Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ಣಾಟಕ ಬ್ಯಾಂಕ್: 431 ಕೋಟಿ ರೂ. ಲಾಭ

ಕರ್ಣಾಟಕ ಬ್ಯಾಂಕ್: 431 ಕೋಟಿ ರೂ. ಲಾಭ

ವಾರ್ತಾಭಾರತಿವಾರ್ತಾಭಾರತಿ7 Jun 2020 9:54 PM IST
share
ಕರ್ಣಾಟಕ ಬ್ಯಾಂಕ್: 431 ಕೋಟಿ ರೂ. ಲಾಭ

ಮಂಗಳೂರು, ಜೂ.7: ಕರ್ಣಾಟಕ ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಗೊಂಡ ಪ್ರಸಕ್ತ ವಿತ್ತೀಯ ವರ್ಷ (2019-20) ದಲ್ಲಿ 431.78 ಕೋಟಿ ರೂ. ನಿವ್ವಳ ಲಾಭವನ್ನು ಘೋಷಿಸಿದೆ. ವಿತ್ತೀಯ ವರ್ಷದ 4ನೇ ತ್ರೈಮಾಸಿಕ ಅಂತ್ಯಕ್ಕೆ 27.31 ಕೋಟಿ ರೂ. ನಿವ್ವಳ ಲಾಭವನ್ನು ಘೋಷಿಸಿದೆ.

ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮುಕ್ತಾಯಗೊಂಡ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಹಣಕಾಸು ವರದಿ ಅಂಗೀಕಾರಗೊಂಡಿತು.

ಬ್ಯಾಂಕಿನ ಒಟ್ಟು ವ್ಯವಹಾರವು 1,28,749.42 ಕೋಟಿ ರೂ. ತಲುಪಿದ್ದು, ವಾರ್ಷಿಕ ಶೇ.4.44 ರ ಬೆಳವಣಿಗೆಯನ್ನು ಸಾಧಿಸಿದೆ. ಬ್ಯಾಂಕಿನ ಠೇವಣಿಗಳು 68,452 ಕೋಟಿ ರೂ.ನಿಂದ ವೃದ್ಧಿಗೊಂಡು, 71,785.15 ಕೋಟಿ ರೂ.ಗೆ ತಲುಪಿದೆ. 54,828 ಕೋಟಿ ರೂ.ಗಳಷ್ಟಿದ್ದ ಬ್ಯಾಂಕಿನ ಮುಂಗಡಗಳು 56,964.27 ಕೋಟಿ ರೂ.ಗೆ ತಲುಪಿದೆ.

ಬ್ಯಾಂಕಿನ ಉಳಿತಾಯ ಖಾತೆ ಹಾಗೂ ಚಾಲ್ತಿ ಖಾತೆಯ ಠೇವಣಿಗಳು (ಕಾಸಾ ಠೇವಣಿ) ಅನುಪಾತ ಮಾರ್ಚ್ 31ರ ಅಂತ್ಯಕ್ಕೆ ಒಟ್ಟು ಠೇವಣಿಗಳ ಶೇ.28.91ರಷ್ಟಕ್ಕೆ ತಲುಪಿದ್ದು, ಇದು ಕಳೆದ ವರ್ಷಾಂತ್ಯಕ್ಕೆ ಶೇ.28.06ರಷ್ಟಿತ್ತು. ಬ್ಯಾಂಕ್‌ನ ನಿರ್ವಹಣಾ ಲಾಭವು ಶೇ.14.27ರ ವೃದ್ಧಿದರದಲ್ಲಿ ಬೆಳವಣಿಗೆ ಕಂಡಿದ್ದು, 1,656.77 ಕೋಟಿ ರೂ. ತಲುಪಿದೆ. ಬ್ಯಾಂಕಿನ ಪ್ರಾವಿಶನ್ ಕವರೇಜ್ ರೇಶಿಯೋ ಉತ್ತಮಗೊಂಡಿದ್ದು ಶೇ. 64.70ಗೆ ತಲುಪಿದೆ. ಬ್ಯಾಂಕಿನ ಅನುತ್ಪಾದಕ ಸ್ವತ್ತುಗಳು ತಹಬಂದಿಯಲ್ಲಿದ್ದು, ಬ್ಯಾಂಕಿನ ಸ್ಥೂಲ ಅನುತ್ಪಾದಕ ಸೊತ್ತುಗಳು (ಜಿಎನ್‌ಪಿಎ) ಇಳಿಕೆ ಕಂಡಿದೆ.

ಮಾರ್ಚ್ 31ರ ಅಂತ್ಯಕ್ಕೆ ಶೇ.4.82ರಷ್ಟಿವೆ. ಇವು ಮೂರನೇ ತ್ರೈಮಾಸಿಕದಲ್ಲಿ ಶೇ.4.99 ರಷ್ಟಿದ್ದವು. ಬ್ಯಾಂಕಿನ ನಿವ್ವಳ ಅನುತ್ಪಾದಕ ಸ್ವತ್ತುಗಳು (ಎನ್‌ಎನ್‌ಪಿಎ) ಕೂಡ ಉತ್ತಮಗೊಂಡಿದ್ದು ಶೇ.3.08ರಷ್ಟಿವೆ. ಕಳೆದ ತ್ರೈಮಾಸಿಕದಲ್ಲಿ ನಿವ್ವಳ ಅನುತ್ಪಾದಕ ಸ್ವತ್ತುಗಳು ಶೇ.3.75ರಷ್ಟಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್., ಕಳೆದ ವಿತ್ತೀಯ ವರ್ಷ ಆರ್ಥಿಕ ರಂಗಕ್ಕೆ ಹಲವು ಸವಾಲುಗಳನ್ನು ಒಡ್ಡಿದ ವರ್ಷ. ಆರ್ಥಿಕ ಸಂಕಷ್ಟದ ಈ ಸಮಯದಲ್ಲೂ ಬ್ಯಾಂಕಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ನಾವು ಉತ್ತಮ ಫಲಿತಾಂಶ ನೀಡಲು ಸಾಧ್ಯವಾಯಿತು. ಬ್ಯಾಂಕಿನ ಅನುತ್ಪಾದಕ ಸ್ವತ್ತುಗಳ ಮೇಲೆ ಹೆಚ್ಚಿನ ನಿಯಂತ್ರಣ ಹೊಂದಿ ಬ್ಯಾಂಕಿನ ಪ್ರಾವಿಶನ್ ಕವರೇಜ್ ರೇಶಿಯೋ (ಪಿಸಿಆರ್) ಕೂಡ ವೃದ್ಧಿಯನ್ನು ಕಂಡಿದೆ ಎಂದರು.

ಬ್ಯಾಂಕಿನ ಮುಂಗಡಗಳ ಬಗ್ಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದರಿಂದ ರಿಟೇಲ್ ಹಾಗೂ ಮಿಡ್ ಕಾರ್ಪೊರೇಟ್ ಮುಂಗಡಗಳು ವೃದ್ಧಿಯಾಗಲು ಸಹಾಯವಾಯಿತು. ನಮ್ಮ ರಿಟೇಲ್ ಹಾಗೂ ಮಿಡ್ ಕಾರ್ಪೊರೇಟ್ ಮುಂಗಡಗಳು ಕ್ರಮವಾಗಿ ಶೇ.11.07 ಮತ್ತು ಶೇ.11.14 ದರದಲ್ಲಿ ಬೆಳವಣಿಗೆಯನ್ನು ಕಂಡವು ಎಂದು ತಿಳಿಸಿದರು.

‘ಕೆಬಿಎಲ್ ವಿಕಾಸ್’ ಎಂಬ ಪರಿವರ್ತನಾ ಪ್ರಕ್ರಿಯೆಯನ್ನು ಜಾರಿಗೆ ತಂದಿದ್ದರಿಂದ ಮಾನವ ಸಂಪನ್ಮೂಲ ಅಭಿವೃದ್ಧಿ, ಐಟಿ ತಂತ್ರಜ್ಞಾನದ ಗುಣಮಟ್ಟದಲ್ಲಿ ಹೆಚ್ಚಳ ಹಾಗೂ ಗ್ರಾಹಕರಿಗೆ ಮೌಲ್ಯವರ್ಧಿತ ಸೇವೆಗಳನ್ನು ಒದಗಿಸಲು ಸಾಧ್ಯವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X