Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ಕೊರೋನ ವೈರಸ್‌ನ...

ಮಹಾರಾಷ್ಟ್ರದಲ್ಲಿ ಕೊರೋನ ವೈರಸ್‌ನ ಸಮುದಾಯ ಹರಡುವಿಕೆ ಇಲ್ಲ: ಆರೋಗ್ಯ ಸಚಿವ

ವಾರ್ತಾಭಾರತಿವಾರ್ತಾಭಾರತಿ10 Jun 2020 8:32 PM IST
share
ಮಹಾರಾಷ್ಟ್ರದಲ್ಲಿ ಕೊರೋನ ವೈರಸ್‌ನ ಸಮುದಾಯ ಹರಡುವಿಕೆ ಇಲ್ಲ: ಆರೋಗ್ಯ ಸಚಿವ

ಮುಂಬೈ,ಜೂ.10: ಕೊರೋನ ವೈರಸ್‌ನ 90,000ಕ್ಕೂ ಅಧಿಕ ಪ್ರಕರಣಗಳೊಂದಿಗೆ ದೇಶದ ಅತ್ಯಂತ ದೊಡ್ಡ ಹಾಟ್‌ಸ್ಪಾಟ್ ಆಗಿರುವ ಮಹಾರಾಷ್ಟ್ರದ ಸರಕಾರವು ಸಮುದಾಯ ಪ್ರಸರಣದ ಎಲ್ಲ ವರದಿಗಳನ್ನೂ ಸ್ಪಷ್ಟವಾಗಿ ನಿರಾಕರಿಸಿದೆ. ದಿಲ್ಲಿಯಲ್ಲಿ ಸಮುದಾಯ ಸೋಂಕು ಹರಡುವಿಕೆಯ ಕಳವಳಗಳ ಹಿನ್ನೆಲೆಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ರಾಜ್ಯದ ಅರೋಗ್ಯ ಸಚಿವ ರಾಜೇಶ ಟೋಪೆ ಅವರು,ಸಮುದಾಯ ಸೋಂಕು ಹರಡುತ್ತಿದೆ ಎನ್ನುವುದನ್ನು ತಾನು ನಂಬಿಲ್ಲ ಮತ್ತು ಇದು ಸರಕಾರದ ಅಭಿಪ್ರಾಯವೂ ಆಗಿದೆ ಎಂದರು.

ರಾಷ್ಟ್ರ ರಾಜಧಾನಿಯಲ್ಲಿನ ಅರ್ಧದಷ್ಟು ಕೊರೋನ ವೈರಸ್ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಲಾಗುತ್ತಿಲ್ಲ ಮತ್ತು ಇದು ಸಮುದಾಯ ಹರಡುವಿಕೆಯನ್ನು ಸೂಚಿಸುತ್ತದೆ ಎಂದು ದಿಲ್ಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಂಗಳವಾರ ಹೇಳಿದ್ದರು. ಆದರೆ ಕೇಂದ್ರವು ಅವರ ಹೇಳಿಕೆಯನ್ನು ತಿರಸ್ಕರಿಸಿತ್ತು. ಬುಧವಾರ ಸುದ್ದಿಗಾರರೊಡನೆ ಮಾತನಾಡಿದ ಜೈನ್,ಸಮುದಾಯದಲ್ಲಿ ಸೋಂಕು ಹರಡಿದೆ,ಆದರೆ ಇದು ಸಮುದಾಯ ಪ್ರಸರಣವೇ ಅಲ್ಲವೇ ಎನ್ನುವುದನ್ನು ಕೇಂದ್ರವೇ ಘೋಷಿಸಬೇಕು. ಅದೊಂದು ತಾಂತ್ರಿಕ ಶಬ್ದವಾಗಿದೆ ಎಂದು ಹೇಳಿದರು.

 ಶೇ.20ರಿಂದ 40ರಷ್ಟು ಪ್ರಕರಣಗಳು ನೇರವಾಗಿ ಸಮುದಾಯದಿಂದ ವರದಿಯಾಗಿರಬೇಕು ಮತ್ತು ಅವುಗಳ ಮೂಲವನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ಸಮುದಾಯ ಸೋಂಕು ಎಂದು ಪರಿಗಣಿಸಬಹುದು. ಆದರೆ ಮಹಾರಾಷ್ಟ್ರದಲ್ಲಿ ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ಪ್ರಕರಣಗಳು ವರದಿಯಾಗುತ್ತಿವೆ ಮತ್ತು ಪ್ರತಿಯೊಂದೂ ಪ್ರಕರಣದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಟೋಪೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X