Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ಷ ಕಳೆದರೂ ಸಿಗದ ನೇಮಕಾತಿ ಪತ್ರ:...

ವರ್ಷ ಕಳೆದರೂ ಸಿಗದ ನೇಮಕಾತಿ ಪತ್ರ: ಅತಂತ್ರ ಸ್ಥಿತಿಯಲ್ಲಿ ಪಿಯು ಉಪನ್ಯಾಸಕರು

ವಾರ್ತಾಭಾರತಿವಾರ್ತಾಭಾರತಿ12 Jun 2020 11:38 PM IST
share
ವರ್ಷ ಕಳೆದರೂ ಸಿಗದ ನೇಮಕಾತಿ ಪತ್ರ: ಅತಂತ್ರ ಸ್ಥಿತಿಯಲ್ಲಿ ಪಿಯು ಉಪನ್ಯಾಸಕರು

ತುಮಕೂರು, ಜೂ.11: ಪಿಯು ಉಪನ್ಯಾಸಕರಾಗಿ ಎಲ್ಲಾ ರೀತಿಯಲ್ಲಿ ಆಯ್ಕೆಗೊಂಡು ದಾಖಲಾತಿಗಳ ಪರಿಶೀಲನೆ ನಡೆದು ಒಂದು ವರ್ಷ ಕಳೆದರೂ, ಅವರಿಗೆ ನೇಮಕಾತಿ ವಿತರಿಸುವಲ್ಲಿ ಶಿಕ್ಷಣ ಇಲಾಖೆ ಇಂದು, ನಾಳೆ ಎಂದು ಮೀನಾಮೇಷ ಎಣಿಸುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚು ಪಿಯು ಶಿಕ್ಷಕರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

2015ರಲ್ಲಿ ಅಂದಿನ ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಪಿಯು ಶಿಕ್ಷಣ ಮಂಡಳಿ 15-05-2015ರಲ್ಲಿ 1069 ಪಿಯು ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ನಂತರ ಹೈದ್ರಾಬಾದ್ ಕರ್ನಾಟಕ ವಿಶೇಷ ಮೀಸಲಾತಿ ಸೇರ್ಪಡೆಗೊಂಡು ಹೆಚ್ಚುವರಿ 134 ಹುದ್ದೆಗಳನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಇದು 30-04-2016ಕ್ಕೆ ಮುಕ್ತಾಯಗೊಂಡಿತ್ತು. ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸೇರಿದಂತೆ ಹಲವು ರೀತಿಯ ಅಡೆ ತಡೆಗಳು ಹಾಗೂ ಲೋಪದೋಷಗಳನ್ನು ಸರಿಪಡಿಸಿಕೊಂಡು 05-12-2018ರಂದು ಆರ್ಹತಾ ಪರೀಕ್ಷೆ ನಡೆಸಿ, ಅದರಲ್ಲಿ ಫಲಿತಾಂಶಗಳನ್ನು ಆಧರಿಸಿ, ಆರ್ಹರನ್ನು ಗುರುತಿಸಿ, 19-02-2019ರಿಂದ ಅವರುಗಳ ದಾಖಲಾತಿ ಪರಿಶೀಲನೆ ನಡೆದಿರುತ್ತದೆ.

ಆದರೆ ದಾಖಲಾತಿಗಳ ಪರಿಶೀಲನೆ ನಡೆದು ಒಂದು ವರ್ಷ ಕಳೆದರೂ ಇದುವರೆಗೂ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸುವ ಕೆಲಸವನ್ನು ಪಿಯು ಶಿಕ್ಷಣ ಇಲಾಖೆ ಮಾಡಿಲ್ಲ. ಹತ್ತಾರು ಬಾರಿ ಆಯ್ಕೆ ಪಟ್ಟಿಯಲ್ಲಿರುವ ಆರ್ಹ ಪಿಯು ಶಿಕ್ಷಕ ಆಕಾಂಕ್ಷಿಗಳು ಶಿಕ್ಷಣ ಇಲಾಖೆಯ ಸಚಿವರಾದ ಎಸ್.ಸುರೇಶ್ ಕುಮಾರ್, ವಿರೋಧ ಪಕ್ಷಗಳ ನಾಯಕರುಗಳ ಮನೆ ಬಾಗಿಲಿಗೆ ಅಲೆದು, ನಾನಾ ರೀತಿಯಲ್ಲಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು ಅರ್ಹ ಪಿಯು ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.

ಕಳೆದ ಆರು ವರ್ಷಗಳಿಂದ ಇನ್ನೇನು ಪಿಯು ಉಪನ್ಯಾಸಕನಾಗಿ ನೇಮಕಗೊಳ್ಳುತ್ತೇನೆ ಎಂಬ ಆಸೆಯಲ್ಲಿ ಕೆಲವರು ಮದುವೆಯನ್ನು ಮುಂದೂಡುತ್ತಾ ಬಂದರೆ, ಮತ್ತೆ ಕೆಲವರು ಇದನ್ನು ನಂಬಿ ಅತಿಥಿ ಉಪನ್ಯಾಸಕರಾಗಿಯೂ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ವಯಸ್ಸಿನ ಮಿತಿ ಮೀರುತಿದೆ. ಇದರಿಂದ ಹಲವಾರು ಸಂಕಷ್ಟಗಳನ್ನು ಪಿಯು ಶಿಕ್ಷಕರಾಗಿ ಆಯ್ಕೆಯಾಗಿ ನೇಮಕಾತಿ ಪತ್ರಕ್ಕಾಗಿ ಅಲೆದಾಡುತ್ತಿರುವ ಶಿಕ್ಷಕರದ್ದಾಗಿದೆ. ಪಿಯು ಶಿಕ್ಷಣ ಮಂಡಳಿ ಮತ್ತು ರಾಜಕಾರಣಿಗಳ ನಡುವಿನ ಮುಸುಕಿನ ಗುದ್ದಾಟವೇ ಈ ರೀತಿಯ ವಿಳಂಬಕ್ಕೆ ಕಾರಣ ಎಂಬುದು ಹಲವು ಅಭ್ಯರ್ಥಿಗಳ ಅಭಿಪ್ರಾಯವಾಗಿದೆ.

ಪ್ರಸಕ್ತ ಸಾಲಿನ ಅಂದರೆ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳ ಸ್ಥಿತಿಗತಿ, ಇನ್ನಿತರ ಮಾಹಿತಿ ಕಲೆ ಹಾಕಲು ಪ್ರವಾಸದಲ್ಲಿರುವ ಶಿಕ್ಷಣ ಸಚಿವರು ಪಿಯು ಶಿಕ್ಷಕರ ನೇಮಕಾತಿ ಪತ್ರ ವಿತರಿಸುವ ನಿಟ್ಟಿನಲ್ಲಿಯೂ ಗಮನಹರಿಸಬೇಕೆಂಬುದು ಉದ್ಯೋಗಾಕಾಂಕ್ಷಿಗಳ ಒತ್ತಾಯವಾಗಿದೆ.

ಕಳೆದ 6 ವರ್ಷಗಳಿಂದ ಪಿಯು ಶಿಕ್ಷಕನಾಗಿ ನೇಮಕಗೊಳ್ಳುತ್ತೇನೆ ಎಂಬ ಕಾರಣದಿಂದ ಬೇರೆಲ್ಲೂ ಗಮನಹರಿಸಿಲ್ಲ. ನಮಗೆ ವಯಸ್ಸಾಗುತ್ತ ಬಂದಿದೆ. ಈಗಲೇ ಸಾಕಷ್ಟು ವಿಳಂಬವಾಗಿದ್ದು, ಸರಕಾರ ಪಿಯು ಶಿಕ್ಷಣದ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ದಾಖಲಾತಿ ಪರಿಶೀಲನೆಯಾಗಿರುವ ಅಭ್ಯರ್ಥಿಗಳೀಗೆ ನೇಮಕಾತಿ ಪತ್ರ ವಿತರಿಸಿ, ನಮನ್ನು ಸಂಕಷ್ಟದಿಂದ ಪಾರು ಮಾಡಿ

-ಜಯರಾಮು ಲಿಂಗದಹಳ್ಳಿ ಪಾವಗಡ ತಾಲೂಕು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X