Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಟೋರಿಕ್ಷಾ ಮೀಟರ್ ದರ ದೃಢೀಕರಣ...

ಆಟೋರಿಕ್ಷಾ ಮೀಟರ್ ದರ ದೃಢೀಕರಣ ಪ್ರಕ್ರಿಯೆ : ಅಧಿಕ ವೆಚ್ಚ ಪಡೆದರೆ ದೂರು ನೀಡಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ11 Jun 2020 9:34 PM IST
share

ಮಂಗಳೂರು, ಜೂ.11: ಆಟೋರಿಕ್ಷಾ ದರ ಪರಿಷ್ಕರಣೆಗೆ ಅನುಗುಣವಾಗಿ ದೃಢೀಕರಣ ಪ್ರಕ್ರಿಯೆಗೆ ಸಂಬಂಧಿಸಿ ಸಂಘಟನೆಯ ಮನವಿಯ ಮೇರೆಗೆ ವೆಚ್ಚವನ್ನು ಕಡಿತಗೊಳಿಸಿ ಮಾಪನಾಶಾಸ್ತ್ರ ಇಲಾಖೆ ಆದೇಶಿದೆ. ಆದ್ದರಿಂದ ನಿಗದಿಗಿಂತ ಹೆಚ್ಚಿನ ದರ ಪಡೆದರೆ ದೂರು ನೀಡಿ ಎಂದು ಸೋಷಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್‌ನ ದ.ಕ. ಜಿಲ್ಲಾ ಸಮಿತಿ ಸಲಹೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ, ದ.ಕ. ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಪ್ರಯಾಣ ದರವನ್ನು ಎಪ್ರಿಲ್ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ಗೊಳಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆದೇಶಿಸಿದೆ ಎಂದರು.

ಪರಿಷ್ಕೃತ ದರದ ಅನ್ವಯ ಆಟೋರಿಕ್ಷಾ ಪ್ರಯಾಣ ದರದ ಮೀಟರ್ ಪರಿಷ್ಕೃತಗೊಳಿಸಲು ಸತ್ಯಾಪನೆ ಮಾಡಿ ಮುದ್ರೆ ಹಾಕಿಸಿಕೊಳ್ಳುವುದು ಮತ್ತು ತೂಕ ಮತ್ತು ಮಾಪನ ಶಾಸ್ತ ಇಲಾಖೆಯಿಂದ ದೃಢೀಕರಿಸುವ ಪ್ರಕ್ರಿಯೆಗೆ ತಾಂತ್ರಿಕ ಡೀಲರ್‌ಗಳಾದ ಪಾಂಡೇಶ್ವರದ ಕರ್ಕೇರ ವೀಡಿಯೋ ಸೆಂಟರ್ ಮತ್ತು ಬಂದರ್‌ನ ಪ್ರತಾಪ್ ಮೀಟರ್ ವರ್ಕ್ಸ್‌ನವರು 550 ರೂ. ವೆಚ್ಚ ನಿಗದಿಪಡಿಸಿದ್ದರು. ಇದು ಚಾಲಕರಿಗೆ ದುಬಾರಿಯಾಗಿರುವುದಾಗಿ ಆಕ್ಷೇಪಿಸಿ ಸಂಘಟನೆಯ ಜಿಲ್ಲಾ ಸಮಿತಿ ನಿಯೋಗ ಜಿಲ್ಲಾಧಿಕಾರಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಲಿಖಿತ ದೂರು ನೀಡಿತ್ತು. ದೂರಿಗೆ ಸ್ಪಂದಿಸಿ ಸರಕಾರದ ಅಧೀನಕ್ಕೆ ಚಲನ್ ರೂಪದಲ್ಲಿ 150 ರೂ. ಹಾಗೂ ಡೀಲರ್‌ಗಳಿಗೆ ಮೀಟರ್ ಜೋಡಣೆ ಮತ್ತು ನಿರ್ವಹಣಾ ವೆಚ್ಚವಾಗಿ 350 ರೂ. ಸೇರಿ ಒಟ್ಟು 500 ರೂ. ನಿಗದಿಪಡಿಸಲಾಗಿದೆ. ಹಾಗಾಗಿ ತಾಂತ್ರಿಕ ಡೀಲರ್‌ಗಳು ಆಟೋ ಚಾಲಕರಿಗೆ ಈ ಹಿಂದೆ ನೀಡುತ್ತಿದ್ದ ಸೇವೆಯನ್ನು ಮುಂದುವರಿಸಬೇಕು. ಆಟೋ ಚಾಲಕರು ಕೂಡಾ ಇದರ ಸದುಪಯೋಗ ಪಡೆಯಬೇಕು. ಈ ಹಿಂದೆ ನೀಡುತ್ತಿದ್ದ ಸೇವೆಯಲ್ಲಿ ಕಡಿತಗೊಳಿಸಿ ಚಾಲಕರಿಗೆ ತೊಂದರೆ ನೀಡಿದರೆ ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅಥವಾ ಸಂಘಟನೆಯ ಜಿಲ್ಲಾ ನಾಯಕರನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಳಕೆ, ಸದಸ್ಯರಾದ ನೌಫಾಲ್ ಕುದ್ರೋಳಿ, ಮಂಗಳೂರು ನಗರ ಸಮಿತಿಯ ಉಪಾಧ್ಯಕ್ಷ ಶಿಯಾಬ್ ಜೆಪ್ಪು, ಕಾರ್ಯದರ್ಶಿ ಶರೀಫ್ ಕುತ್ತಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X