ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ: ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು
![ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ: ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ: ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು](https://www.varthabharati.in/sites/default/files/images/articles/2020/06/11/247013-1591896181.jpg)
ಬೆಂಗಳೂರು, ಜೂ.11: ಗರ್ಭಿಣಿ ಮಹಿಳೆಯೊಬ್ಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಜಿಂದಾಲ್ ನಗರದ ನಿವಾಸಿ ರಮ್ಯಾ(23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ.
4 ವರ್ಷಗಳ ಹಿಂದೆ ಬೆಂಗಳೂರಿನ ಚಿಕ್ಕಬಿದರಕಲ್ಲು ನಿವಾಸಿ ಅರುಣ್ನೊಂದಿಗೆ ರಮ್ಯಾ ವಿವಾಹವಾಗಿದ್ದರು. ಆದರೆ ದಿನಕಳೆದಂತೆ ವರದಕ್ಷಿಣೆ ತರುವಂತೆ ಪತಿ ಅರುಣ್ ರಮ್ಯಾರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.
ರಮ್ಯಾ ಎರಡು ತಿಂಗಳ ಗರ್ಭಿಣಿ ಆಗಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
Next Story