Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಲಸೆ ಕಾರ್ಮಿಕರು ಸೇರಿದಂತೆ ದೇಶದಲ್ಲಿ...

ವಲಸೆ ಕಾರ್ಮಿಕರು ಸೇರಿದಂತೆ ದೇಶದಲ್ಲಿ ಯಾರೊಬ್ಬರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್ ಕಟೀಲು

ವಾರ್ತಾಭಾರತಿವಾರ್ತಾಭಾರತಿ10 Jun 2020 5:26 PM IST
share
ವಲಸೆ ಕಾರ್ಮಿಕರು ಸೇರಿದಂತೆ ದೇಶದಲ್ಲಿ ಯಾರೊಬ್ಬರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್ ಕಟೀಲು

ಕಲಬುರಗಿ, ಜೂ. 10: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಅವಕಾಶ ನೀಡಿದೆ. ಒಂದು ರಾಜಕೀಯ ಪಕ್ಷವಾಗಿ ಏನೆಲ್ಲಾ ಮಾಡಬಹುದು ಎಂಬುದನ್ನು ಬಿಜೆಪಿ ಇತರೆ ರಾಜಕೀಯ ಪಕ್ಷಗಳಿಗೆ ತೋರಿಸಿಕೊಟ್ಟಿದೆ. ಇದೇ ರೀತಿಯ ಅಚ್ಚರಿಯೂ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊತ್ತಾಗಲಿದೆ, ಅಲ್ಲಿಯವರೆಗೂ ಕಾದುನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಬುಧವಾರ ಜಿಲ್ಲೆಯ ಸೇಡಂನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಸಾಮಾಜಿಕವಾಗಿ ಮತ್ತು ಭೌಗೋಳಿಕವಾಗಿ ಎಲ್ಲ ಅಂಶಗಳನ್ನು ಪರಿಗಣಿಸಿ ಅರ್ಹರಿಗೆ ಪಕ್ಷ ಸ್ಥಾನಮಾನ ನೀಡಲಿದೆ. ಅದು ಮುಖಂಡರಿಗೋ ಅಥವಾ ಸಾಮಾನ್ಯ ಕಾರ್ಯಕರ್ತರಿಗೋ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ನಿರಾಕರಿಸಿದರು.

ಆಹಾರವಿಲ್ಲದೆ ಯಾರೂ ಸಾವನ್ನಪ್ಪಿಲ್ಲ: ಕೊರೋನ ವೈರಸ್ ಸೋಂಕಿನ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಇಡೀ ವಿಶ್ವವೇ ಭಾರತದ ಕ್ರಮವನ್ನು ಕೊಂಡಾಡಿದೆ. ಆದರೆ, ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಮಾತ್ರ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಲಸೆ ಕಾರ್ಮಿಕರು ಸೇರಿದಂತೆ ದೇಶದಲ್ಲಿ ಯಾರೊಬ್ಬರೂ ಆಹಾರವಿಲ್ಲದೆ ಸಾವನ್ನಪ್ಪಿದ ಉದಾಹರಣೆಗಳಿಲ್ಲ. ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್ ಮತ್ತು ರೈಲ್ವೆ ವ್ಯವಸ್ಥೆಗಳನ್ನು ಸರಕಾರವೇ ಮುಂದೆ ನಿಂತು ಕಲ್ಪಿಸಿದೆ. ಅಲ್ಲದೆ, ಅವರಿಗೆ ಆಹಾರವನ್ನು ಒದಗಿಸಿದೆ ಎಂದು ಕಟೀಲು ಹೇಳಿದರು.

ಕೊರೋನ ಸೋಂಕಿಗೆ ಯಾವುದೇ ಒಂದು ಜಾತಿ, ಧರ್ಮವೆಂದು ಗೊತ್ತಿಲ್ಲ. ಅದು ಒಂದು ವೈರಸ್. ಎಲ್ಲರಿಗೂ ಬರುತ್ತದೆ. ಹೀಗಾಗಿ ಎಲ್ಲರೂ ಮುನ್ನಚ್ಚರಿಕೆ ವಹಿಸುವುದು ಬಹಳ ಮುಖ್ಯ. ಆ ದೃಷ್ಟಿಯಿಂದ ಪ್ರಧಾನಿ ಮೋದಿ ಸೂಕ್ತ ಸಂದರ್ಭದಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸರಕಾರದ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X