Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಬಿಜೆಪಿ ವಿರುದ್ಧ ಕಾಸರಗೋಡು ಬಿಜೆಪಿ...

ದ.ಕ. ಬಿಜೆಪಿ ವಿರುದ್ಧ ಕಾಸರಗೋಡು ಬಿಜೆಪಿ ಪ್ರತಿಭಟನೆ

ಗಡಿ ಪ್ರದೇಶದಲ್ಲಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jun 2020 10:36 PM IST
share
ದ.ಕ. ಬಿಜೆಪಿ ವಿರುದ್ಧ ಕಾಸರಗೋಡು ಬಿಜೆಪಿ ಪ್ರತಿಭಟನೆ

ಮಂಗಳೂರು, ಜೂ.8: ಕೊರೋನ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಂದ್ ಮಾಡಿರುವ ದ.ಕ. ಗಡಿ ಪ್ರದೇಶದಲ್ಲಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಕಾಸರಗೋಡು ಬಿಜೆಪಿ ಮುಖಂಡರು ಸೋಮವಾರ ದ.ಕ. ಜಿಲ್ಲೆಯ ಬಿಜೆಪಿ ಆಡಳಿತ ವಿರುದ್ಧವೇ ಪ್ರತಿಭಟನೆ ನಡೆಸಿದ ವಿದ್ಯಮಾನ ತಲಪಾಡಿಯಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕೊರೋನ ಸೋಂಕು ಹಬ್ಬುತ್ತಿದ್ದ ವೇಳೆ ತಲಪಾಡಿ ಗಡಿಯನ್ನು ಉಭಯ ಜಿಲ್ಲಾಡಳಿತ ಮುಚ್ಚಿತ್ತು. ಬಳಿಕ ಕೇರಳ ಸರಕಾರ ಸುಪ್ರೀಂ ಕೋರ್ಟ್ ಕದತಟ್ಟಿದ ಬಳಿಕ ವೈದ್ಯಕೀಯ ತುರ್ತು ಅವಶ್ಯಕತೆಗಳಿಗೆ ಮಾತ್ರ ಪಾಸ್ ಮೂಲಕ ಗಡಿ ಪ್ರವೇಶಕ್ಕೆ ಅವಕಾಶ ಲಭಿಸಿತ್ತು. ಆದರೆ ಕೊರೋನ ಸೋಂಕು ಹತೋಟಿಗೆ ಬಾರದ ಕಾರಣ ಗಡಿ ಬಂದ್ ಯಥಾಸ್ಥಿತಿ ಮುಂದು ವರಿದಿತ್ತು. ಇದರಿಂದಾಗಿ ಲಾಕ್‌ಡೌನ್ ಸಡಿಲಗೊಂಡರೂ ಗಡಿ ಪ್ರದೇಶ ಸಂಚಾರಕ್ಕೆ ತೆರವುಗೊಳ್ಳದ ಹಿನ್ನೆಲೆ ಹಾಗೂ ಉದ್ಯೋಗಿ ಗಳ ಸಂಚಾರಕ್ಕೆ ನಿತ್ಯ ಪಾಸ್ ಸಮರ್ಪಕವಾಗಿ ವಿತರಣೆಯಾಗದ ಆರೋಪದಲ್ಲಿ ಕಾಸರಗೋಡು ಬಿಜೆಪಿ ಪ್ರತಿಭಟನೆಗೆ ಇಳಿದಿತ್ತು.

ಸೋಮವಾರ ಕುಂಜತ್ತೂರಿನಿಂದ ಕಾಲ್ನಡಿಗೆಯಲ್ಲಿ ತಲಪಾಡಿಗೆ ಹೊರಟ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ, ನ್ಯಾಯವಾದಿ ಶ್ರೀಕಾಂತ್ ಮತ್ತಿತರರನ್ನು ದಾರಿ ಮಧ್ಯೆ ಪೊಲೀಸರು ತಡೆದರು. ಬಳಿಕ ಮತ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ರಾಷ್ಟ್ರೀಯ ಹೆದ್ದಾರಿ ಮೂಲಕ ಕೊನೆಗೂ ತಲಪಾಡಿ ತಲುಪಿದ ಬಿಜೆಪಿ ಮುಖಂಡರು, ತಲಪಾಡಿ ಚೆಕ್‌ಪೋಸ್ಟ್ ಬಳಿ ಪಕ್ಷದ ಧ್ವಜ ಹಿಡಿದು ದ.ಕ. ಜಿಲ್ಲಾಡಳಿತದ ಧೋರಣೆಯನ್ನು ಟೀಕಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಕಾಂತ್, ಕಾಸರಗೋಡಿನಿಂದ ಮಂಗಳೂರಿಗೆ ಸಂಚರಿಸುವವರಿಗೆ ನಿತ್ಯ ಪಾಸ್‌ನ್ನು ಬೇಗನೆ ವಿತರಿಸುವ ಬಗ್ಗೆ ಜಿಲ್ಲಾಡಳಿತ ಸಮ್ಮತಿ ವ್ಯಕ್ತಪಡಿಸಿದೆ. ಈ ಬಗ್ಗೆ ದ.ಕ. ಉಸ್ತುವಾರಿ ಸಚಿವರು, ಶಾಸಕರು ಹಾಗೂ ಸಂಸದರು ಸಹಕಾರ ನೀಡಿದ್ದಾರೆ. ಕೆಲವೊಂದು ನಿಬಂಧನೆಗಳ ಕಾರಣ ಗಡಿಯನ್ನು ಪೂರ್ತಿಯಾಗಿ ಸಂಚಾರಕ್ಕೆ ತೆರೆಯಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಅವರು ಮನವರಿಕೆ ಮಾಡಿದ್ದಾರೆ ಎಂದರು.

ದ.ಕ. ಜಿಲ್ಲೆಯ ಶಾಸಕರು, ಸಂಸದರು ಹಾಗೂ ಉಸ್ತುವಾರಿ ಸಚಿವರು ಸೇರಿ ಈ ಹಿಂದೆ ಗಡಿ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದರು. ಇದೀಗ ದ.ಕ. ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸಿದರೂ, ಜಿಲ್ಲೆಯ ಬಿಜೆಪಿ ವಿರುದ್ಧವೇ ಕಾಸರಗೋಡು ಬಿಜೆಪಿ ಪ್ರತಿಭಟನೆ ನಡೆಸಿದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X