Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕೊರೋನ ಎಕ್ಸ್‌ಪ್ರೆಸ್’ ಹೇಳಿಕೆ ಮೂಲಕ...

‘ಕೊರೋನ ಎಕ್ಸ್‌ಪ್ರೆಸ್’ ಹೇಳಿಕೆ ಮೂಲಕ ಮಮತಾ ಬ್ಯಾನರ್ಜಿ ಕಾರ್ಮಿಕರನ್ನು ಅವಮಾನಿಸಿದ್ದಾರೆ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ9 Jun 2020 10:40 PM IST
share
‘ಕೊರೋನ ಎಕ್ಸ್‌ಪ್ರೆಸ್’ ಹೇಳಿಕೆ ಮೂಲಕ ಮಮತಾ ಬ್ಯಾನರ್ಜಿ ಕಾರ್ಮಿಕರನ್ನು ಅವಮಾನಿಸಿದ್ದಾರೆ: ಅಮಿತ್ ಶಾ

ಕೋಲ್ಕತಾ, ಜೂ.9: ಶ್ರಮಿಕ್ ವಿಶೇಷ ರೈಲುಗಳನ್ನು ಕೊರೋನ ಎಕ್ಸ್‌ಪ್ರೆಸ್ ಎಂದು ಕರೆದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಲಸೆ ಕಾರ್ಮಿಕರನ್ನು ಅವಮಾನಿಸಿದ್ದಾರೆ. ಈ ಹೇಳಿಕೆ ಪಶ್ಚಿಮ ಬಂಗಾಳದಿಂದ ಟಿಎಂಸಿಯ ನಿರ್ಗಮನಕ್ಕೆ ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

2021ರಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಪ್ರಚಾರಕಾರ್ಯಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಮಾತನಾಡಿದ ಶಾ, ಮಮತಾಜೀ, ಲಾಕ್‌ಡೌನ್ ಸಂದರ್ಭ ವಲಸೆ ಕಾರ್ಮಿಕರನ್ನು ಬಂಗಾಳಕ್ಕೆ ಕರೆತರುವ ಶ್ರಮಿಕ್ ವಿಶೇಷ ರೈಲುಗಳನ್ನು ‘ಕೊರೋನ ಎಕ್ಸ್‌ಪ್ರೆಸ್’ ಎಂದು ಕರೆಯುವ ಮೂಲಕ ನೀವು ವಲಸೆ ಕಾರ್ಮಿಕರಿಗೆ ಅವಮಾನ ಮಾಡಿದ್ದೀರಿ. ಅವರ ಗಾಯಕ್ಕೆ ಉಪ್ಪೆರಚಿದ್ದೀರಿ. ಇದನ್ನು ಅವರು ಎಂದಿಗೂ ಮರೆಯುವುದಿಲ್ಲ ಎಂದರು.

ಕೇಂದ್ರ ಸರಕಾರದ ವಿರುದ್ಧ ಸದಾ ದ್ವೇಷ ಕಾರುತ್ತಿರುವ ಮಮತಾ, ಕೇಂದ್ರ ಸರಕಾರದ ಹಲವು ಯೋಜನೆಗಳನ್ನು ಪಶ್ಚಿಮ ಬಂಗಾಳದ ಜನತೆಗೆ ಸಿಗದಂತೆ ತಡೆದಿದ್ದಾರೆ ಎಂದು ಆರೋಪಿಸಿದ ಶಾ, ರಾಜ್ಯ ಸರಕಾರದ ಸಾಧನೆಯ ಬಗ್ಗೆ ಕೇಂದ್ರಕ್ಕೆ ತೃಪ್ತಿಯಿಲ್ಲದಿದ್ದರೆ ಸರಕಾರವನ್ನು ವಜಾಗೊಳಿಸಬಹುದು ಎಂಬ ಮಮತಾರ ಹೇಳಿಕೆಯನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನತೆ ಈಡೇರಿಸಲಿದ್ದಾರೆ ಎಂದರು.

ಕೃಷಿಕ್ ಸಮ್ಮಾನ್ ನಿಧಿ ಯೋಜನೆಯ ವ್ಯಾಪ್ತಿಗೆ ಬರುವ ರೈತರ ಪಟ್ಟಿಯನ್ನು ಕಳಿಸಲು ಮಮತಾ ನಿರಾಕರಿಸುತ್ತಿದ್ದು ಇದರಿಂದ ರಾಜ್ಯದ ರೈತರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಂಗಾಳದಲ್ಲಿ ಮಮತಾ ಸರಕಾರ ಮಾಡಿರುವ ಸಾಧನೆಯ ವಿವರ ನೀಡಲಿ ಎಂದು ಶಾ ಹೇಳಿದರು. ಮಮತಾ ಪೌರತ್ವ ಕಾಯ್ದೆಯನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ವಿರೋಧಿಸಿ ರಸ್ತೆಗಿಳಿದು ರ್ಯಾಲಿ ನಡೆಸಿದರು. ಬಾಂಗ್ಲಾದೇಶದ ನಿರಾಶ್ರಿತ ಬಂಗಾಳಿ ಸಹೋದರರು ಅವರಿಗೇನಾದರೂ ತೊಂದರೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಶಾ, ಈ ರೀತಿಯ ಕ್ರಮಗಳಿಂದ ಅವರು ಬಂಗಾಳದಲ್ಲಿ ರಾಜಕೀಯ ನಿರಾಶ್ರಿತರಾಗಲಿದ್ದಾರೆ ಎಂದರು. ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಿಂದ ದೇಶದ ಸುಮಾರು 50 ಕೋಟಿ ಜನತೆ ಪ್ರಯೋಜನ ಪಡೆದಿದ್ದಾರೆ.

ದಿಲ್ಲಿಯ ಕೇಜ್ರಿವಾಲ್ ಸರಕಾರ ಕೂಡಾ ಇದನ್ನು ಜಾರಿಗೊಳಿಸಿದೆ. ಆದರೆ ಮಮತಾರಿಂದಾಗಿ ಬಂಗಾಳದ ಜನತೆಗೆ ಈ ಯೋಜನೆಯ ಸೌಲಭ್ಯ ದೊರಕುತ್ತಿಲ್ಲ. ಬಂಗಾಳದ ಬಡವರಿಗೆ ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯ ಪಡೆಯುವ ಹಕ್ಕು ಇಲ್ಲವೇ. ರಾಜ್ಯದಲ್ಲಿ ಪ್ರಧಾನಿ ಮೋದಿಯ ಜನಪ್ರಿಯತೆ ಹೆಚ್ಚುತ್ತದೆ ಎಂಬ ಭಯ ಕಾಡುತ್ತಿದೆಯೇ. ರಾಜಕೀಯ ಮಾಡಲು ಹಲವು ವಿಷಯಗಳಿವೆ ಎಂದ ಶಾ, ವಿಧಾನಸಭೆ ಚುನಾವಣೆ ನಡೆದು ಬಿಜೆಪಿಯ ಮುಖ್ಯಮಂತ್ರಿಯ ಆಯ್ಕೆಯಾದ ಮರುಕ್ಷಣವೇ ಪಶ್ಚಿಮ ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X