Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಸ್ಥಳೀಯಾಡಳಿತದ ಕಿರುಕುಳ...

ಉತ್ತರ ಪ್ರದೇಶ: ಸ್ಥಳೀಯಾಡಳಿತದ ಕಿರುಕುಳ ವಿರೋಧಿಸಿ ಗಂಗಾನದಿಗೆ ಇಳಿದು ಪತ್ರಕರ್ತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jun 2020 4:26 PM IST
share
ಉತ್ತರ ಪ್ರದೇಶ: ಸ್ಥಳೀಯಾಡಳಿತದ ಕಿರುಕುಳ ವಿರೋಧಿಸಿ ಗಂಗಾನದಿಗೆ ಇಳಿದು ಪತ್ರಕರ್ತರ ಪ್ರತಿಭಟನೆ

ಲಕ್ನೋ: ‘ವಿಮರ್ಶಾತ್ಮಕ ವರದಿಗಾರಿಕೆಯನ್ನು' ಸಹಿಸದೆ ಸ್ಥಳೀಯಾಡಳಿತ ಇಬ್ಬರು ಪತ್ರಕರ್ತರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ಹಲವರು ಪತ್ರಕರ್ತರು ಉತ್ತರ ಪ್ರದೇಶದ ಫತೇಹ್‍ಪುರ್‍ನಲ್ಲಿ ಗಂಗಾನದಿಗೆ ಇಳಿದು ‘ಜಲ ಸತ್ಯಾಗ್ರಹ' ನಡೆಸಿದ್ದಾರೆ.

ಪತ್ರಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಿ ಕಿರುಕುಳ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ವರ್ಗಾವಣೆಗೊಳಿಸಬೇಕು ಹಾಗೂ ಕಿರುಕುಳ ಪ್ರಕರಣದ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಫತೇಹ್‍ಪುರ್‍ನ ವಿಜಯಪುರ್ ಎಂಬಲ್ಲಿರುವ ಸಮುದಾಯ ಪಾಕಶಾಲೆ ಮುಚ್ಚಿದ ಕುರಿತು ತಾವು ಮಾಡಿದ ಒಂದು ಟ್ವೀಟ್‍ಗಾಗಿ ತಮ್ಮ ಮೇಲೆ ಮೇ 13ರಂದು ಎಫ್‍ಐಆರ್ ದಾಖಲಿಸಲಾಗಿದೆ ಎಂದು  57 ವರ್ಷದ ಪತ್ರಕರ್ತ ಅಜಯ್ ಭದೌರಿಯ ಹೇಳಿದ್ದಾರೆ. ನಕಲಿ ಸುದ್ದಿ ಹರಡುತ್ತಿದ್ದಾರೆಂದು ಅವರ ವಿರುದ್ಧ ಆರೋಪ ಹೊರಿಸಲಾಗಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಎಫ್‍ಐಆರ್ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ ಹಾಗೂ ಭದೌರಿಯಾ  ಈ ವರ್ಷ ಯಾವುದೇ ಮಾಧ್ಯಮದ ಜತೆ  ಕೆಲಸ ಮಾಡುತ್ತಿಲ್ಲ ಎಂದು ಮ್ಯಾಜಿಸ್ಟ್ರೇಟ್ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆದರೆ ವಾಸ್ತವವಾಗಿ ಅವರು 32 ವರ್ಷಗಳಿಂದ ಪತ್ರಿಕೋದ್ಯಮ ವೃತ್ತಿಯಲ್ಲಿದ್ದಾರೆ.

“ನಾನು ವಿಜಯಪುರ್‍ನ ಸಮುದಾಯ ಪಾಕಶಾಲೆ ಬಂದ್ ಆಗಿದೆ ಎಂದು ಬರೆದಿದ್ದೆ. ಇದಕ್ಕೆ ಸಾಕ್ಷಿಯಾಗಿ ನಾನು ನಡೆಸಿರುವ ಸಂದರ್ಶನಗಳಿವೆ. ಆದರೆ ನಾನು ಫತೇಹ್‍ಪುರ್‍ನ ಎಲ್ಲಾ ಸಮುದಾಯ ಪಾಕಶಾಲೆಗಳು ಬಂದ್ ಆಗಿವೆ ಎಂದು ಬರೆದಿದ್ದೇನೆಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ'' ಎಂದು ಭದೌರಿಯು ಹೇಳುತ್ತಾರೆ.

“ಫತೇಹ್‍ಪುರ್‍ನಲ್ಲಿರುವ ಗೋಶಾಲೆಗಳು ಸರಿಯಾಗಿ ಕಾರ್ಯಾಚರಿಸುತ್ತಿಲ್ಲ, ಇದರಿಂದಾಗಿ ಗೋವುಗಳು ಸಾಯುತ್ತಿವೆ'' ಎಂಬ ಕುರಿತು ಕಳೆದ ಡಿಸೆಂಬರ್ ತಿಂಗಳಲ್ಲಿ ವರದಿ ಮಾಡಿದ್ದ ವಿವೇಕ್ ಮಿಶ್ರಾ (35) ಎಂಬ ಪತ್ರಕರ್ತನ ವಿರುದ್ಧವೂ ಎಫ್‍ಐಆರ್ ದಾಖಲಾಗಿದೆ.

Dainik Bhaskar's Vivek Mishra claimed that he was booked by the local admin in Dec last year for reporting on dysfunction cowsheds in Fatehpur.

"A lot of corruption will be uncovered if there's an investigation into it." pic.twitter.com/o2inyTKTkE

— Ayush Tiwari (@sighyush) June 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X