Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂಜೂರಿನಲ್ಲಿ 13ನೇ ಶತಕದ ತುಳು ಶಾಸನ:...

ಕುಂಜೂರಿನಲ್ಲಿ 13ನೇ ಶತಕದ ತುಳು ಶಾಸನ: ಇತಿಹಾಸ ಸಂಶೋಧಕರಿಂದ ಓದುವ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ12 Jun 2020 11:25 PM IST
share
ಕುಂಜೂರಿನಲ್ಲಿ 13ನೇ ಶತಕದ  ತುಳು ಶಾಸನ: ಇತಿಹಾಸ ಸಂಶೋಧಕರಿಂದ ಓದುವ ಪ್ರಯತ್ನ

ಪಡುಬಿದ್ರಿ: ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಮುಂಭಾಗದಲ್ಲಿ ಗೋಪುರದ ಇಕ್ಕೆಲಗಳಲ್ಲಿ  ಇದ್ದ ಎರಡು "ತುಳು ಲಿಪಿಯಲ್ಲಿ ಬರೆದ ತುಳುಭಾಷೆಯ" 13 ನೇ ಶತಮಾನ ಎಂದು ಹೇಳಲಾಗುವ ಶಾಸನಗಳನ್ನು ಇತಿಹಾಸ ಸಂಶೋಧಕ ಬಂಟಕಲ್ಲಿನ ಸುಭಾಸ್ ನಾಯಕ್ ಅವರು ಓದುವ ಪ್ರಯತ್ನ ಮಾಡಿದ್ದಾರೆ.

ಕಾಮಗಾರಿ ವೇಳೆ ಸಿಮೆಂಟ್ ಬಿದ್ದು ಲಭ್ಯ ಅಕ್ಷರಗಳೂ ಅಸ್ಪಷ್ಟವಾಗಿ ಓದಲಾಗದ ಸ್ಥಿತಿಯಲ್ಲಿದೆ. ಆದರೆ ಕಾಣುವ ಅಕ್ಷರಗಳನ್ನು ಗಮನಿಸಿದಾಗ ಅದು ತುಳು ಲಿಪಿಯ ಶಾಸನವೆಂದು ನಾಯಕ್ ಹೇಳುತ್ತಾರೆ. ಇನ್ನೊಂದು ಶಾಸನವು ದೇವಳದ ಈಶಾನ್ಯದಲ್ಲಿದೆ. ಇದು ಕೂಡಾ ಬಹುತೇಕ ಅಳಿಸಿಹೋಗಿದೆ. ಕೆಲವು ಅಕ್ಷರಗಳು ಅಳಿಸಿ ಹೋಗಿದ್ದರೂ ಓದಲು ಸಾಧ್ಯವಾಗುತ್ತದೆ. ಈ ಕಲ್ಬರಹದ ಮೇಲೆ ಶಿವಲಿಂಗ ಮತ್ತು ಸೂರ್ಯ - ಚಂದ್ರರ ಉಬ್ಬುಶಿಲ್ಪವಿದೆ. ಸ್ವಸ್ತಿಶ್ರೀಃ ಎಂದು ಪ್ರಾರಂಭವಾಗುವ ಬರಹವು 'ಮೀನಸ್ಯ' ಅಂದರೆ ಮೀನಮಾಸದಲ್ಲಿ. ಮುಂದೆ 'ವಲ್ಲ ಮಹಾದೇವರ  ಕಾಲನ್ಟ್ ' ಎಂದು  ಓದಬಹುದಾಗುತ್ತದೆ. ವಲ್ಲ ಮಹಾದೇವರ ಕಾಲನ್ಟ್ ಎಂದರೆ ವಲ್ಲ ಮಹಾದೇವರ ಕಾಲದಲ್ಲಿ ಎಂದಾಗಿದೆ ಎನ್ನುತ್ತಾರೆ. 

ಬಳಿಕ ಕೆಳಗಿನ ಸಾಲಿನಲ್ಲಿ ಇರುವ ಅಕ್ಷರಗಳು ಅಸ್ಪಷ್ಟವಾಗಿವೆ. ಪಳಂ ತುಳುವಾಗಿರುವುದರಿಂದ ಶಬ್ದ ಸಂಯೋಜನೆ ಕಷ್ಟಸಾಧ್ಯ. ಅನಂತರದ ಒಂದು ಸಾಲಿನಲ್ಲಿ 'ತುನರ ಪುರತ್ ನಯೆ' ಮುಂದುವರಿದರೆ 'ಮುದೆಲಾಯ' ಮುಂತಾದ ಶಬ್ದಗಳು ಸಿಗುತ್ತವೆ. ಇನ್ನುಳಿದಂತೆ ಅಕ್ಷರಗಳು ಒಂದೋ ಸಿಮೆಂಟ್ ಬಿದ್ದು ಅಥವಾ ಸವೆದು ಹೋಗಿದೆ. ಆದರೆ ಇದು ತುಳು ಭಾಷೆಯ ತುಳುಲಿಪಿಯಲ್ಲಿರುವ ಶಾಸನವಾದುದರಿಂದ ಮುಂದಿನ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ  ನಾಯಕ್ .

ಈ ಶಾಸನದಲ್ಲಿ ಉಲ್ಲೇಖವಾಗಿರುವ 'ವಲ್ಲ ಮಹಾದೇವ' ನು ಆಳುಪರ ಅರಸ ವಲ್ಲಭ ದೇವನೇ ಆಗಿದ್ದರೆ ಈ ಶಾಸನದ ಕಾಲ ಕ್ರಿ.ಶ. 1230 - 1250. ಅಂದರೆ 13 ನೇ ಶತಮಾನ ಎಂದು ಸುಭಾಸ್ ನಾಯಕ್ ಹೇಳಿದ್ದಾರೆ. ಇವರು ತುಳು ಶಾಸನ ಓದುವ ಬೆರಳೆಣಿಕೆಷ್ಟು ವಿದ್ವಾಂಸರಲ್ಲಿ ಒಬ್ಬರು. ಕ್ಷೇತ್ರಕಾರ್ಯದಲ್ಲಿ ಗುರುಪ್ರಸಾದ ನಾಯಕ್ ಸಹಕರಿಸಿದ್ದರು. ದೇವಸ್ಥಾನದ ಮ್ಯಾನೇಜರ್ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. 

ಕುಂಜೂರಿಗೆ ಬಹಳಷ್ಟು ಧಾರ್ಮಿಕ, ಐತಿಹಾಸಿಕ, ಸಾಂಸ್ಕೃತಿಕ ಹಿನ್ನೆಲೆ ಇದೆ. ಈ ಶಾಸನದ ಅಧ್ಯಯನಕ್ಕೆ ಬೇಕಾದ ಲಭ್ಯ ಮಾಹಿತಿಗಳನ್ನು ಸ್ಥಳೀಯರು ಒದಗಿಸಲು ಅಣಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X