Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ್ಯಂಬುಲೆನ್ಸ್ ಚಾಲಕರಿಗೆ ಅವಮಾನ : ದೂರು

ಆ್ಯಂಬುಲೆನ್ಸ್ ಚಾಲಕರಿಗೆ ಅವಮಾನ : ದೂರು

ವಾರ್ತಾಭಾರತಿವಾರ್ತಾಭಾರತಿ9 Jun 2020 11:13 PM IST
share

ಮಂಗಳೂರು, ಜೂ. 9: ಸುಳ್ಯದಿಂದ ರೋಗಿಯೊಬ್ಬರನ್ನು ವೆನ್‌ಲಾಕ್ ಆಸ್ಪತ್ರೆಗೆ ಕರೆತರುವ ವೇಳೆ ಖಾಸಗಿ ಆ್ಯಂಬುಲೆನ್ಸ್‌ನ ಚಾಲಕರಿಗೆ ಫಳ್ನೀರ್ ಸಮೀಪದ ಅಂಗಡಿಯೊಂದರ ಮಾಲಕ ಅವಮಾನ ಮಾಡಿದ್ದಾರೆಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

‘‘ಶ್ರೀಗಣೇಶ್ ಆ್ಯಂಬುಲೆನ್ಸ್‌ನ ಚಾಲಕರೊಬ್ಬರು ಜೂನ್ 6ರಂದು ಸುಳ್ಯದಿಂದ ರೋಗಿಯೊಬ್ಬರನ್ನು ಕರೆತರಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆ್ಯಂಬುಲೆನ್ಸ್‌ನಲ್ಲಿ ಅವರ ಇಬ್ಬರು ಪುಟ್ಟ ಮಕ್ಕಳಿದ್ದರು. ಅವರಿಗೆ ನೀರು ಮತ್ತು ಬಿಸ್ಕೆಟ್‌ಗಾಗಿ ಫಳ್ನೀರ್ ಸಮೀಪದ ಅಂಗಡಿಯೊಂದಕ್ಕೆ ನಮ್ಮ ಚಾಲಕ ಹೋದಾಗ ಆ ಅಂಗಡಿಯ ಮಾಲಕ ತುಚ್ಛವಾಗಿ ಮಾತನಾಡಿದ್ದಾರೆ. ನೀವು ಆ್ಯಂಬುಲೆನ್ಸ್ ಚಾಲಕರು ಅಂಗಡಿಗೆ ಬರುವುದು ಬೇಡ. ನೀವು ಕೊರೋನ ತರುತ್ತೀರಿ. ನಿಮಗೆ ಸರಕಾರದಿಂದ ಎಲ್ಲಾ ಸೌಲಭ್ಯ ಇದೆ ಎಂದು ಹೇಳಿರುವುದಲ್ಲದೆ ನೀರು ಬಿಸ್ಕೆಟ್‌ಗಾಗಿ ಇಟ್ಟ ಹಣವನ್ನೂ ಬಿಸಾಕಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ’’ ಎಂದು ಆಸಿಫ್ ಎಂಬವು ದೂರಿದ್ದಾರೆ.

‘‘ನಮ್ಮ ಚಾಲಕರಿಗೆ ಮಾಡಿರುವ ಅವಮಾನದ ಬಗ್ಗೆ ನಾನು ಮಧ್ಯಾಹ್ನ ಹೋಗಿ ಅಂಗಡಿಯಲ್ಲಿ ಮಾತನಾಡಿದಾಗಲೂ ಅದೇ ಅನುಭವ ಆಗಿದೆ. ನಾವು ಆ್ಯಂಬುಲೆನ್ಸ್ ಚಾಲಕರಾಗಿ ಸರಕಾರಕ್ಕೆ ಹೆಗಲು ಕೊಟ್ಟು ನಾವೂ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ರೋಗಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆ ಬಂದಾಗ ಅವರಿಗೆ ಯಾವ ರೋಗ ಇದೆ ಎಂದು ನಾವು ತಿಳಿಯಲು ಹೋಗುವುದಿಲ್ಲ. ಬದಲಾಗಿ ಆ ರೋಗಿಯ ಪ್ರಾಣ ರಕ್ಷಣೆಯೇ ನಮ್ಮ ಪ್ರಮುಖ ಕರ್ತವ್ಯವಾಗಿರುತ್ತದೆ. ಯಾವುದೇ ಹೊತ್ತಿನಲ್ಲಿ, ನಮ್ಮ ಪ್ರಾಣದ ಹಂಗನ್ನೂ ತೊರೆದು ನಾವು ಕರ್ತವ್ಯ ನಿರ್ವಹಿಸುತ್ತೇವೆ. ಕೊರೋನ ಸಂದರ್ಭದಲ್ಲೂ ನಮಗೆ ಸರಕಾರದಿಂದ ಯಾವುದೇ ರೀತಿಯ ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಸಿಗದಿದ್ದರೂ ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಲಾಕ್‌ಡೌನ್ ಸಂದರ್ಭಲ್ಲೂ ನಮ್ಮ ಮಾಲಕರ ಮೂಲಕ ನಮ್ಮ ಚಾಲಕರಿಗೆ ಮಾತ್ರವಲ್ಲದೆ, ಇತರರಿಗೂ ನಾವು ಸಹಾಯ ಹಸ್ತ ನೀಡಿದ್ದೇವೆ. ಹಾಗಿರುವಾಗ ನಮ್ಮನ್ನು ಈ ರೀತಿ ತುಚ್ಛವಾಗಿ ಕಾಣುವ ಬಗ್ಗೆ ಬೇಸರವಿದೆ. ನಾವು ಮನುಷ್ಯರೇ’’ ಎಂದು ಆಸಿಫ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘‘ಈ ರೀತಿ ಸಮಾಜದಲ್ಲಿ ಆ್ಯಂಬುಲೆನ್ಸ್ ಚಾಲಕರ ಬಗ್ಗೆ ತುಚ್ಛವಾದ ಮನೋಭಾವ ಇರಬಾರದು. ಇಂತಹ ವರ್ತನೆ ಪುನರಾವರ್ತನೆ ಆಗಬಾರದೆಂಬ ಕಾರಣಕ್ಕೆ ನಾವು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ’’ ಎಂದು ಶ್ರೀ ಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X