Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಮ್ಮ ಬಂಕರ್‌ಗೆ ಹಿಂದಿರುಗಿ: ಡೊನಾಲ್ಡ್...

ನಿಮ್ಮ ಬಂಕರ್‌ಗೆ ಹಿಂದಿರುಗಿ: ಡೊನಾಲ್ಡ್ ಟ್ರಂಪ್‌ಗೆ ಸಿಯಾಟಲ್ ಮೇಯರ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ12 Jun 2020 10:13 PM IST
share
ನಿಮ್ಮ ಬಂಕರ್‌ಗೆ ಹಿಂದಿರುಗಿ: ಡೊನಾಲ್ಡ್ ಟ್ರಂಪ್‌ಗೆ ಸಿಯಾಟಲ್ ಮೇಯರ್ ತಿರುಗೇಟು

ಸಿಯಾಟಲ್ (ಅಮೆರಿಕ), ಜೂ. 12: ಅಮೆರಿಕದ ಪಶ್ಚಿಮದ ನಗರ ಸಿಯಾಟಲ್‌ನಲ್ಲಿ ಪ್ರತಿಭಟನಕಾರರು ನಿರ್ಮಿಸಿರುವ ‘ಪೊಲೀಸ್-ಮುಕ್ತ ಸ್ವಾಯತ್ತ ವಲಯ’ದ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಬಳಿಕ, ಟ್ರಂಪ್ ಮತ್ತು ಸಿಯಾಟಲ್ ಮೇಯರ್ ಜೆನ್ನಿ ಡರ್ಕನ್ ನಡುವಿನ ಜಗಳ ಉಲ್ಬಣಿಸಿದೆ. ‘‘ನೀವು ನಿಮ್ಮ ಭೂಗತ ಬಂಕರ್‌ಗೆ ಹಿಂದಿರುಗಿ’’ ಎಂದು ಮೇಯರ್ ಅಮೆರಿಕ ಅಧ್ಯಕ್ಷರಿಗೆ ಹೇಳಿದ್ದಾರೆ.

ಇತ್ತೀಚೆಗೆ ಪೊಲೀಸ್ ಬಂಧನದ ವೇಳೆ ಕರಿಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಮೃತಪಟ್ಟ ಬಳಿಕ, ಜನಾಂಗೀಯ ತಾರತಮ್ಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಮತ್ತು ಕಚೇರಿ ಶ್ವೇತಭವನದ ಹೊರಗೆಯೂ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಗುಪ್ತದಳದ ಸಿಬ್ಬಂದಿ ಡೊನಾಲ್ಡ್ ಟ್ರಂಪ್‌ರನ್ನು ಭದ್ರತೆಯ ದೃಷ್ಟಿಯಿಂದ ಶ್ವೇತಭವನದ ಭೂಗತ ಬಂಕರ್‌ಗೆ ಕರೆದೊಯ್ದಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸಿಯಾಟಲ್ ಮೇಯರ್ ಇವೇ ವರದಿಗಳನ್ನು ಉಲ್ಲೇಖಿಸಿ ‘ಬಂಕರ್’ ಎಂದು ಹೇಳಿದ್ದಾರೆ.

ಸಿಯಾಟಲ್ ನಗರದಲ್ಲಿ ‘ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ’ ಎಂದು ಬಣ್ಣಿಸಲಾದ ವಲಯವೊಂದನ್ನು ಸ್ಥಾಪಿಸಲು ಪ್ರದರ್ಶನಕಾರರು ಮತ್ತು ನಗರದ ಪೊಲೀಸ್ ಇಲಾಖೆಯ ನಡುವೆ ಒಮ್ಮತ ಏರ್ಪಟ್ಟಿತ್ತು. ಇದನ್ನು ರದ್ದುಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು.

‘‘ನಿಮ್ಮ ನಗರವನ್ನು ನೀವು ವಾಪಸ್ ಪಡೆದುಕೊಳ್ಳಿ. ನಿಮ್ಮಿಂದಾಗದಿದ್ದರೆ, ನಾನು ಮಾಡುತ್ತೇನೆ’’ ಎಂಬುದಾಗಿ ಸಿಯಾಟಲ್ ಮೇಯರ್ ಜೆನ್ನಿ ಡರ್ಕನ್ ಮತ್ತು ವಾಶಿಂಗ್ಟನ್ ರಾಜ್ಯದ ಗವರ್ನರ್ ಜೇ ಇನ್‌ಸ್ಲೀ ಅವರಿಗೆ ಟ್ರಂಪ್ ಗುರುವಾರ ಮಾಡಿದ ಟ್ವೀಟ್‌ಗಳಲ್ಲಿ ಎಚ್ಚರಿಕೆ ನೀಡಿದ್ದರು. ಅವರಿಬ್ಬರೂ ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷಕ್ಕೆ ಸೇರಿದವರಾಗಿದ್ದಾರೆ.

ಅದೂ ಅಲ್ಲದೆ, ಪ್ರತಿಭಟನಕಾರರನ್ನು ಟ್ರಂಪ್, ‘ಸಿಯಾಟಲನ್ನು ವಶಪಡಿಸಿಕೊಂಡ ಭಯೋತ್ಪಾದಕರು’ ಎಂಬುದಾಗಿ ಬಣ್ಣಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮೇಯರ್ ಜೆನ್ನಿ ಡರ್ಕನ್, ‘‘ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ. ನೀವು ನಿಮ್ಮ ಬಂಕರ್‌ಗೆ ಹಿಂದಿರುಗಿ’’ ಎಂದು ತಿರುಗೇಟು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X