಕೊರೋನ ವೈರಸ್ ಸಾಂಕ್ರಾಮಿಕದ ಭೀತಿಯನ್ನೂ ಲೆಕ್ಕಿಸದೆ ಈಗಾಗಲೇ ಅಮೆರಿಕದ ಬೀದಿಗಳಲ್ಲಿ ಲಕ್ಷಗಟ್ಟಳೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಸಾಂಸ್ಥಿಕವಾಗಿ ಬೇರುಬಿಟ್ಟಿರುವ ಜನಾಂಗೀಯ ತಾರತಮ್ಯವನ್ನು ಸುಟ್ಟು ಹಾಕಲು ಇದು ಸಕಾಲ ಎಂದು ಲಂಡನ್‌ನ ಸಂಸತ್ ಕಟ್ಟಡದ ಹೊರಗೆ ನೆರೆದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ ಭಾಷಣಕಾರರೊಬ್ಬರು ಹೇಳಿದರು.

ಆಸ್ಟ್ರೇಲಿಯದಲ್ಲಿ, ಕೊರೋನ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಆಕ್ರೋಶವನ್ನು ವ್ಯಕ್ತಪಡಿಸಲು ಬೇರೆ ಮಾರ್ಗವನ್ನು ಕಂಡುಕೊಳ್ಳಿ ಎಂಬ ಪ್ರಧಾನಿ ಸ್ಕಾಟ್ ಮೊರಿಸನ್‌ರ ಮನವಿಯ ಹೊರತಾಗಿಯೂ, ಲಕ್ಷಾಂತರ ಜನರು ಶನಿವಾರ ಬೀದಿಗಿಳಿದು ಪ್ರತಿಭಟಿಸಿದರು. ಬ್ರಿಟನ್‌ನಲ್ಲಿ, ಕೊರೋನ ವೈರಸ್ ಈಗಲೂ ನೈಜ ಬೆದರಿಕೆಯಾಗಿಯೇ ಉಳಿದಿದೆ ಎಂಬ ಆರೋಗ್ಯ ಸಚಿವ ಬೆದರಿಕೆಯನ್ನು ಕಡೆಗಣಿಸಿ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಅಮೆರಿಕದ ನಗರಗಳಲ್ಲಿ ಹುಟ್ಟಿಕೊಂಡ ಪ್ರತಿಭಟನೆಗಳು ಈಗ ನಿಧಾನವಾಗಿ ಜಗತ್ತಿನಾದ್ಯಂತ ಹರಡುತ್ತಿದೆ. ನಮಗೆ ನ್ಯಾಯ ಬೇಕು! ನಾವು ಉಸಿರಾಡಲು ಬಯಸುತ್ತೇವೆ! ಎಂದು ಟ್ಯುನಿಸ್‌ನಲ್ಲಿ ಪ್ರತಿಭಟನೆ ನಡೆಸಿದ ಸಾವಿರಾರು ಮಂದಿ ಘೋಷಣೆಗಳನ್ನು ಕೂಗಿದರು.

ದಕ್ಷಿಣ ಆಫ್ರಿಕದ ಪ್ರಿಟೋರಿಯ, ಫ್ರಾನ್ಸ್‌ನ ಪ್ಯಾರಿಸ್. ಜರ್ಮನಿಯ ನಗರಗಳಾದ ಫ್ರಾಂಕ್‌ಫರ್ಟ್ ಮತ್ತು ಬರ್ಲಿನ್ ಹಾಗೂ ಇರಾಕ್ ರಾಜಧಾನಿ ಬಗ್ದಾದ್‌ನಲ್ಲೂ ಪ್ರತಿಭಟನೆಗಳು ನಡೆದವು.

23 ಪೊಲೀಸರಿಗೆ ಗಾಯ: ಲಂಡನ್ ಪೊಲೀಸ್ ಅಧಿಕಾರಿ

ಜಾರ್ಜ್ ಫ್ಲಾಯ್ಡ್ ಸಾವಿನ ವಿರುದ್ಧ ಲಂಡನ್‌ನಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಕನಿಷ್ಠ 23 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ನಗರದ ಪೊಲೀಸ್ ಸೂಪರಿಂಟೆಂಡೆಂಟ್ ಜೋ ಎಡ್ವರ್ಡ್ಸ್ ತಿಳಿಸಿದ್ದಾರೆ.

ಜನರ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಅವರು ಬಹುತೇಕ ಶಾಂತ ರೀತಿಯಲ್ಲಿ ಪ್ರತಿಭಟಿಸಿದ್ದಾರೆ. ನಮ್ಮ ಪೊಲೀಸ್ ಸಿಬ್ಬಂದಿ ವೃತ್ತಿಪರರಾಗಿದ್ದಾರೆ ಹಾಗೂ ಸಂಯಮದಿಂದ ವರ್ತಿಸಿದ್ದಾರೆ. ಆದರೆ, ಒಂದು ಸಣ್ಣ ಗುಂಪು ಹಿಂಸಾಚಾರಕ್ಕಿಳಿದಿದ್ದು, ಕಳೆದ ಕೆಲವು ದಿನಗಳ ಅವಧಿಯಲ್ಲಿ 23 ಪೊಲೀಸರು ಗಾಯಗೊಂಡಿದ್ದಾರೆ. ಇದು ಅಸ್ವೀಕಾರಾರ್ಹ ಎಂದು ಅವರು ಹೇಳಿದರು.

ಶನಿವಾರ ಒಂದೇ ದಿನ 10 ಪೊಲೀಸರು ಗಾಯಗೊಂಡಿದ್ದಾರೆ ಹಾಗೂ 14 ಮಂದಿಯನ್ನು ಬಂಧಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X