Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿ ದರ್ಶನ...

ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿ ದರ್ಶನ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ8 Jun 2020 8:43 PM IST
share
ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿ ದರ್ಶನ ಪ್ರಾರಂಭ

ಉಡುಪಿ, ಜೂ.8: ರಾಜ್ಯ ಸರಕಾರ ನೀಡಿದ ವಿನಾಯಿತಿಯ ಹಿನ್ನೆಲೆಯಲ್ಲಿ ರಾಜ್ಯ ಮುಂಜರಾಯಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳು ಹಾಗೂ ಬಹುಪಾಲು ಇತರ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನ ಮಾಡುವ ಅವಕಾಶ ಇಂದಿನಿಂದ ಲಭಿಸಲಾರಂಭಿಸಿದೆ.

ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲೂ ಇಂದಿನಿಂದ ಮೂಕಾಂಬಿಕಾ ದೇವಿಯ ದರ್ಶನ ಪ್ರಾರಂಭವಾಗಿದ್ದು, ಮುಂಜಾವಿನಿಂದಲೇ ಭಕ್ತರು ಸರತಿ ಸಾಲಿನಲ್ಲಿ ಬಂದು ದೇವಿಯ ದರ್ಶನ ಪಡೆದು ಪುಳಕಿತರಾದರು. ಧನ್ಯತೆಯನ್ನು ಅನುಭವಿಸಿದರು.

ಕೋವಿಡ್-19ರ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಹೇರಿದಾಗ ಉಳಿದೆಲ್ಲಾ ದೇವಾಲಯಗಳಂತೆ ಕೊಲ್ಲೂರು ಮುಕಾಂಬಿಕಾ ದೇವಾಲಯವನ್ನು ಭಕ್ತರಿಗೆ ಮುಚ್ಚಲಾಗಿತ್ತು. ಇದೀಗ ಬರೋಬ್ಬರಿ 77 ದಿನಗಳ ಬಳಿಕ ಭಕ್ತರಿಗೆ ಮತ್ತೆ ದೇಗುಲದ ಬಾಗಿಲನ್ನು ತೆರೆದು ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಈ ಸಂದರ್ಭಕ್ಕಾಗಿ ದೇವಾಲಯವನ್ನು ವಿವಿಧ ಬಗೆಯ, ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು. ದೇಗುಲದ ಪ್ರಾಂಗಣದಲ್ಲಿ ಸಿಬ್ಬಂದಿಗಳು ಸ್ಯಾನಿಟೈಸರ್ ಹಾಗೂ ಥರ್ಮಲ್ ಚೆಕ್‌ಅಪ್ ನಡೆಸುತಿದ್ದರು. ಭಕ್ತರಿಗೆ ದೇಗುಲದ ಧ್ವಜಸ್ತಂಭದವರೆಗೆ ಮಾತ್ರ ಹೋಗಲು ಅವಕಾಶ ನೀಡಲಾಗುತ್ತಿತ್ತು.

ಸಿಬ್ಬಂದಿಗಳು ಯಾರಿಗೂ ಗರ್ಭಗುಡಿಯ ಸಮೀಪ ಹೋಗಲು ಅವಕಾಶ ನೀಡುತ್ತಿರಲಿಲ್ಲ. ದೂರದಿಂದಲೇ ಮೂಕಾಂಬಿಕೆಯ ದರ್ಶನ ಪಡೆದು ನಮಸ್ಕರಿಸುವ ಅವಕಾಶವನ್ನು ಭಕ್ತರಿಗೆ ನೀಡಲಾಗುತ್ತಿದೆ. ಹೀಗಾಗಿ ಯಾರೂ ಶರ್ಟ್ ಮತ್ತು ಬನಿಯನ್ ತೆಗೆಯುವ ಅಗತ್ಯ ಬೀಳುತ್ತಿರಲಿಲ್ಲ.

ದೇವಸ್ಥಾನದ ಸಿಬ್ಬಂದಿಗಳ ಹದ್ದಿನ ಕಣ್ಣಿನಡಿ ಭಕ್ತರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ನಮಸ್ಕರಿಸಿ ಅಲ್ಲಿಂದ ತೆರಳುತಿ ದ್ದಾರೆ. ಸದ್ಯ ಯಾರಿಗೂ ತೀರ್ಥ ಪ್ರಸಾದ ನೀಡಲಾಗುತ್ತಿಲ್ಲ. ಯಾವುದೇ ಸೇವೆಗೂ ಅವಕಾ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಅಂಬಲಪಾಡಿ, ಮಂದಾರ್ತಿಗಳಲ್ಲಿ ಪ್ರಾರಂಭ: ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ಬರುವ ಅಂಬಲಪಾಡಿಯ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನ, ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನ, ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಉಡುಪಿಯ ಶ್ರೀಅನಂತೇಶ್ವರ ಹಾಗೂ ಚಂದ್ರವೌಳೀಶ್ವರ ದೇವಸ್ಥಾನಗಳಲ್ಲೂ ಸರಕಾರದ ಮಾರ್ಗದರ್ಶಿ ಸೂತ್ರಗಳಿ ಗನುಸಾರವಾಗಿ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಾಕಷ್ಟು ಸಂಖ್ಯೆಯ ಭಕ್ತರು ಇಲ್ಲಿ ದೇವರ ದರ್ಶನ ಪೆದರು.

ಆದರೆ ಉಡುಪಿಯ ಶ್ರೀಕೃಷ್ಣ ಮಠ ಸೇರಿದಂತೆ ಕೆಲವು ದೇವಸ್ಥಾನಗಳಲ್ಲಿ ಇಂದು ದೇವರ ದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಮುಂದಿನ ತಿಂಗಳಿನಿಂದ ಶ್ರೀಕೃಷ್ಣ ಮಠಕ್ಕೆ ಭಕ್ತರಿಗೆ ಪ್ರವೇಶ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X