Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗದಗ: ಕೆಎಂಡಿಸಿಯಲ್ಲಿ ಸಬ್ಸಿಡಿ ವಂಚನೆ...

ಗದಗ: ಕೆಎಂಡಿಸಿಯಲ್ಲಿ ಸಬ್ಸಿಡಿ ವಂಚನೆ ಭೇದಿಸಿದ ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ನೇತೃತ್ವದ ತಂಡ

ಅಧಿಕಾರಿಗಳ ಶ್ರಮದಿಂದ ಅರ್ಹ ಫಲಾನುಭವಿಗಳ ಕೈ ಸೇರಿತು ಸಬ್ಸಿಡಿ ಹಣ

ವಾರ್ತಾಭಾರತಿವಾರ್ತಾಭಾರತಿ12 Jun 2020 5:52 PM IST
share
ಗದಗ: ಕೆಎಂಡಿಸಿಯಲ್ಲಿ ಸಬ್ಸಿಡಿ ವಂಚನೆ ಭೇದಿಸಿದ ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ನೇತೃತ್ವದ ತಂಡ

ಗದಗ, ಜೂ.12: ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ(ಕೆಎಂಡಿಸಿ) ನಡೆಯುತ್ತಿದ್ದ ಲಕ್ಷಾಂತರ ರೂಪಾಯಿ ಸಬ್ಸಿಡಿ ವಂಚನೆ ಪ್ರಕರಣ ಭೇದಿಸಿರುವ ಬೆಳಗಾವಿ ವಲಯದ ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ನೇತೃತ್ವದ ಅಧಿಕಾರಿಗಳ ತಂಡ, ಒಟ್ಟು 25 ಫಲಾನುಭವಿಗಳಿಗೆ ಸೇರಬೇಕಾಗಿದ್ದ 45 ರಿಂದ 50 ಲಕ್ಷದಷ್ಟು ಸಬ್ಸಿಡಿ ಹಣವನ್ನು ಅರ್ಹರ ಕೈ ಸೇರುವಂತೆ ಮಾಡಿದ್ದಾರೆ.

ವ್ಯಕ್ತಿಯೊಬ್ಬರ ದೂರಿನನ್ವಯ ಕಾರ್ಯಾಚರಣೆಗಿಳಿದ ಎಸಿಬಿ ಅಧಿಕಾರಿಗಳು, ಜಿಲ್ಲಾ ಕೆಎಂಡಿಸಿ ವ್ಯವಸ್ಥಾಪಕ ಝಾಕೀರ್ ಹುಸೇನ್ ಕುಕನೂರ ಮತ್ತು ಕಂಪ್ಯೂಟರ್ ಆಪರೇಟರ್ ಅಕ್ಬರ್ ಹಳೆಮಸೂತಿ ಎಂಬವರನ್ನು ಬಂಧಿಸಿ, ಶ್ರಮಜೀವಿಗಳಿಗೆ ಆಸರೆಯಾಗುವ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ.

ಬಿ.ಎಸ್.ನ್ಯಾಮೇಗೌಡ

ಏನಿದು ಪ್ರಕರಣ?: ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಚಾಲಕರಿಗೆ, ಟ್ಯಾಕ್ಸಿ ಖರೀದಿಸಿ ಸ್ವಯಂ ಉದ್ಯೋಗ ಕಂಡುಕೊಳ್ಳಲು ಕೆಎಂಡಿಸಿ ತಲಾ 3 ಲಕ್ಷ ರೂ. ಸಬ್ಸಿಡಿ ನೀಡುತ್ತದೆ. ಉಳಿದ ಮೊತ್ತವನ್ನು ಫಲಾನುಭವಿ ಬ್ಯಾಂಕ್‍ನಿಂದ ಸಾಲದ ರೂಪದಲ್ಲಿ ಪಡೆದುಕೊಳ್ಳಬೇಕು.

ಗದಗ ಜಿಲ್ಲೆಯಲ್ಲಿ 2018–19ನೆ ಸಾಲಿನಲ್ಲಿ ಈ ಯೋಜನೆಯಡಿ 25 ಫಲಾನುಭವಿಗಳು ಆಯ್ಕೆಯಾಗಿದ್ದರು. ಆದರೆ, ಸಬ್ಸಿಡಿ ಬಿಡುಗಡೆ ಮಾಡಲು ನಿಗಮದ ವ್ಯವಸ್ಥಾಪಕರು, ತಮ್ಮದೇ ಕಚೇರಿಯ ಕಂಪ್ಯೂಟರ್ ಆಪರೇಟರ್ ಅವರನ್ನು ಮಧ್ಯವರ್ತಿಯನ್ನಾಗಿ ಬಳಸಿಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ನಿರಾಕರಿಸಿದವರ ‘ಚೆಕ್’ಗಳನ್ನು ಇವರಿಬ್ಬರೂ ಸೇರಿ ತಡೆಹಿಡಿದಿದ್ದರು ಎನ್ನುವ ದೂರುಗಳು ಕೇಳಿಬಂದಿತ್ತು.

ಸಾಲ ಮಾಡಿ, ಟ್ಯಾಕ್ಸಿ ಖರೀದಿಸಲು ಮುಂದಾದ ಫಲಾನುಭವಿಗಳು ಸಬ್ಸಿಡಿ ಮೊತ್ತಕ್ಕಾಗಿ 6 ತಿಂಗಳಿಂದ ನಿಗಮದ ಕಚೇರಿಗೆ ಅಲೆದು ಸುಸ್ತಾಗಿದ್ದರು. 3 ಲಕ್ಷ ಸಬ್ಸಿಡಿ ಮೊತ್ತದ ಚೆಕ್ ನೀಡಬೇಕಾದರೆ, 40 ಸಾವಿರ ಲಂಚ ನೀಡಲೇಬೇಕು ಎಂಬ ಷರತ್ತನ್ನು ಅಧಿಕಾರಿ ಫಲಾನುಭವಿಗಳ ಮುಂದಿಟ್ಟಿದ್ದರು. ಅಧಿಕಾರಿಯ ವರ್ತನೆಯಿಂದ ಬೇಸತ್ತ ಫಲಾನುಭವಿಯಲ್ಲಿ ಒಬ್ಬರಾದ ವ್ಯಕ್ತಿ, ಎಸಿಬಿಗೆ ದೂರು ಸಲ್ಲಿಸಿದ್ದರು.

ಈ ದೂರು ಆಧರಿಸಿ, ಬೆಳಗಾವಿ ವಲಯದ ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ಅವರು ಡಿವೈಎಸ್ಪಿ ಎನ್.ವಾಸುದೇವರಾಮ್ ನೇತೃತ್ವದ ಎಸಿಬಿ ತನಿಖಾಧಿಕಾರಿಗಳ ತಂಡ ರಚಿಸಿದ್ದು, ಮೇ 25ರಂದು ದಾಳಿ ನಡೆಸಿ, ದೂರುದಾರನಿಂದ ಆರೋಪಿಗಳು ಲಂಚದ ಹಣ ಪಡೆಯುವ ವೇಳೆ ವಶಕ್ಕೆ ಪಡೆದಿದ್ದರು. ನಂತರ ನಿಗಮದ ವ್ಯವಸ್ಥಾಪಕ ಮತ್ತು ಕಂಪ್ಯೂಟರ್ ಆಪರೇಟರ್ ಅಮಾನತುಗೊಂಡಿದ್ದರು.

ಇದರ ಬೆನ್ನಲ್ಲೇ, ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದಾಗ ಮಹಾ ವಂಚನೆ ಬೆಳಕಿಗೆ ಬಂತು. ಒಟ್ಟು 25 ಫಲಾನುಭವಿಗಳಿಗೆ ಸೇರಿದ ಲಕ್ಷಾಂತರ ಮೊತ್ತದ ಸಬ್ಸಿಡಿ ಚೆಕ್‍ಗಳನ್ನು ವಿತರಿಸದೆ ಹಾಗೆಯೇ ಇಟ್ಟುಕೊಂಡಿರುವುದು ಗಮನಕ್ಕೆ ಬಂದಿತ್ತು. ಬಳಿಕ ಜೂ.8ರಂದು ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ಸೂಚನೆಯಂತೆ, ಎಸಿಬಿ ಅಧಿಕಾರಿಗಳು ಮತ್ತು ನಿಗಮದ ಪ್ರಭಾರ ಅಧಿಕಾರಿ ಅಕ್ಬರಸಾಬ್ ಕುರ್ತಕೋಟಿ ಅವರ ಸಮ್ಮುಖದಲ್ಲಿ ಎಲ್ಲ ಫಲಾನುಭವಿಗಳಿಗೆ ಏಕಕಾಲದಲ್ಲಿ ಸಬ್ಸಿಡಿ ಚೆಕ್ ವಿತರಣೆ ನಡೆಯಿತು.

ಪ್ರಶಂಸೆ: ಎಸಿಬಿ ಎಸ್ಪಿ ಬಿ.ಎಸ್.ನ್ಯಾಮೇಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸುವಂತೆ ಮಾಡಿರುವ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಭ್ರಷ್ಟಾಚಾರ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿಯೇ ಎಸಿಬಿ ತಂಡ ಕಾರ್ಯ ನಿರ್ವಹಿಸುತ್ತಿದೆ. ಬರೀ ಕೆಎಂಡಿಸಿ ಮಾತ್ರವಲ್ಲ, ಯಾವುದೇ ಇಲಾಖೆಯಲ್ಲೂ ಲಂಚ ಸ್ವೀಕಾರ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ದೂರು ಬಂದಲ್ಲಿ ಕಾನೂನುರೀತಿಯ ಕ್ರಮಕ್ಕೆ ಬದ್ಧ.

-ಬಿ.ಎಸ್.ನ್ಯಾಮೇಗೌಡ, ಎಸ್ಪಿ, ಎಸಿಬಿ, ಬೆಳಗಾವಿ ವಲಯ

ಕಳೆದ ಎರಡು ವರ್ಷಗಳಿಂದ ಈ ಯೋಜನೆಯ ಫಲಾನುಭವಿ ಆಗಲು ಕಚೇರಿಗೆ ಅಲೆಯುತ್ತಿದ್ದೆ. ಇಲ್ಲಿನ ಸ್ಥಳೀಯ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟ ಕಾರಣ ನಮಗೆ ಈ ಯೋಜನೆ ದೊರೆಯುವುದಿಲ್ಲ ಎನ್ನುವ ಭಾವನೆ ಮೂಡಿತು. ಆದರೆ, ಎಸಿಬಿ ಕಾರ್ಯಾಚರಣೆಯಿಂದ ನಮಗೆ ನ್ಯಾಯ ದೊರೆತಿದೆ.

-ಮುಬಾರಕ್ ಪಾಷ(ಹೆಸರು ಬದಲಾಯಿಸಲಾಗಿದೆ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X