Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗೆ...

ಚಿಕ್ಕಮಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ11 Jun 2020 7:42 PM IST
share
ಚಿಕ್ಕಮಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗೆ ಕೊರೋನ ಸೋಂಕು ದೃಢ

ಚಿಕ್ಕಮಗಳೂರು, ಜೂ.11: ಇತ್ತೀಚೆಗೆ ಪಾಸಿಟಿವ್ ಬಂದಿದ್ದ 16 ಕೊರೋನ ಸೋಂಕಿತರು ಗುಣಮುಖರಾಗಿ ಕೊರೋನ ಸೋಂಕು ಮುಕ್ತವಾಗಿದ್ದ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಗುರುವಾರ ವರದಿಯಾಗಿದೆ. 15 ವರ್ಷದ ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯಲ್ಲಿ ಕೊರೋನ ಸೋಂಕು ಇರುವುದು ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಕೆ.ದಾಸರಹಳ್ಳಿ ನಿವಾಸಿಯಾಗಿರುವ 15 ವರ್ಷದ ಎಸೆಸೆಲ್ಸಿ ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಯನ್ನು ಬುಧವಾರ ರಾತ್ರಿಯೇ ಚಿಕ್ಕಮಗಳೂರು ನಗರದ ಕೋವಿಡ್-19 ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕಗಳಾದ ಸುಮಾರು 55 ಮಂದಿಯನ್ನೂ ಕ್ವಾರಂಟೈನ್‍ಗೆ ಒಳಪಡಿಸಲಾಗಿದ್ದು, ವಿದ್ಯಾರ್ಥಿಯ ಮನೆ ಸೇರಿದಂತೆ ಇಡೀ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ.

ವಿದ್ಯಾರ್ಥಿಯಲ್ಲಿ ಕೊರೋನ ಪಾಸಿಟಿವ್ ಇರುವುದು ಪತ್ತೆಯಾದಾಗಿನಿಂದ ಕೆ.ದಾಸರಹಳ್ಳಿ ಸೇರಿದಂತೆ ಇಡೀ ಕಡೂರು ತಾಲೂಕಿನ ಜನರು ಆತಂಕಕ್ಕೊಳಗಾಗಿದ್ದಾರೆ. ವಿದ್ಯಾರ್ಥಿಗೆ ಸೋಂಕು ಹೇಗೆ ಬಂತೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ವಿದ್ಯಾರ್ಥಿಯ ಟ್ರಾವೆಲ್ ಹಿಸ್ಟರಿ ಪತ್ತೆಗಾಗಿ ಜಿಲ್ಲಾಡಳಿತ ಪ್ರತ್ಯೇಕ ತಂಡಗಳನ್ನು ನೇಮಕ ಮಾಡಿದೆ. ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕಗಳಾದ 55 ಮಂದಿಯ ರಕ್ತ ಹಾಗೂ ಗಂಟಲ ದ್ರವವನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮೇ 19ರಂದು ಮೊದಲ ಬಾರಿಗೆ ಕೊರೋನ ಸೋಂಕಿತರು ಪತ್ತೆಯಾಗಿದ್ದು, ಮೇ 19ರಿಂದ ಮೇ 29ರವರೆಗೆ ಒಟ್ಟು 16 ಸೋಂಕಿತರು ಜಿಲ್ಲೆಯಲ್ಲಿ ಪತ್ತೆಯಾಗಿದ್ದರು. ಸೋಂಕಿತರೆಲ್ಲರೂ ಮಹಾರಾಷ್ಟ್ರ, ದಿಲ್ಲಿಯಿಂದ ಜಿಲ್ಲೆಗೆ ಆಗಮಿಸಿದ್ದ ಪ್ರಯಾಣಿಕರಾಗಿದ್ದು, ಎಲ್ಲರನ್ನೂ ನಗರದ ಕೊರೋನ ಚಿಕಿತ್ಸಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. 

ಈ ಸೋಂಕಿತರೆಲ್ಲರೂ ಗುಣಮುಖರಾಗಿದ್ದರಿಂದ ಜಿಲ್ಲಾಡಳಿತ ಎಲ್ಲರನ್ನೂ ಬಿಡುಗಡೆ ಮಾಡಿತ್ತು. ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಎರಡು ವಾರಗಳ ಬಳಿಕ ಇದೀಗ ಕಡೂರು ತಾಲೂಕಿನಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಈ ಪಾಸಿಟಿವ್ ಪ್ರಕರಣದಿಂದಾಗಿ ಸೋಂಕು ಮುಕ್ತ ಜಿಲ್ಲೆಯಾಗಿದ್ದ ಚಿಕ್ಕಮಗಳೂರು ಮತ್ತೆ ಕೊರೋನ ಸೋಂಕಿನ ಕಾರಣದಿಂದ ಸುದ್ದಿಯಾಗಿದೆ. ಸೋಂಕು ಮುಕ್ತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ಸೋಂಕಿತರು ಪತ್ತೆಯಾಗುತ್ತಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X