ಪಿಯುಸಿ ವರೆಗೆ ಆನ್ಲೈನ್ ಕ್ಲಾಸ್ ರದ್ದುಪಡಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 11: ಎಲ್ಕೆಜಿ, ಯುಕೆಜಿ ಸೇರಿದಂತೆ ಐದನೆ ತರಗತಿಯವರೆಗೆ ಆನ್ಲೈನ್ ಕ್ಲಾಸ್ ರದ್ದುಪಡಿಸಿರುವುದು ಸ್ವಾಗತಾರ್ಹ. ಅದನ್ನು ಪಿಯುಸಿಯವರೆಗೆ ವಿಸ್ತರಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಗುರುವಾರ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ, ನಂತರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ ತೆರೆಯುವ ಬಗ್ಗೆ ಚಿಂತಿಸಬಹುದು, ಈ ಬಗ್ಗೆ ಅವಸರ ಬೇಡ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಮೃತಪಟ್ಟ ಶಂಕಿತ ಕೊರೋನ ಸೋಂಕಿತರ ಕೋವಿಡ್ ಪರೀಕ್ಷೆ ನಡೆಸುವುದನ್ನು ಕೈಬಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದ ನಿರ್ಧಾರ ಅನುಮಾನಕ್ಕೆಡೆಮಾಡಿದೆ. ಕೊರೋನ ಸೋಂಕಿತರ ಸಾವಿನ ಸಂಖ್ಯೆಯನ್ನು ಮುಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪ ತಳ್ಳಿಹಾಕಲಾಗದು
-ಸಿದ್ದರಾಮಯ್ಯ, ವಿಪಕ್ಷ ನಾಯಕ
5ನೇ ತರಗತಿವರೆಗೆ ಸರ್ಕಾರ ಆನ್ಲೈನ್ ತರಗತಿಗಳನ್ನು ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ ಮತ್ತು ಅದನ್ನು ಪಿಯುಸಿ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸುತ್ತೇನೆ. ರಾಜ್ಯದಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ, ನಂತರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ ತೆರೆಯುವ ಬಗ್ಗೆ ಚಿಂತಿಸಬಹುದು, ಈ ಬಗ್ಗೆ ಅವಸರ ಬೇಡ. pic.twitter.com/1SqywL0wJR
— Siddaramaiah (@siddaramaiah) June 11, 2020







