Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಬೆಂಬಲದಿಂದ ದೇವೇಗೌಡರು ರಾಜ್ಯಸಭೆಗೆ...

ನನ್ನ ಬೆಂಬಲದಿಂದ ದೇವೇಗೌಡರು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದು ಹೇಳಲು ನಾನು ಮುಟ್ಟಾಳನಲ್ಲ: ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ11 Jun 2020 9:39 PM IST
share
ನನ್ನ ಬೆಂಬಲದಿಂದ ದೇವೇಗೌಡರು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದು ಹೇಳಲು ನಾನು ಮುಟ್ಟಾಳನಲ್ಲ: ಡಿಕೆಶಿ

ಬೆಂಗಳೂರು, ಜೂ.11: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ನಾನು ಯಾರಿಗೂ ಟಿಕೆಟ್ ಕೊಡುವುದಿಲ್ಲ. ಅದೇನಿದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರ. ಅವರು ತೆಗೆದುಕೊಂಡ ನಿರ್ಧಾರವನ್ನು ತಿಳಿಸುವುದು ನನ್ನ ಕೆಲಸ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಬೆಂಬಲದಿಂದ ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದು ಹೇಳಲು ನಾನು ಮುಟ್ಟಾಳನಲ್ಲ. ಅವರಿಗೆ ಅವರದೇ ಆದ ವ್ಯಕ್ತಿತ್ವ, ಹಿರಿತನವಿದೆ ಎಂದರು.

ರಾಜ್ಯಸಭೆಗೆ ದೇವೇಗೌಡರನ್ನು ಬೆಂಬಲಿಸುವುದು ಪಕ್ಷದ ವರಿಷ್ಠರ ತೀರ್ಮಾನ. ಅವರು ರಾಷ್ಟ್ರದ ಆಸ್ತಿ. ಅವರ ಆಯ್ಕೆ ವಿಚಾರದಲ್ಲಿ ಚೌಕಾಸಿ ಮಾಡುತ್ತಾ ಕೂರುವುದಿಲ್ಲ. ನನಗೂ 40 ವರ್ಷದ ರಾಜಕೀಯ ಅನುಭವವಿದೆ ಎಂದು ಶಿವಕುಮಾರ್ ಹೇಳಿದರು.

ನನ್ನ ಪದಗ್ರಹಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಮಾಧ್ಯಮಗಳ ಮೂಲಕ ತಿಳಿದಿದೆ. ಅನುಮತಿ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗೆ ಧನ್ಯವಾದಗಳು. ನನ್ನ ಪದಗ್ರಹಣ ಕಾರ್ಯಕ್ರಮದ ದಿನಾಂಕವನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ ಶೀಘ್ರದಲ್ಲೆ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ನಾನು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಅದಕ್ಕೆ ಮುಖ್ಯಮಂತ್ರಿಯ ಅನುಮೋದನೆ ಪಡೆದು ಅಧಿಕಾರಿಗಳು ಪತ್ರ ಬರೆದಿದ್ದರು. ಇಂದು ಬೆಳಗ್ಗೆ ಅವರು ಅನುಮತಿ ನೀಡಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳು ಇರಬೇಕು. ವಿರೋಧ ಪಕ್ಷ ಇಲ್ಲವಾದರೆ ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ಜೂ.14ರಂದು ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಾನು ನಿನ್ನೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂದು ಆ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಪಕ್ಷದ ನಾಯಕರೊಂದಿಗೆ ಚರ್ಚೆ ಮಾಡಬೇಕಿದೆ. ಅವರೊಟ್ಟಿಗೆ ಚರ್ಚೆ ಮಾಡಿದ ಕೆಲವೇ ತಾಸುಗಳಲ್ಲಿ ದಿನಾಂಕ ಪ್ರಕಟಿಸುತ್ತೇನೆ. ಪರಿಷತ್ ಚುನಾವಣೆಯೂ ಎದುರಾಗಲಿದ್ದು, ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಾಯಕರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ನಾವು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಮೂಲೆ ಮೂಲೆಯಲ್ಲೂ ಈ ಕಾರ್ಯಕ್ರಮ ನಡೆಸುತ್ತಿದ್ದು ಅವರ ಜತೆ ಚರ್ಚಿಸಬೇಕಿದೆ. ಮಾಧ್ಯಮಗಳ ಮೂಲಕ ನಾನು ಕಾರ್ಯಕರ್ತರು ಹಾಗೂ ವೀಕ್ಷಕರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ಈಗಾಗಲೇ ಪ್ರತಿ ಪಂಚಾಯತ್ ಗಳಿಗೆ ತೆರಳಿರುವವರು ತಮ್ಮ ಕೆಲಸ ಮುಂದುವರಿಸಿಕೊಳ್ಳಲಿ ಜತೆಗೆ ಈ ವಿಚಾರವಾಗಿ ಮಾಹಿತಿ ರವಾನಿಸಿ ಎಂದು ಶಿವಕುಮಾರ್ ಹೇಳಿದರು.

ಆಶಾಡ ಬಂತು ಅಂತಾ ಕಾರ್ಯಕ್ರಮ ಮುಂದೂಡುವುದಿಲ್ಲ. ನಾನು ನನ್ನದೇ ಆದ ನಂಬಿಕೆಗಳನ್ನು ಇಟ್ಟುಕೊಂಡಿದ್ದೇನೆ ನಿಜ. ನಾನು ಮೊದಲ ದಿನದಿಂದಲೇ ನನ್ನ ಕಾರ್ಯ ಮಾಡಿಕೊಂಡು ಬಂದಿದ್ದೇನೆ. ಜನರಿಗೆ ಅನುಕೂಲವಾಗುವ ದಿನ ಕಾರ್ಯಕ್ರಮ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮ ನನ್ನದಲ್ಲ. ಕಾರ್ಯಕರ್ತರದ್ದು. ನನ್ನ ಪ್ರತಿಜ್ಞಾ ಕಾರ್ಯಕ್ರಮ ಅಲ್ಲ, ಕಾರ್ಯಕರ್ತರ ಪ್ರತಿಜ್ಞಾ ಕಾರ್ಯಕ್ರಮ. ಅವರ ಜತೆ ನಾನು ಒಬ್ಬ ಕಾರ್ಯಕರ್ತನಂತೆ ನಿಮ್ಮೆಲ್ಲರ ಸಮ್ಮುಖದಲ್ಲಿ ಪ್ರತಿಜ್ಞೆ ಸ್ವೀಕರಿಸುತ್ತೇನೆ. ಮುಖ್ಯಮಂತ್ರಿ ರಾಜ್ಯ ಹಾಗೂ ದೇಶದ ಮುಂದೆ ಅವರ ಅನುಮತಿ ನೀಡಿದ್ದಾರೆ. ವೈಯಕ್ತಿಕವಾಗಿ ಮಾತು ಕೊಟ್ಟರೆ ಬೇರೆ ವಿಚಾರ. ಆದರೆ ಅವರು ಮಾಧ್ಯಮಗಳ ಮೂಲಕ ಇಡೀ ದೇಶದ ಜನರ ಮುಂದೆ ಅನುಮತಿ ಕೊಟ್ಟಿದ್ದಾರಲ್ಲ. ಇನ್ನೇನು ಬೇಕು? ಎಂದು ಅವರು ಪ್ರಶ್ನಿಸಿದರು.

ಅವರು ಅನುಮತಿ ಕೊಟ್ಟಿದ್ದು ನನಗೆ ತಿಳಿಯುವ ಮುನ್ನವೇ ಅಮೆರಿಕ, ಆಸ್ಟ್ರೇಲಿಯಾದಲ್ಲಿರುವ ನನ್ನ ಸ್ನೇಹಿತರಿಗೆ ಮಾಹಿತಿ ಹೋಗಿದ್ದು ಅವರು ನನಗೆ ಸಂದೇಶ ಕಳುಹಿಸಿದ್ದಾರೆ. ಇದಕ್ಕಿಂತ ಇನ್ನೇನು ಬೇಕು? ಈ ವಿಚಾರದಲ್ಲಿ ಅವರನ್ನು ಸತ್ಯ ಪರೀಕ್ಷೆ ಮಾಡಲು ಹೋಗುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X